Skip to main content

Posts

ಎರಡರ ಸ್ವಗತ

  ಇದೊಂದು ಅನಾದಿ ಕಾಲದಿಂದ ನಡೆದು ಬಂದ  ದೌರ್ಜನ್ಯ,ದಬ್ಬಾಳಿಕೆ,ಶೋಷಣೆಯ ಕಥೆ.ಕರುಣೆಯಿಲ್ಲದ ಈ ಸಮಾಜವು ಒಂದು ಪ್ರತಿಭೆಯನ್ನು ಹೇಗೆ ತನ್ನ ಕಪಿಮುಷ್ಠಿಯಲ್ಲಿ ಅದುಮಿ ಹಿಡಿದಿಟ್ಟುಕೊಳ್ಳಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆ.   ನಾನು "ಎರಡು".ಒಂದು ಒಂದು ಸೇರಿ ಎರಡಾದ್ದರಿಂದ ನನ್ನನ್ನು ಏಕಾತ್ಮಜ ಎಂದೂ ಕರೆಯಬಹುದು.ವಸ್ತುಶಃ ನನ್ನಲ್ಲಿ ಯಾವ ಲೋಪದೋಷಗಳಿಲ್ಲದೆ ಹೋದರೂ ವಿನಾಕಾರಣ ನನ್ನನ್ನು ಹೀನಾಯವಾಗಿ ನೋಡಲಾಗುತ್ತದೆ.ಅಷ್ಟೇ ಅಲ್ಲದೆ ಸ್ವತಂತ್ರವಾಗಿ ಗೌರವಾನ್ವಿತರಾಗಿರುವ ಯಾರಾದರೂ ನನ್ನೊಡನೆ ಸಂಬಂಧ ಬೆಳೆಸಿಕೊಂಡರೆ ಅವರ ಗೌರವಕ್ಕೂ ಕಪ್ಪು ಮಸಿ ಬಳಿಯಲಾಗುತ್ತದೆ.   ಈಗ ನೀವೇ ನೋಡಿ  ಒಂದೇ  ಮಾತಿನಲ್ಲಿ ಹೇಳುವುದಾದರೆ,ಅಂಕೆ ಸಂಖ್ಯೆಗಳಲ್ಲಿ ೧ ಯಾವತ್ತೂ ರಾಜ.ಮೊದಲಿಗ,ಯಾರಿಂದಲೂ ಪೂರ್ಣವಾಗಿ ಭಾಗಿಸಲ್ಪಡದ ಆದರೆ  ಎಲ್ಲ ಸಂಖ್ಯೆಗಳನ್ನೂ ಭಾಗಿಸಬಲ್ಲ ತಾಕತ್ತು ಇದಕ್ಕಿದೆ.ಆದರೆ ಅರಸನ ಮುಂದಿರಬೇಡ,ಕತ್ತೆಯ ಹಿಂದಿರಬೇಡ ಎಂಬ ನಾಣ್ಣುಡಿಗೆ ವ್ಯತಿರಿಕ್ತವೆಂಬಂತೆ ನಾನು ಈ ರಾಜ ೧ ರ ಮುಂದೆ ,ಆ ಥರ್ಡ್ ಕ್ಲಾಸ್ ೩ ರ ಹಿಂದೆ ಕೂತಿದ್ದೇನೆ.ಈ ಜನ್ಮ ಕುಂಡಲಿಯ ದೋಷದಿಂದಲೇ ನಾನು ಯಾರ ಅಕ್ಕಪಕ್ಕ ಹೋಗಿ ಕೂತರೂ ಅವರ ವಾಸ್ತುಶಾಸ್ತ್ರ ಅಲ್ಲೋಲಕಲ್ಲೋಲವಾಗುತ್ತದೆ.  ಸಾಮಾಜಿಕ ಜೀವನದಲ್ಲೂ ಮೊದಲನೇ ಮದುವೆಗಿದ್ದಷ್ಟು ಮರ್ಯಾದೆ ಎರಡನೇಯದಕ್ಕಿಲ್ಲ.ಎದುರಿಗೆ ಎಲ್ಲರೂ ಸಂತೋಷದಿಂದಿದ್ದರೂ ಒಳಗೊಳಗೇ   ಕುಹಕವಾಡುತ್ತಾರೆ.ಅದೇ ಮದುವೆ ಮಂಟಪದಲ್ಲಿ ಯಾರಾದ್ರೂ
Recent posts

ಆಪೀಸಾಯಣ

ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ  ಬಣ್ಣದಲ್ಲಿ ಬರೆದವು ಅವರ ಹೆಸರುಗಳು. ದೇವಾದಿದೇವತೆಗಳು ಸಭೆಯನ್ನು ನಡೆಸಿ ಸಭೆಯೊಳಗೆ ಸು ಮಧು ರ ಕನ್ನಡವ ಬಡಿಸಿ || ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ ಬಂದು ಕೂತಿಹರೆಲ್ಲ tatasky ODC ||               ಕೃಷ್ಣ ನಿಹನಿಲ್ಲಿ  ಇಹನು   ರಘು-ರಾಮ                     ಮಂಜುನಾಥ ರು ತ್ರಿಮೂರ್ತಿಯಲಿ ಹರಸಿರುವ ಧಾಮ ||                     ಪಾವನ-ಪುನೀತರಾಗಿ ಕೇಳಿ ಮೋಹನ ನ ಬಾನ್ಸುರಿ                     ಸ್ವಪ್ನ ದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... || ವಿಘ್ನ ದಿಂ ಕಾಯುತಿಹ ದ್ವಾರದಲೇ ಬೆನಕ ಎಲ್ಲ ದೇವರಿಗೂ ಶರಣು ನಮ್ಮ ಗುರು ಗಳ ತನಕ ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ ಹರುಷ ದಲಿ ಕಳಿಸುವನು ಮೇಘ ಸಂದೇಶ ||           ದೇವತೆಗಳಿಗೂ ಇಹುದು ನಮ್ಮ ನೋಡುವ ಇರಾದೆ           ಪ್ರಿಯ ವದನರಾಗಿ ಬಂದಿಹರು ಲಕ್ಷ್ಮಿ ಮತ್ತು ರಾಧೆ           ಶಾರದೆ ಯ ಆಶೀರ್ವಾದವೇ ನಮಗೆ ಕತ್ತಲಲಿ ದೀಪ್ತಿ ವಿಜಯಕ್ಕೆ ಸ್ಪೂರ್ತಿ          ಒಂದು ನಿಮಿಷ... ನನ್ನ ಕಾವ್ಯ ವಾಗಿಲ್ಲ ಪೂರ್ತಿ!!!                               ಕನ್ನಡಿಗರು ನಾವು... ಕಾಯಕಕ್ಕೆ ಸೈ ವಿಶ್ವಾಸಕ್ಕೆ ಜೈ ||                       

ನೋಡಿ ಸ್ವಾಮೀ ನಾವಿರೋದೇ ಹೀಗೆ

======================================== ನೋಡೀ... ಸ್ವಾಮೀ.... ನಾವಿರೋದೆ ಹೀಗೆ ======================================== ನಾನು ಯಾರು ? ಹೇಗೆ ? ಯಾಕೆ ?? ನೂರು ಪ್ರಶ್ನೆ ಎಸೆದೆ ಬಂದ ಉತ್ತರಗಳ ಕೂಡಿ ಕವನವೊಂದ ಹೊಸೆದೆ| ಬರೆಯುತಿರುವೆ ಈ ಕವನದಿ ನಾನು ನನ್ನ ಬಗ್ಗೆ ನೋಡೀ... ಸ್ವಾಮೀ.... ನಾವಿರೋದೆ ಹೀಗೆ|| ಎಂಜಿನಿಯರಿಂಗ್ ಓದಿ ಟೀಸಿಯೆಸ್ಸಿನಲ್ಲಿ ದುಡಿಮೆ ಕೃಷ್ಣವರ್ಣ ತಲೆಯ ಮೇಲೆ ಕೂದ್ಲು ಸ್ವಲ್ಪ ಕಡಿಮೆ ಕುಂದಾಪುರದವನು ಇರುವೆ ಬೆಂಗಳೂರಿನಾಗೆ ಹೋಯ್ ಮಾರಾಯ್ರೆ... ನಾವಿಪ್ಪುದೇ ಹೀಂಗೆ!! ಇಹುದು ನನಗೆ ಕವಿತೆ ಕವನ ಬರೆಯುವಂತ ಹುಚ್ಚು ಮೌನ ಕೂಡಿ ಬರದು ನನಗೆ ಮಾತು ಸ್ವಲ್ಪ ಹೆಚ್ಚು ಮನದ ಮಾತ ಹಾಕಿ ಬಿಡುವೆ ಪೇಪರಲ್ಲಿ ಗೀಚಿ ಪಳೆಯಾಚಿ ಮಾಮ್ಮಾ... ಹಾವೆ ಆಸುಚೆ ಅಶೀಚಿ ಇಡ್ಲಿ ಚಟ್ನಿ ದೋಸೆಯಂತು ನನ್ನ ಫೇವರಿಟ್ಟು ಊರು ಬಿಟ್ಟು ಓಡಿ ಬಿಡುವೆ ಕಂಡರೆ ಉಪ್ಪಿಟ್ಟು ಬ್ರೆಡ್ಡು ಬನ್ನು ಆಗೋದಿಲ್ಲ ಇಷ್ಟ ಪೂರಿ - ಬಾಜಿ देखिये... मै ऐसाहि हू माजि.....॥ ಬೇಳೆ ಸಾರು ಹಪ್ಪಳವಿರೆ ಅದುವೇ ಮೃಷ್ಟಾನ್ನ ಉಪ್ಪಿನಕಾಯ್ ಮಜ್ಜಿಗೆಯಿರಲೂಟವೆಷ್ಟು ಚೆನ್ನ! ಆಲೂಗಡ್ಡೆ ಪರಮಮಿತ್ರ ಇಷ್ಟ ಬಸಳೆ ನುಗ್ಗೆ ನೋಡೀ... ಸ್ವಾಮೀ.... ನಾವಿರೋದೆ ಹೀಗೆ ಚಾಕಲೇಟು ಬರ್ಫಿ ನೋಡೆ ಇರುವೆಯಾಗಿ ಬಿಡುವೆ ಜಾಮೂನನು ತಂದವರಿಗೆ ಒಲಿದು ವರವ ಕೊಡುವೆ ಹಣ್ಣಿನಲ್ಲಿ ಇಷ್ಟವೆನಗೆ ಮಾವ

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ  ರೊಟ್ಟಿಯಿಂದ ಶುರುಮಾಡಿ ಉಪ್ಪು ತುಪ್ಪ ಸೊಪ್ಪು ಎಲ್ಲವನ್ನೂ ಸರಿಯಾಗಿ ಹಾಕಿಕ

ಪಟ್ ಪಟ್ ಪಟಾಕಿ !!!

1)ಶರ್ಟಿಗೆ ಎರಡು ಮೀಟರ್ ಬಟ್ಟೆ ಯಾಕ್ರಿ ?? ಪಕ್ಕದ ಓಣಿ ಟೈಲರ್ ಒಂದೂವರೆ ಮೀಟರ್ ಸಾಕು ಎಂದ !!! ಎಂದು ಟೈಲರ್ ನನ್ನು ದಬಾಯಿಸಿದಾಗ ಅವರು ಹೇಳಿದ್ದು ಸರಿ ಆದರೆ ಅವರ ಮಗ ಎರಡನೇ ಕ್ಲಾಸ್ ನನ್ನ ಮಗ ಎಂಟನೆ ಕ್ಲಾಸ್ ಎಂದು ಟೈಲರ್ ಶಾಂತವಾಗಿ ಉತ್ತರಿಸಿದನು. 2)ನಿನಗೋಸ್ಕರ ಚಂದ್ರ - ತಾರೆ - ಚುಕ್ಕೆಗಳನ್ನು ಹೆಕ್ಕಿ ತರಲೇ?? ಎಂದ ಪ್ರಿಯತಮನಿಗೆ "ಅದೆಲ್ಲಾ ಬೇಡಾ  ಮಾರಾಯ ಬಾಯಾರಿಕೆ ಆತಿತ್ತ ಒಂದ್ ಬೊಂಡ (ಎಳನೀರು) ತೆಗೆದುಕೊಡು" ಎಂದಾಗ ಅವನು  "ಮರ ಸುಮಾರು ದೊಡ್ದುಂಟು ಮಾರಾಯ್ತಿ !!!!" ಎಂದು ತಬ್ಬಿಬ್ಬಾದನು. 3)ಸರಸದಲ್ಲಿರಲು ಏನೋ ತಮಾಷೆಗೆ  ನಾನು  "You are so Sweet" ಎಂದು ಹೇಳಿದ್ದನ್ನೇ ನನ್ನ ಶಾಂತಿ ಸೀರಿಯಸ್ಸಾಗಿ ತೆಗೆದುಕೊಂಡು ತಾನು ಕುಳಿತ ಜಾಗದ ಸುತ್ತ ಡಿಡಿಟಿಯ ರಂಗೋಲಿ ಹಾಕಿಕೊಂಡಳು. 4)ಕನ್ನಡದಿಂದ - ಚೈನೀಸ್ ಅನುವಾದ ಭಾಷೆಯ ಪುಸ್ತಕದಿಂದ ಉರು ಹೊಡೆದು ಬೀಜಿಂಗ್ ನ ತರಕಾರಿ ಮಾರುಕಟ್ಟೆಗೆ ಹೋಗಿ "ಸ್ಯಾನ್ ವೊಕ್ಯೊಸ್ಜ್  2kg" ಎಂದು ಕೇಳಿದೊಡನೆ "ಏಯ್ ಮಾಣಿ ಎರ್ಡ್ ಕೇಜೀ ಗುಂಬ್ಳಕಾಯಿ ತೆಕಬಾರಾ " ಎಂದು ಅಂಗಡಿಯ ಮಾಲಿಕನಾದ ಕುಂದಾಪುರದ ಶೀನಣ್ಣ ಬೊಬ್ಬೆ ಹೊಡೆದನು. 5)ಯಕ್ಷಗಾನ ದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾಗ ಅಭ್ಯಾಸಬಲದಿಂದ "ದುಷ್ಟಾ.. ನಿನ್ನ ಎರಡೂ ಕೈಗಳನ್ನು CUT ಮಾಡಿಬಿಡುತ್ತೇನೆ ಎಂದು ಅಬ್ಬರಿಸಿದ ಪಾತ್ರಧಾರಿಗೆ ತಾನು ಆಂಗ್ಲ ಭಾಷಾಪ್ರಯೋಗ

WELCOME TO KUNDAPUR !!!!!! - PART-III

"ಹ್ಜಬ್ದ್ಸ್ಕ್ಫ಼್ಜಒಇಗ್ತಿಎಬ್ಗ್ಕ್ಜ್ಬ್ದ್ವ್ವಿಹ್ಗಿದ್ಕ್ವ್ಶ್ದ್ಪ್ಫ಼್ವೆಒಗ್ [ ವ್ಪೆಗ್ಸ್ದ್ಜ್ಗ್ವ್೦ಗ್ [ ವ್ಜ್ಗ್ಸ್ದ್ಬ್ಲ್ವ್ [ ಒಸ್ರ್ಗ್" ಏನು ?? ಅರ್ಥ ಆಗಲಿಲ್ವಾ ?? ಸಂತೆಯ ಗೌಜಿ ಮಾರಾಯ್ರೆ ... ನನಗೂ ಸರಿಯಾಗಿ ಕೇಳಿಸುತ್ತಿಲ್ಲ . ಸ್ವಲ್ಪ ಹತ್ತಿರ ಹೋಗಿ ಕೇಳುವುದು ಒಳ್ಳೆಯದು . ಆಮೇಲೆ ಪಕ್ಕದಲ್ಲಿ ಕುಂಬಳಕಾಯಿ ಮಾರುತ್ತಿರುವವನ ಬೆಲೆ ಕೇಳಿ ಸೇಬು ಮಾರುವವನ ಹತ್ತಿರ ಬಂದು " ಎಂತದು ??? ಈಗ ಎಂಟು ರುಪಾಯಿ ಕಿಲೋ ಅಂತ ಬೊಬ್ಬೆ ಹಾಕಿದ್ರಿ " ಎಂದೆಲ್ಲ ಹೇಳಿದರೆ ಧರ್ಮದೇಟು ಬೀಳುವುದು ಖಂಡಿತ . " ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕಂಜಿದೊದೆಂತಯ್ಯ " ಎಂದು ದಾಸರು ಬರೆಯುವಾಗ ಅವರು  ಕುಂದಾಪುರದಲ್ಲೇ ಇದ್ದರೆಂದು ಕಾಣುತ್ತದೆ . ಸಂತೆಯೊಳಗೆ ಯಶಸ್ವಿಯಾಗಿ ವ್ಯಾಪಾರ ಮಾಡಿ ಬಂದರೆ ಅವನು ಅರಿಯದೆ ಒಂದು ಅವಧಾನ ಕಾರ್ಯಕ್ರಮ ಮಾಡಿ ಬಂದಂತೆ Photo courtesy : http://www.flickr.com/photos/palachandra/sets/72157622395311690/ ನೀವೇ ನೋಡಿ . ಒಂದು ವೇಳೆ ನಿಮಗೆ ಸೌತೇಕಾಯಿ ತೆಗೆದುಕೊಳ್ಳಬೇಕೆಂದುಕೊಳ್ಳಿ ............. ನಿಮ್ಮದು ಒಂದೇ ಪ್ರಶ್ನೆ .... ಹೋಯ್ ಸೌತೇಕಾಯ್ ಹೇಂಗ್ ಮಾರ್ರೆ .............. ಉತ್ತರಗಳು --- ಅಲ್ಲ ಲೋರಿ ಅನ್ ಲೋಡ್ ಆತಿತ್ತ ಮಾರ್ರೆ ........ ಕಳ್ಸಿ ಕೊಡ್ತೆ ...  ( ಭಟ್ಕಳದಿಂದ ಬಂದ ಬಟಾಟೆ ವ್ಯಾಪಾರಿ ಮೊಬೈಲಿನಲ್ಲಿ ) ಮುಂದಿನ್ ವಾರ ಕೊಡ್

WELCOME TO KUNDAPUR !!!!!! - PART-II

ಕೌಸಲ್ಯಾ ಸುಪ್ರಜಾರಾಮ ಪೂರ್ವಾ ಸಂಧ್ಯಾ ಪ್ರವರ್ತತೇ || ಉತ್ತಿಷ್ಟ ನರಶಾರ್ದೂಲ ಕರ್ತವ್ಯಂ ದೈವಮಾಹ್ನಿಕಮ್ || ಮನೆಗೆ ತಲುಪಿದೊಡನೆ ಅಮ್ಮ-ಅಪ್ಪನೊಂದಿಗೆ ಮೊದಲ ಸುತ್ತಿನ ಸೆಂಟಿಮೆಂಟುಗಳು ಮುಗಿದ ಮೇಲೆ ಒಮ್ಮೆ ಹೊರಬಂದು ಪ್ರಾತಃಕಾಲದ ಕುಂದಾಪುರ ದರ್ಶನ   ಮಾಡಿ ಬಂದೆನು. ಆ ದರ್ಶನದ ರನ್ನಿಂಗ್ ಕಾಮೆಂಟರಿ......... " ಪೆಟ್ರೋಲ್ ಬಂಕ್ ನಲ್ಲಿ ಟವೆಲ್ ಉಟ್ಟು ಬಸ್ ತೊಳೆಯುತ್ತಿರುವ ಕ್ಲೀನರ್ , ಅಶ್ವಥ್ಥ ಮರಕ್ಕೆ ಸುತ್ತು ಹಾಕುತ್ತಿರುವ ಜನರೇಶನ್ 3 , ನಡೆದು ಬಾರಯ್ಯಾ ssss ಭವಕಡಲಿಗೇ sss s ಪ್ರತಿದಿನ ಇದನ್ನೇ ಹಾಡುವ ಬೊಬ್ಬರ್ಯ ಕಟ್ಟೆಯ ಕ್ಯಾಸೆಟ್ಟು , ಹತ್ತಿದ ಸೈಕಲ್ಲನ್ನು ನಿಲ್ಲಿಸದೇ.... ನೆಲಕ್ಕೆ ಕಾಲು ತಾಗಿಸದೇ ಮನೆಯ ಬಾಗಿಲ ಬುಡಕ್ಕೇ ಪೇಪರ್ ಎಸೆಯುವ ಶಾರ್ಪ್ ಶೂಟರ್ ಪೇಪರಿನವನು , ಶಾಸ್ತ್ರಿ ಪಾರ್ಕಿನಲ್ಲಿ ಮುಂಜಾನೆ ಭಟ್ಕಳ ಬೆಂಗಳೂರಿನಿಂದ ಬಂದ ಹೂವಿಗೆ ನೀರು ಚಿಮುಕಿಸುತ್ತಿರುವ ಹೂವಿನ ವ್ಯಾಪಾರಿಗಳು , ಬಿಕೋ ಎನ್ನುತ್ತಿರುವ ರೋಡು ಹಾಗೂ ಅಂಗಡಿಯಲ್ಲಿ ಕೂತಿರುವ ನನ್ನ ಡ್ಯಾಡು. ಇಷ್ಟೇ." ಒಂದು ನಾಲ್ಕೈದು ವರ್ಷಗಳ ನಂತರ ಕುಂದಾಪುರಕ್ಕೆ ಯಾರಾದರೂ ಬಂದರೆ ಒಂದು ಬಾರಿ ತಾನು ಯಾವ ಊರಿಗೆ ಬಂದೆ ಎಂದು ಬೆಚ್ಚಿ ಬೀಳುವುದು ಸಹಜ. ಶಾಸ್ತ್ರಿ ಪಾರ್ಕಿನ ಮಧ್ಯ ಕದಲದೇ ನಿಂತಿರುವ ಶಾಸ್ತ್ರಿಗಳೊಬ್ಬರೇ ಈ ಎಲ್ಲಾ ಬದಲಾವಣೆಗಳಿಗೆ ಮೂಕ ಸಾಕ್ಷಿ. ಎಲ್ಲಿಯವರೆಗೆಂದರೆ ಶ್ರೀ ಬೊಬ್ಬರ್ಯನವರು ಕೂಡಾ ಹೊಸ RCC ಮನೆ ಕಟ್ಟಿಕೊಂಡಿದ್ದಾರೆ.