ಇದೊಂದು ಅನಾದಿ ಕಾಲದಿಂದ ನಡೆದು ಬಂದ ದೌರ್ಜನ್ಯ,ದಬ್ಬಾಳಿಕೆ,ಶೋಷಣೆಯ ಕಥೆ.ಕರುಣೆಯಿಲ್ಲದ ಈ ಸಮಾಜವು ಒಂದು ಪ್ರತಿಭೆಯನ್ನು ಹೇಗೆ ತನ್ನ ಕಪಿಮುಷ್ಠಿಯಲ್ಲಿ ಅದುಮಿ ಹಿಡಿದಿಟ್ಟುಕೊಳ್ಳಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆ. ನಾನು "ಎರಡು".ಒಂದು ಒಂದು ಸೇರಿ ಎರಡಾದ್ದರಿಂದ ನನ್ನನ್ನು ಏಕಾತ್ಮಜ ಎಂದೂ ಕರೆಯಬಹುದು.ವಸ್ತುಶಃ ನನ್ನಲ್ಲಿ ಯಾವ ಲೋಪದೋಷಗಳಿಲ್ಲದೆ ಹೋದರೂ ವಿನಾಕಾರಣ ನನ್ನನ್ನು ಹೀನಾಯವಾಗಿ ನೋಡಲಾಗುತ್ತದೆ.ಅಷ್ಟೇ ಅಲ್ಲದೆ ಸ್ವತಂತ್ರವಾಗಿ ಗೌರವಾನ್ವಿತರಾಗಿರುವ ಯಾರಾದರೂ ನನ್ನೊಡನೆ ಸಂಬಂಧ ಬೆಳೆಸಿಕೊಂಡರೆ ಅವರ ಗೌರವಕ್ಕೂ ಕಪ್ಪು ಮಸಿ ಬಳಿಯಲಾಗುತ್ತದೆ. ಈಗ ನೀವೇ ನೋಡಿ ಒಂದೇ ಮಾತಿನಲ್ಲಿ ಹೇಳುವುದಾದರೆ,ಅಂಕೆ ಸಂಖ್ಯೆಗಳಲ್ಲಿ ೧ ಯಾವತ್ತೂ ರಾಜ.ಮೊದಲಿಗ,ಯಾರಿಂದಲೂ ಪೂರ್ಣವಾಗಿ ಭಾಗಿಸಲ್ಪಡದ ಆದರೆ ಎಲ್ಲ ಸಂಖ್ಯೆಗಳನ್ನೂ ಭಾಗಿಸಬಲ್ಲ ತಾಕತ್ತು ಇದಕ್ಕಿದೆ.ಆದರೆ ಅರಸನ ಮುಂದಿರಬೇಡ,ಕತ್ತೆಯ ಹಿಂದಿರಬೇಡ ಎಂಬ ನಾಣ್ಣುಡಿಗೆ ವ್ಯತಿರಿಕ್ತವೆಂಬಂತೆ ನಾನು ಈ ರಾಜ ೧ ರ ಮುಂದೆ ,ಆ ಥರ್ಡ್ ಕ್ಲಾಸ್ ೩ ರ ಹಿಂದೆ ಕೂತಿದ್ದೇನೆ.ಈ ಜನ್ಮ ಕುಂಡಲಿಯ ದೋಷದಿಂದಲೇ ನಾನು ಯಾರ ಅಕ್ಕಪಕ್ಕ ಹೋಗಿ ಕೂತರೂ ಅವರ ವಾಸ್ತುಶಾಸ್ತ್ರ ಅಲ್ಲೋಲಕಲ್ಲೋಲವಾಗುತ್ತದೆ. ಸಾಮಾಜಿಕ ಜೀವನದಲ್ಲೂ ಮೊದಲನೇ ಮದುವೆಗಿದ್ದಷ್ಟು ಮರ್ಯಾದೆ ಎರಡನೇಯದಕ್ಕಿಲ್ಲ.ಎದುರಿಗೆ ಎಲ್ಲರೂ ಸಂತೋಷದಿಂದಿದ್ದರೂ ಒಳಗೊಳಗೇ ಕುಹಕವಾಡುತ್ತಾರೆ.ಅದೇ ಮದುವೆ ಮಂಟಪದಲ್ಲಿ ಯಾರಾದ್ರೂ
ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ ಬಣ್ಣದಲ್ಲಿ ಬರೆದವು ಅವರ ಹೆಸರುಗಳು. ದೇವಾದಿದೇವತೆಗಳು ಸಭೆಯನ್ನು ನಡೆಸಿ ಸಭೆಯೊಳಗೆ ಸು ಮಧು ರ ಕನ್ನಡವ ಬಡಿಸಿ || ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ ಬಂದು ಕೂತಿಹರೆಲ್ಲ tatasky ODC || ಕೃಷ್ಣ ನಿಹನಿಲ್ಲಿ ಇಹನು ರಘು-ರಾಮ ಮಂಜುನಾಥ ರು ತ್ರಿಮೂರ್ತಿಯಲಿ ಹರಸಿರುವ ಧಾಮ || ಪಾವನ-ಪುನೀತರಾಗಿ ಕೇಳಿ ಮೋಹನ ನ ಬಾನ್ಸುರಿ ಸ್ವಪ್ನ ದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... || ವಿಘ್ನ ದಿಂ ಕಾಯುತಿಹ ದ್ವಾರದಲೇ ಬೆನಕ ಎಲ್ಲ ದೇವರಿಗೂ ಶರಣು ನಮ್ಮ ಗುರು ಗಳ ತನಕ ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ ಹರುಷ ದಲಿ ಕಳಿಸುವನು ಮೇಘ ಸಂದೇಶ || ದೇವತೆಗಳಿಗೂ ಇಹುದು ನಮ್ಮ ನೋಡುವ ಇರಾದೆ ಪ್ರಿಯ ವದನರಾಗಿ ಬಂದಿಹರು ಲಕ್ಷ್ಮಿ ಮತ್ತು ರಾಧೆ ಶಾರದೆ ಯ ಆಶೀರ್ವಾದವೇ ನಮಗೆ ಕತ್ತಲಲಿ ದೀಪ್ತಿ ವಿಜಯಕ್ಕೆ ಸ್ಪೂರ್ತಿ ಒಂದು ನಿಮಿಷ... ನನ್ನ ಕಾವ್ಯ ವಾಗಿಲ್ಲ ಪೂರ್ತಿ!!! ಕನ್ನಡಿಗರು ನಾವು... ಕಾಯಕಕ್ಕೆ ಸೈ ವಿಶ್ವಾಸಕ್ಕೆ ಜೈ ||