Skip to main content

ನಂಬಿ ಕೆಟ್ಟವರು

******************************************************
ಹಣವ ಗಳಿಸಿದೆ ಬೆವರ ಸುರಿಸುತ
ರಣದ ಸೈನಿಕನಂದದಿಂ ಕಂ
ಕಣವ ತೊಟ್ಟೆನು ಮನೆಯ ಕಟ್ಟಲು ನಮ್ಮ ಊರಿನಲಿ||
ತೃಣದಿ ನಾ ಕಂಡೆನು ಸುಖವ ಚಣ
ಚಣವು ಕಷ್ಟದಿ ದುಡಿದೆ ನಾ ಕಡಿ
ವಾಣವಿಕ್ಕಿದೆ ನನ್ನ ಖರ್ಚಿಗೆ ಗುರಿಯ ಸಾಧಿಸಲು ||

ಚಲಿಸಿದೆನು ಕಾಲ್ಗಳಲಿ ನಡೆಯುತ
ಉಳಿಸಿದೆನು ಹಣವನ್ನು ವ್ಯಯಿಸದೆ
ಗಳಿಸಿದಾ ಹಣ ಕೂಡಿ ಇಟ್ಟೆನು ಫೈನಾನ್ಸೊಂದರಲಿ||
ಮುಳುಗಿ ಹೋಯಿತು ಎಲ್ಲ ಹಣ ನಾ
ಕಳೆದುಕೊಂಡೆನು ನನ್ನ ಕನಸನು
ಹಳಿದುಕೊಂಡೆನು ಹಲುಬಿದೆನು ನಾ ನನ್ನ ದುರ್ವಿಧಿಗೆ ||

ಹರನು ಮೆಚ್ಚುವುದಿಲ್ಲ ಇವರನು
ನರರು ಚಚ್ಚದೆ ಬಿಡುವರೆನ್ ಸರ
ಕಾರ ಕಣ್ಣನು ಮುಚ್ಚಿಕೊಳ್ಳುತ ಶಿಕ್ಷೆ ಕೊಡದಿರಲು||
ಪರರ ಸೊತ್ತನು ದೋಚುತಿಹ ತಸ್
ಕರರ ನಂಬಿದ ನಾವು ಕೆಟ್ಟೆವು
ಕರುಮವೆಮ್ಮದು ಎನುತ ನಾವ್ಗಳು ಸಹಿಸಿಕೊಳಬೇಕು ||


************************************--ವಿಕಟಕವಿ

Comments

ಶಾನುಬಾಗರಿಗೆ ನಮಸ್ಕಾರಗಳು. ನೀವೂ ಕೂಡ ಬ್ಲಾಗ್ ಬರೆಯಲು ಶುರು ಮಾಡಿದ್ದು ತುಂಬಾ ಸಂತೋಷದ ಸುದ್ದಿ. ನಿನ್ನ ಮೊದಲನೇಯ ಪೋಸ್ಟ ಏನು ಅಂತ ನನಗ ಗೊತ್ತದ.

ಈ ಪದ್ಯ ನನಗ ಮತ್ತ ಸೇಟುಗ ಹೇಳಿದ್ದಿ. ನಿಮ್ಮೂರಾಗ ನಡದ ಘಟನೇ ಮ್ಯಾಲೆ ಇದು ಅದ ಹೌದಿಲ್ಲ?

ಒಳ್ಳೇದು. ಹೀಗೇ ಬರೀತಾ ಇರು. ಈಗ ಕೆಲಸ ಅದ. ಆಮ್ಯಾಲೇ ಮಾತಾಡೂಣು.

ಹರಿ ಓಂ.
ಜೈ ಶ್ರೀ ಯಲಗುರೇಶ ಪ್ರಸನ್ನ.

Popular posts from this blog

ಆಪೀಸಾಯಣ

ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ  ಬಣ್ಣದಲ್ಲಿ ಬರೆದವು ಅವರ ಹೆಸರುಗಳು. ದೇವಾದಿದೇವತೆಗಳು ಸಭೆಯನ್ನು ನಡೆಸಿ ಸಭೆಯೊಳಗೆ ಸು ಮಧು ರ ಕನ್ನಡವ ಬಡಿಸಿ || ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ ಬಂದು ಕೂತಿಹರೆಲ್ಲ tatasky ODC ||               ಕೃಷ್ಣ ನಿಹನಿಲ್ಲಿ  ಇಹನು   ರಘು-ರಾಮ                     ಮಂಜುನಾಥ ರು ತ್ರಿಮೂರ್ತಿಯಲಿ ಹರಸಿರುವ ಧಾಮ ||                     ಪಾವನ-ಪುನೀತರಾಗಿ ಕೇಳಿ ಮೋಹನ ನ ಬಾನ್ಸುರಿ                     ಸ್ವಪ್ನ ದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... || ವಿಘ್ನ ದಿಂ ಕಾಯುತಿಹ ದ್ವಾರದಲೇ ಬೆನಕ ಎಲ್ಲ ದೇವರಿಗೂ ಶರಣು ನಮ್ಮ ಗುರು ಗಳ ತನಕ ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ ಹರುಷ ದಲಿ ಕಳಿಸುವ...

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...

ಎರಡರ ಸ್ವಗತ

  ಇದೊಂದು ಅನಾದಿ ಕಾಲದಿಂದ ನಡೆದು ಬಂದ  ದೌರ್ಜನ್ಯ,ದಬ್ಬಾಳಿಕೆ,ಶೋಷಣೆಯ ಕಥೆ.ಕರುಣೆಯಿಲ್ಲದ ಈ ಸಮಾಜವು ಒಂದು ಪ್ರತಿಭೆಯನ್ನು ಹೇಗೆ ತನ್ನ ಕಪಿಮುಷ್ಠಿಯಲ್ಲಿ ಅದುಮಿ ಹಿಡಿದಿಟ್ಟುಕೊಳ್ಳಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆ.   ನಾನು "ಎರಡು".ಒಂದು ಒಂದು ಸೇರಿ ಎರಡಾದ್ದರಿಂದ ನನ್ನನ್ನು ಏಕಾತ್ಮಜ ಎಂದೂ ಕರೆಯಬಹುದು.ವಸ್ತುಶಃ ನನ್ನಲ್ಲಿ ಯಾವ ಲೋಪದೋಷಗಳಿಲ್ಲದೆ ಹೋದರೂ ವಿನಾಕಾರಣ ನನ್ನನ್ನು ಹೀನಾಯವಾಗಿ ನೋಡಲಾಗುತ್ತದೆ.ಅಷ್ಟೇ ಅಲ್ಲದೆ ಸ್ವತಂತ್ರವಾಗಿ ಗೌರವಾನ್ವಿತರಾಗಿರುವ ಯಾರಾದರೂ ನನ್ನೊಡನೆ ಸಂಬಂಧ ಬೆಳೆಸಿಕೊಂಡರೆ ಅವರ ಗೌರವಕ್ಕೂ ಕಪ್ಪು ಮಸಿ ಬಳಿಯಲಾಗುತ್ತದೆ.   ಈಗ ನೀವೇ ನೋಡಿ  ಒಂದೇ  ಮಾತಿನಲ್ಲಿ ಹೇಳುವುದಾದರೆ,ಅಂಕೆ ಸಂಖ್ಯೆಗಳಲ್ಲಿ ೧ ಯಾವತ್ತೂ ರಾಜ.ಮೊದಲಿಗ,ಯಾರಿಂದಲೂ ಪೂರ್ಣವಾಗಿ ಭಾಗಿಸಲ್ಪಡದ ಆದರೆ  ಎಲ್ಲ ಸಂಖ್ಯೆಗಳನ್ನೂ ಭಾಗಿಸಬಲ್ಲ ತಾಕತ್ತು ಇದಕ್ಕಿದೆ.ಆದರೆ ಅರಸನ ಮುಂದಿರಬೇಡ,ಕತ್ತೆಯ ಹಿಂದಿರಬೇಡ ಎಂಬ ನಾಣ್ಣುಡಿಗೆ ವ್ಯತಿರಿಕ್ತವೆಂಬಂತೆ ನಾನು ಈ ರಾಜ ೧ ರ ಮುಂದೆ ,ಆ ಥರ್ಡ್ ಕ್ಲಾಸ್ ೩ ರ ಹಿಂದೆ ಕೂತಿದ್ದೇನೆ.ಈ ಜನ್ಮ ಕುಂಡಲಿಯ ದೋಷದಿಂದಲೇ ನಾನು ಯಾರ ಅಕ್ಕಪಕ್ಕ ಹೋಗಿ ಕೂತರೂ ಅವರ ವಾಸ್ತುಶಾಸ್ತ್ರ ಅಲ್ಲೋಲಕಲ್ಲೋಲವಾಗುತ್ತದೆ.  ಸಾಮಾಜಿಕ ಜೀವನದಲ್ಲೂ ಮೊದಲನೇ ಮದುವೆಗಿದ್ದಷ್ಟು ಮರ್ಯಾದೆ ಎರಡನೇಯದಕ್ಕಿಲ್ಲ.ಎದುರಿಗೆ ಎಲ್ಲರೂ ಸಂತೋಷದಿಂದಿದ್ದರೂ ಒಳಗೊಳಗೇ   ಕುಹಕ...