Skip to main content

Posts

Showing posts from 2009

ನನ್ನ ಸ್ಟೈಲು ನನ್ನದು

ನೂರಾರು ಮತವಿಹುದು ಲೋಕದುಗ್ರಾಣದಲಿ ಆರಿಸಿಕೊ ನಿನ್ನ ರುಚಿಗೊಪ್ಪುವುದನದರೊಳ್ ಎಂದು ಮಂಕುತಿಮ್ಮನ ಕಗ್ಗದಲ್ಲಿ ಶ್ರೀ ಡಿ . ವಿ ಗುಂಡಪ್ಪನವರು ಹೇಳಿದ್ದಾರೆ. ಈ ಪ್ರಪಂಚದಲ್ಲಿ ನಮಗೆ ಬೇಕಾದ ವಿಚಾರಗಳನ್ನು ನಾವು ಅನುಸರಿಸಬಹುದು. ಹಾಗೆಯೇ ಸಾಹಿತ್ಯಲೋಕದಲ್ಲಿ ಇರುವ ನೂರಾರು ಪ್ರಾಕಾರಗಳಲ್ಲಿ ನಮಗೆ ಬೇಕಾದ ಮಾರ್ಗವನ್ನು ನಾವು ಅನುಸರಿಸಬಹುದು. ಪ್ರಾಸ-ಛಂದಸ್ಸು-ಅನುಭವ-ಹಾಸ್ಯ-ಅನುವಾದ-ಕವಿತೆ-ಕವನ-ಹನಿ-ಮಿನಿ ಒಂದೇ ?? ಎರಡೆ ?? .ಆದರೆ ಯಾವುದೇ ಶೈಲಿಯಲ್ಲಿ ಬರೆದರೂ ಅದು ಮನದ ಮಾತನ್ನು ಅಕ್ಷರದ ಮೂಲಕ ಓದುಗನಿಗೆ ತಲಿಪಿಸಬೇಕು. ನನ್ನ ಹಲವು ಮಿತ್ರರು ನನಗೆ ಆಂಗ್ಲಭಾಷೆಯಲ್ಲಿ ಬರೆಯಲು ಹೇಳಿದ್ದಾರೆ. ಆದರೆ ನನಗೆ ಅದು ಅಸಾಧ್ಯ.ಯಾವುದೇ ಲೇಖನ ಬರೆಯುವಾಗ ಮನಸ್ಸಿನಲ್ಲಿ ಏನೊ ಒಂದು ವಿಷಯ ಬಂದರೆ ಅದು ಬರಹಕ್ಕೆ ಇಳಿಸುವಾಗ ಶಬ್ದಗಳಿಗೆ ತಡಕಾಡಬಾರದು ಅದು ಮುಕ್ತವಾಗಿ ಹರಿಯಬೇಕು ಆಗ ಮಾತ್ರ ಬರೆಯುವುದು ಬರಹಗಾರನಿಗೆ ಸಂತೋಷ ಕೊಡುತ್ತದೆ. ನನಗೆ ಆಂಗ್ಲಭಾಷೆಯಲ್ಲಿ ಅಷ್ಟು ಹಿಡಿತವಿಲ್ಲ. ಈಗ ನನಗೆ ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿ ಇಲ್ಲ ಎಂದು ಬರೆಯಬೇಕೆಂದುಕೊಳ್ಳಿ. ಕನ್ನಡದಲ್ಲಿ ಬರೆದರೆ ಅದಕ್ಕೆ "ಅಮ್ಮಾ... ಎಂದರೆ ಆ ಶಬ್ದ ಗಂಟಲಿನಿಂದ ಹೊರಡುವುದಿಲ್ಲ ಹೃದಯದಿಂದ ಬರುತ್ತದೆ ಎಂದೋ ಪ್ರಪಂಚದಲ್ಲಿ ಸಾಗರಕ್ಕಿಂತ ಆಳವಾದುದು ಪರ್ವತಕ್ಕಿಂತ ದೊಡ್ಡದು ಯಾವುದು ಎಂದರೆ ಅದು ತಾಯಿಯ ಪ್ರೀತಿ ಎಂದು ಕೊಂಬು ಬಾಲ ಸೇರಿಸಿ ಬರೆಯಬಹುದು. ಅದೇ ಆಂಗ್ಲ ಭಾಷೆ

ಇಟ್ಟಿದ್ದು ಬಟ್ಟಾದರೆ ವಾಟೆಂದರೇನು ??

ಈ ವಾಕ್ಯ ನಾನು ನಾಲ್ಕನೇ ತರಗತಿಯಲ್ಲಿದ್ದಾಗ ಕೇಳಿದ್ದು . ಎಲ್ಲೋ ಅಕ್ಕನಿಂದಲೋ ಅಣ್ಣನಿಂದಲೋ ಕೇಳಿ ಬಾಯಿಪಾಟ ಹೊಡೆದು ಕ್ಲಾಸಿಗೆ ಬಂದು ಸುಮಂತ್ ಇಟ್ಟಿದ್ದು ಬಟ್ಟಾದರೆ ವಾಟೆಂದರೇನು? ಎಂದು ಗೆಳೆಯರು ಕೇಳಿದಾಗ ಇಂಗ್ಲೀಷಿನ ಗಂಧಗಾಳಿ ಗೊತ್ತಿಲ್ಲದ ನಾನು ಅದೇನೆಂದು ತಿಳಿಯಲು ತಿಪ್ಪರಲಾಗ ಹಾಕಿದ್ದೆ . ಆಮೇಲೆ it=ಇದು but=ಆದರೆ what ಅಂದರೆ ಏನು? ಅಂತ ತಿಳಿದಾಗ ಅಯ್ಯೋ ಇಷ್ಟೇನಾ? ಎಂದು ನಿಟ್ಟುಸಿರಿಟ್ಟಿದ್ದೆ. ಹೀಗೆ ಯಾವುದೇ ವಿಷಯವೇ ಆಗಲೀ ತಿಳಿಯುವ ಮೊದಲು ಏನೋ ಪರ್ವತದಂತೆ ಭಾಸವಾದರೂ ತಿಳಿದಮೇಲೆ ಪೀಚು ಪೀಚೆಂದೆನಿಸುವುದು ಸಹಜವೇ . ಇತ್ತೀಚೆಗೆ ದಿನಪತ್ರಿಕೆಯಲ್ಲಿ ಶತಾವಧಾನಿ ಆರ್. ಗಣೇಶ್ ಅವರ ಚಮತ್ಕಾರ ಕವಿತ್ವ ಓದಿದಾಗ ಇಂಥವೇ ಹಲವು ಸಮಸ್ಯಾ ಪೂರ್ತಿ ಶ್ಲೋಕ /ವಾಕ್ಚಾತುರ್ಯಗಳು ನೆನಪಿಗೆ ಬಂದವು . ಅಲ್ಲದೆ ಭಾಷಾ ಜ್ಞಾನವಿಲ್ಲದೇ ಆಗುವ ಅಭಾಸಗಳು ಆ ಸಂಧರ್ಭದಲ್ಲಿ ಪೇಚಿಗೆ ಸಿಲುಕಿಸಿದರೂ ಆಮೇಲೆ ಹಾಸ್ಯಕ್ಕೆ ಒಳ್ಳೆಯ ವಿಷಯಗಳಾಗುತ್ತವೆ. ಅವುಗಳ ಸಂಗ್ರಹವೇ ಈ ಲೇಖನ . 1) ನಮ್ಮ ಊರಿನಲ್ಲಿ ಯಾರಾದರೂ " ಏನಾಯ್ತೋ dull ಇದ್ದೀಯ? " ಎಂದಾಗ ನಾವು ಹೇಳುವುದು "ದಶರಥನ ಸುತನರಸಿಯು ನಾಸಿಕದೊಳು ಪೊಕ್ಕು ಪೀಡಿಸುತಿಹಳು" .... ಏನಿಲ್ಲ ಶೀತಕ್ಕೆ ಕುಂದಾಪುರ ಕನ್ನಡದಲ್ಲಿ ರಾಗದಿಂದ ಸೀತು/ಸೀತ ಅನ್ನುತ್ತಾರೆ . ಅದೆ ... ದಶರಥ ಸುತ -- ರಾಮ --ಅರಸಿ --- ಸೀತಾ ಮೂಗಿನಲ್ಲಿ ಸೇರಿ ಪೀಡಿಸುತ್ತಿದ್ದಾಳೆ . ಮೂಗಿನಲ್ಲಿ ಜೋಗ ಅನ್ನ

ನ್ಯಾನೋ ಕಥೆಗಳು.

1) "ಕರ್ತವ್ಯಂ ದೈವಮಾಹ್ನಿಕಂ " ಎಂದುಕೊಂಡು ಸದಾ ಕಾಲ ಆಫೀಸ್ ಕೆಲಸದಲ್ಲೇ ತೊಡಗಿರುತ್ತಿದ್ದ ಸಾಫ್ಟವೇರ್ ಇಂಜಿನಿಯರ್ ನ ಹಾಲುಗಲ್ಲದ ಪುಟ್ಟ ಮಗು ಅವನನ್ನು ತೋರಿಸಿ "ಅಮ್ಮಾ ....... ಇವರು ಯಾರು ??" ಎಂದು ಕೇಳಿದಾಗ ಅವನಿಗೆ ನಿಜವಾದ ಕರ್ತವ್ಯದ ಅರಿವಾಯಿತು . 2) ಜ್ಯೋತಿಷ್ಯ ಶಾಸ್ತ್ರವನ್ನು ಅರೆದು ಕುಡಿದು ಸೂರ್ಯ - ಚಂದ್ರ - ಗ್ರಹತಾರೆಗಳನ್ನು ಕರತಲಾಮಲಕ ಮಾಡಿಕೊಂಡಿದ್ದ ಸುಬ್ಬಯ್ಯ ಶಾಸ್ತ್ರಿಗಳಿಗೆ ಅವರ ಮಗಳು ಪ್ರಿಯಕರನೊಂದಿಗೆ ಓಡಿ ಹೋಗುವ ವಿಚಾರವನ್ನು ಈ ಆಕಾಶಕಾಯಗಳು ಹೇಳಲೇ ಇಲ್ಲ !!!!. 3) ಮನುಷ್ಯನಿಗೆ ಶೀತವಾಗಲು ಶುರುವಾಗಿದ್ದು ಕೊಡೆ ಕಂಡುಹಿಡಿದ ಮೇಲೆ !!!! 4) ಬೀರುವಿನೊಳಗಿನ ರೇಷ್ಮೆ ಸೀರೆಗಳನ್ನೆಲ್ಲ ಇಲಿ ಕೊಚ್ಚಿ ಹಾಕಿದಾಗ ಕೊಂಚವೂ ಬೇಸರಿಸದ ಕಾವೇರಮ್ಮ ಮಗ ತಂದುಕೊಟ್ಟ ಇನ್ನೂರು ರುಪಾಯಿಯ ಕಾಟನ್ ಸೀರೆಯ ಮೇಲೆ ಸುಕ್ಕು ಬಿದ್ದಾಗ ಬಿಕ್ಕಿ ಬಿಕ್ಕಿ ಅತ್ತಳು . 5) ಅಂಗವಿಕಲರಿಗೆ ಸರಕಾರ ಕೊಡುವ ಸಹಾಯಧನವನ್ನು ಪಡೆಯಲು ತೆವಳಿಕೊಂಡು ಬಂದ ಅಭ್ಯರ್ಥಿಗೆ ಅಧಿಕಾರಿಗಳು ಅಂಗವಿಕಲತೆಯ ಸರ್ಟಿಫಿಕೆಟ್ ಇಲ್ಲದೇ ಹಣ ಮಂಜೂರು ಮಾಡಲಾಗುವುದಿಲ್ಲ ಎಂದರು . 6) ಕದಳಿಯೋಳು ಮದದಾನೆ ಹೊಕ್ಕಂತೆ ನೂರು ಜನ ಶತ್ರುಗಳ ಚಕ್ರವ್ಯೂಹಕ್ಕೆ ನುಗ್ಗಿ ಅದನ್ನು ಧ್ವಂಸಗೈದು ಕ್ಲೈಮ್ಯಾಕ್ಸ್ ನಲ್ಲಿ ನಾಯಕಿಯ ಮಾನ ಕಾಪಾಡಿದ ಹೀರೊನನ್ನು ಕಳ್ಳರು ನಡುರಸ್ತೆಯಲ್ಲಿ ಖಾಲಿ ಪಿಸ್ತೂಲ್ ತೋರಿಸಿ ದೋಚಿದರು . 7) ಮಾರುಕಟ್ಟೆ

ಶಾಂತಿಮಂತ್ರ

********************************************************** ಈ ಲೇಖನವನ್ನು ಓದುವ ಮೊದಲು ನನ್ನ "ನಾನು - ನನ್ನ ಸಂಸಾರ " ಲೇಖನ ಓದಿದರೆ ಇದರ ಹಾಸ್ಯದ ಹಿನ್ನೆಲೆಯ ಕುರಿತು ತಿಳಿಯಬಹುದು . http://shanuisking.blogspot.com/2009/03/blog-post_17.html ********************************************************** ಊಫ್ .. ಈ ಜನಕ್ಕೆ ಯಾವ್ ಟೈಮ್ ನಲ್ಲಿ ಏನ್ ಮಾತಾಡ್ಬೇಕು ಅನ್ನೋದೇ ಗೊತ್ತಾಗಲ್ಲ ....ಇಷ್ಟು ದಿನ ನಾನು ಶಾಂತಿ ಬಗ್ಗೆ ಬರೆದ ಎಲ್ಲ ಲೇಖನಗಳನ್ನು ಅವಳಿಗೆ ತಿಳಿಯದಂತೆ ಸೇಫ್ ಲಾಕರನಲ್ಲಿ ಇಟ್ಟಿದ್ದೆ . ಮೊನ್ನೆ ಶನಿವಾರ ಸಂತೆಗೆ ಇವಳನ್ನು ಕರೆದುಕೊಂಡು ಹೋದಾಗ ಭಾದ್ರಪದ ಮಾಸ ಬರದಿದ್ದರೂ ಸಡನ್ನಾಗಿ ಗಣೇಶ ವಕ್ಕರಿಸಿಕೊಂಡು ಬಿಟ್ಟ . "ಏನ್ ಅತ್ತಿಗೆ ?? ನುಗ್ಗೆಕಾಯಿ ಖರೀದೀನಾ ??? ಎಂದು ಕೇಳಿ ಬಿಡೋದೇ ??. ನನ್ನ ಕಣ್ಸನ್ನೆ ನೋಡ್ತಾನೆ ಇಲ್ಲ ....... ಯಾಕೋ ಗಣೇಶ ಹೀಗೆ ಯಾಕೆ ಕೇಳ್ತಾ ಇದ್ದೀಯಾ ?? ಎಂದು ಇವಳು ಕೇಳಿದಾಗ ಮಗ್ಗಿ ಕಂಠಪಾಠ ಹೊಡೆದಂತೆ ನನ್ನ ಲೇಖನದ ಎಲ್ಲ ಜೋಕುಗಳನ್ನು ಕಕ್ಕಿಬಿಟ್ಟ ..... ಏನ್ ಚೆನ್ನಾಗಿ ಬರೆದಿದ್ದಾರೆ ನಿಮ್ ಮನೆಯವರು ಅಂತ ಹೊಗಳಿಕೆ ಬೇರೆ . ನನಗೆ ನಗುವುದೋ ಅಳುವುದೋ ತಿಳಿಯಲಿಲ್ಲ . ಸಾಯಂಕಾಲ ಮನೆಯಲ್ಲಿ ನನಗೆ ನಡೆದ ಸತ್ಯನಾರಾಯಣ ಪೂಜೆಯ ಬಗ್ಗೆ ಇನ್ಯಾವತ್ತಾದರೂ ಬರೆಯುತ್ತೇನೆ . ಈಗ ಮುನಿಸಿಕೊಂಡ ಶಾಂತಿಯನ್ನು ಒಲಿಸಿಕೊಳ್ಳಲು ಈ ಶಾಂತಿಮಂತ್ರ

ಕರ್ಣಕುಂಡಲ

ಸುಮಾರು ಹತ್ತು ತಿಂಗಳು ಹಿಂದಿನ ಮಾತು . ಅಣ್ಣ ಕೊಟ್ಟ ಐಪೋಡನ್ನು ಕಿವಿಗೆ ಸಿಕ್ಕಿಸಿಕೊಂಡು ದೊಡ್ಡ ವೋಲ್ಯುಂ ನಲ್ಲಿ ಹಾಡು ಕೇಳುತ್ತಾ ಆಫೀಸಿಗೆ ತೆರಳುವುದು ನನ್ನ ಅಭ್ಯಾಸ . ಒಂದು ದಿನ ಎಡ ಕಿವಿಯ ಇಯರ್ ಪೋನ್ ನಲ್ಲಿ ಕಡಿಮೆ ಬಲ ಕಿವಿಯಲ್ಲಿ ಹೆಚ್ಚು ವೋಲ್ಯುಂ ಕೇಳಿಸತೊಡಗಿದಾಗ 4000/- ನ ಐಪೋಡ ನ ಮೇಲೆ ಎಳ್ಳಷ್ಟು ಸಂಶಯಪಡದೆ ನನ್ನ ಒಂದು ಕಿವಿ ಸ್ವಲ್ಪ ಡಮಾರ್ ಆಗಿದೆ ಎಂದು ಚಿಂತಿಸುತ್ತಿದ್ದೆ . ಹೇಳಿದರೆ ಕೆಪ್ಪ ಎನ್ನುತ್ತಾರೆ ಎಂದು ಹೆದರಿ ಯಾರಲ್ಲೂ ಹೇಳಿರಲಿಲ್ಲ . ಆಮೇಲೆ ಒಂದು ದಿನ ಅದರಲ್ಲಿ ಹಾಡು ಕೇಳಿದ ನನ್ನ ರೂಂ ಮೇಟ್ ಸುಮಂತ್ .. ಇದರ ಎಡ ಇಯರ್ ಫೋನ್ ಹಾಳಾಗಿದೆ ಅಂದಾಗ ನಾನು ಪಟ್ಟ ಸಂಭ್ರಮ ಅಷ್ಟಿಷ್ಟಲ್ಲ .ನನ್ನ ಕರ್ಣದ್ವಯಗಳು ಸರಿಯಾಗಿವೆ ಎಂದು ಬೀಗುತ್ತಿದ್ದೆ . ಆದರೆ ಯಾವತ್ತೂ ಗೋಡೆಗೂ ಕಿವಿ ಇರುತ್ತೆ ಎಂದು ತುಂಬಾ ಜಾಗ್ರತೆಯಿಂದ ಇರುತ್ತಿದ್ದ ನನಗೆ ನನ್ನ ಅಕ್ಕಪಕ್ಕ ಎರಡು ಇರುವುದು ಮರೆತೇ ಹೋಗಿತ್ತು . ನಾನು ಹೆಮ್ಮೆ ಪಟ್ಟುಕೊಂಡಿದ್ದು ಅದಕ್ಕೆ ಕೇಳಿಸಿತೋ ಏನೋ. ಈಗೀಗ ಸ್ವಲ್ಪ ನಖರಾ ಮಾಡತೊಡಗಿದೆ. ಸುಮಾರು 15 ದಿನ ಹಿಂದಿನಿಂದ ಈ ಕಿವಿ ನೋವಿ ಶುರು ಆಗಿದೆ. ಮೊದಲಿಗೆ ಇದು ಮಾಮೂಲಿ ಶೀತ ಎಂದುಕೊಂಡು ನಮ್ಮ "ಮಾತ್ರೆ ರಾಜನ " ಬಳಿ ಹೋದೆ .ಮಾತ್ರೆರಾಜ ಹೆಸರು ಯಾಕೆ ಎಂದು ಕೇಳಿದಿರಾ ?? ಏನಿಲ್ಲ ನೀವು ಅವರ clinic ನ ಒಳಗೆ ಹೋಗಿ ಹೊರಬರುವಷ್ಟರಲ್ಲಿ ನಿಮ್ಮ ತೂಕ 1/2kg ಮಾತ್ರೆಗಳಿಂದ ಹೆಚ್ಚಾಗಿರುತ್ತದೆ . ಕಂದು, ಬ

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು

ಕುಂಭಕರ್ಣನ ಡೈರಿಯಿಂದ

ಲೋ ಪಚ್ಚು ನೀನು ಮೂಲತಃ ಯಾವ ಊರಿನವನೋ ??ಬೆಳಿಗ್ಗೆ ಎದ್ದವನೇ ಪ್ರಶಾಂತನಿಗೆ ಕೇಳಿದೆ . ಯಾಕೋ ಏನಾಯ್ತು ?? ಎಂದ. ಏನಿಲ್ಲ ಗುರುವಾರ ರಾತ್ರಿ ನಿದ್ರೆಯಲ್ಲಿ ನೀನು ಕೂಚಿಪುಡಿ ಮಾಡ್ತಾ ಇದ್ದೆ ಆಗ ನೀನು ಆಂಧ್ರದವ ಎಂದುಕೊಂಡೆ . ಮೊನ್ನೆರಾತ್ರಿ ಕಥಕ್ಕಳಿಯಲ್ಲಿ ನಿನ್ನ talent ನೋಡಿ ನೀನು ಪಕ್ಕ ಮಲ್ಲು ಅಂದು ಡಿಸೈಡ್ ಮಾಡಿದೆ .ಆದರೆ ನಿನ್ನೆ ನೀನು ಮಾಡಿದ ಯಕ್ಷಗಾನ ನೋಡಿ full confuse ಆದೆ . ಏನ್ Performance ಲೇ ಅದು . ಗಣಪತಿ ಪೂಜೆ ಮುಗಿದು ಇನ್ನೇನು ಕೋಡಂಗಿ ಪ್ರವೇಶ ಮಾಡಬೇಕೆನ್ನುವಾಗ ನಿಲ್ಲಿಸಿಬಿಟ್ಟೆ . ಅದನ್ನು ನೋಡಿ ನೀನು ಕನ್ನಡಮ್ಮನ ಕಣ್ಮಣಿ ಎಂದು conclude ಮಾಡಿದ್ದೇನೆ ಸರೀನಾ?? ಏನೇ ಹೇಳು ನಿನ್ನದು ಬಹುಮುಖ ಪ್ರತಿಭೆ ಕಣೋ ಎಂದೆನು. ಏನ್ ಮಾಡ್ಲೋ ?? ಅಪ್ಪನದು Job Transfer ಆಗುತ್ತಾ ಇರುತ್ತೆ ಅದಕ್ಕೆ ಹೀಗೆ ಆಗ್ತಾ ಇದೆ ಎಂದ . ಸ್ವಲ್ಪ ದಿನದ ನಂತರ "ಲೋ ಪಚ್ಚು ನಿಮ್ಮಪ್ಪಂಗೆ ಇಂಗ್ಲೆಂಡ್ Transfer ಆಯ್ತಾ ?? ಎಂದು ಕೇಳಿದೆ . "ಯಾಕೋ ???" ಎಂದ . ಏನಿಲ್ಲ ನಿನ್ನೆ ರಾತ್ರಿ ನೀನು Brake Dance ಮಾಡ್ತಾ ಇದ್ದೆ ಅದಕ್ಕೆ Doubt ಬಂತು ಎಂದೆನು . ನಿದ್ದೆ !!!!! ಅದರ ಸವಿಯನ್ನು ನಾನು ವರ್ಣಿಸಬೇಕೆ?? ತುರಿಕೆ ಮತ್ತು ನಿದ್ದೆ ಮಾಡಿದಷ್ಟು ಹೆಚ್ಚಾಗುವುದಲ್ಲದೆ ಇನ್ನೂ ಸ್ವಲ್ಪ ಮಾಡಿದರೆ ಹಾಯಾಗಿರುತ್ತದೆ ಎಂದೆನಿಸುತ್ತದೆ . ಎಲ್ಲಾ ದೇವರ ಅನುಗ್ರಹವಿದ್ದವನೊಡನೆ ನಿದ್ರಾದೇವಿ ಮುನಿಸಿಕ

ನಾನು ನನ್ನ ಸಂಸಾರ

ಭಾನುವಾರ ಬೆಳಿಗ್ಗೆ Breaking News ನ ಹುಡುಕಾಟದಲ್ಲಿ News Paper ಓದುತ್ತ Hall ನಲ್ಲಿ ಕೂತಿದ್ದೆ . ಆದರೆ ಆ Breaking News ನಮ್ಮ ಮನೆಯಲ್ಲೇ ನಡೆಯುತ್ತದೆಂದು ಕನಸಿನಲ್ಲೂ ಯೋಚಿಸಿರಲಿಲ್ಲ . " ರೀ ... ಇವತ್ತು ಉಪ್ಪಿಟ್ಟು ಮಾಡುತ್ತೇನೆ ... ಅಡುಗೆ ಮನೆಯಿಂದ ನನ್ನವಳು ಉಲಿದಳು. ಎದೆ ಝಾಲ್ಲೆಂದಿತು!!!!! ತಕ್ಷಣ ಮೊಬೈಲ್ ಫೋನ್ ನ Contact list ನಲ್ಲಿದ್ದ ಎಲ್ಲರಿಗೂ ಕರೆ ಮಾಡಿ ಮಾತಾಡಿದೆ . "ಏನೋ ..... ಬೆಳಿಗ್ಗೆ ಬೆಳಿಗ್ಗೆ ಫೋನ್ ಮಾಡಿ ಬಿಟ್ಟಿದ್ದೀಯಾ !!!!! ಎಂದು ಎಲ್ರೂ ಕೇಳಿದ್ರು ... ಹೌದು ಮಧ್ಯಾನ್ನ ಹೇಗಿರ್ತೀನಿ ಅಂತ sure ಇಲ್ಲ ಅದಕ್ಕೆ ಈಗಲೇ ಮಾಡಿದೆ ಎಂದೆನು. ಕಳೆದ ಬಾರಿ ನನ್ನವಳ "ಹಸ್ತಗುಣದ" ಬಲಿಪಶುವಾಗಿದ್ದ ರಮೇಶಣ್ಣ ... ಲೋ Insurance Premium ಕಟ್ಟಿದ್ದೀಯ ತಾನೇ ?? ಎಂದು ಕೇಳಿದ . ಹೌದು ಎಂದೆನು . ನನ್ನವಳು ಮನೆಯೊಳಗಿದ್ದರೆ ನನಗೂ ಕೋಟಿ ರುಪಾಯಿ . ಆದರೆ ಅಡುಗೆ ಮನೆ ಹೊಕ್ಕರೆ ಸ್ವಲ್ಪ ಭಯವಾಗುವುದು ಸಹಜ . ಒಹ್ ..... ಕ್ಷಮಿಸಿ ನನ್ನವಳ ಪರಿಚಯ ಮಾಡುವುದೇ ಮರೆತು ಹೋದೆ . ಇವಳ ಹೆಸರು ಸುಶಾಂತಿ . ದೇವರಾಣೆಗೂ ಇದು ಕೇವಲ ಅಂಕಿತನಾಮ . ನನ್ನ ಅತ್ತೆ ಮಾವಂದಿರ ಏಕೈಕ ಪುತ್ರಿ . ಅವರ ಕುಟುಂಬದಲ್ಲಿ ಇವಳ ತಂದೆ ತಾಯಿ ಬಿಟ್ಟು ಬೇರೆ ಎಲ್ಲರಿಗೂ ಗಂಡು ಮಕ್ಕಳು. ಇದರಿಂದಾಗಿ "ಪಾರ್ವತಿಯ " ತರಹ ಇವಳು ಕೂಡ "ಮುದ್ದಿನ ಮನೆಮಗಳು ". " ಆ

ಶಿರವೆಂಬ ಗುಡಿಯೊಳಗೆ ನೆಲೆಸಿರೋ "ಕೇಶ "ವಾ .....

ಲೋ ಸುಮಂತಾ ...... ತಲೆ ಒಳ್ಳೆ ಮರುಭೂಮಿ ಆಗಿ ಬಿಟ್ಟಿದೆಯಲ್ಲೋ !!!!! ನನ್ನ ಮಾನ ಮರ್ಯಾದೆಯ ಕಿಂಚಿತ್ತೂ ಪರಿವೆ ಇಲ್ಲದಂತೆ ಪಬ್ಲಿಕ್ಕಾಗಿ ನನ್ನ ಗೆಳೆಯ "ಸೈಕ್ ಪೋ " ನನ್ನ ಮಾನವನ್ನು ಬಹಿರಂಗ ಹರಾಜಿಗಿಟ್ಟಾಗ ಏನು ಮಾಡುವುದು ತಿಳಿಯದೆ ತಬ್ಬಿಬ್ಬಾದೆ . ತಕ್ಷಣ ಸುಧಾರಿಸಿಕೊಂಡು " ಹೌದೋ ನನ್ನ ತಲೆಯಲ್ಲಿ ಒಳ್ಳೆ ಬುದ್ಧಿ ತುಂಬಿದೆ ನಿನ್ನ ಥರ ಗೊಬ್ರ ಸಗಣಿ ತುಂಬಿದ್ದರೆ ನನ್ನ ಕೂದಲಿಗೂ ಪೋಷಣೆ ಸಿಕ್ಕಿ ಸೊಂಪಾಗಿ ಬೆಳೆದಿರೋದು" ಅಂಥ ಆವಾಜ್ ಹಾಕಿ ಅವನ ಬಾಯಿ ಮುಚ್ಚಿಸಿದೆ .ಇರಲಿ ಬಿಡಿ ಮೊದಮೊದಲು ಹೀಗೆ ಯಾರಾದರೂ ಹೇಳಿದರೆ ನನಗೆ ಸ್ವಲ್ಪ ಬೇಜಾರಾಗ್ತಿತ್ತು ಈಗ ಅಭ್ಯಾಸ ಆಗಿ ಹೋಗಿ ಬಿಟ್ಟಿದೆ . ಅದೇನೋ ಹೇಳ್ತಾರಲ್ಲ "ದಿನಾ ಸಾಯೋರಿಗೆ ಅಳೋರ್ಯಾರು " ಅಂತ ಹಾಗೇನೆ . ದಿನಾ ಹೋಗೋ ನನ್ನ ಕೂದಲಿಗೆ ಬೇಜಾರ್ ಮಾಡ್ಕೋಳ್ಲೋದಕ್ಕೂ ಸಮಯ ಇಲ್ಲದಾಗಿದೆ . ಮೊನ್ನೆ "ಥಟ್ ಅಂತ ಹೇಳಿ " ನೋಡ್ತಾ ಇದ್ದೆ ಅದರ ನಿರೂಪಕರು "ಪ್ರತಿದಿನ ಮನುಷ್ಯರ 40 ಕೂದಲು ಉದುರುತ್ತದೆ ಹಾಗೆ ಬೆಳೆಯುತ್ತದೆ "ಅಂಥ ಹೇಳಿದ್ರು . ನನ್ನ ವಿಷಯದಲ್ಲಿ ಇದು ಸ್ವಲ್ಪ ಎಡವಟ್ಟಾಗಿದೆ . ಬ್ರಹ್ಮನ Program ನ್ನು testing ಮಾಡದೆ production ಗೆ release ಮಾಡಿರಬೇಕು . ಉದುರೋ ವಿಷಯದಲ್ಲಿ ನಲವತ್ತಕ್ಕೆ ಒಂದು ಹತ್ತು ಸೇರಿಸಿಯೇ ಉದುರುತ್ತದೆ ಆದರೆ ಬೆಳೆಯೋ program ಕೆಲಸ ಮಾಡುತ್ತಿಲ್ಲ . ಇದು ತಪ್ಪಲ್ಲವೇ ??.

ಅಪಾರ್ಥ ಕೋಶ

ಒಂದು 6-7 ವರ್ಷ ಹಿಂದಿನ ಮಾತು . ಅಗತ್ಯ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿದ್ದೆ . ಅಪ್ಪನೊಂದಿಗೆ ಬಸವನಗುಡಿ ಬಳಿ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ರಸ್ತೆ ದಾಟಲು ಕಾಯುತ್ತಿದ್ದೆವು . ಎದುರಿನಿಂದ ಟ್ಯಾಂಕರ್ ಒಂದು ಹೋಯಿತು . ಥಟ್ಟನೆ ನಾನು-ಅಪ್ಪ ಪರಸ್ಪರ ನೋಡಿ ನಕ್ಕೆವು . ಯಾಕೆಂದು ಕೇಳುತ್ತೀರಾ ?? ಏನಿಲ್ಲ ಆ ಟ್ಯಾಂಕರು " ನೀರು ಸರಬುರುಜು ವಾಹನ " ಆಗಿತ್ತು . ( ಅದು ನೀರು ಸರಬರಾಜು ವಾಹನ ಆಗಬೇಕಿತ್ತು ). ಅದರ ಅರ್ಥ ಏನೆಂದು ದೇವರೇ ಬಲ್ಲ . ಮುಂದೆ ಬಸ್ ನಿಲ್ದಾಣದಲ್ಲಿ ನಿಂತಾಗ ಬಸ್ ನ ಬೋರ್ಡ್ ನಲ್ಲಿ "ಕೆ . ಆರ್ ಪೇಟೆ , ಕಂ. ಬ .ನಿ " ಎಂದು ಬರೆದದ್ದು ಓದಿ ನಿಜಕ್ಕೂ ಕಂಬನಿ ಹರಿಯಿತು. (ಅದು ಕೆಂ .ಬ .ನಿ :- ಕೆಂಪೇಗೌಡ ಬಸ್ ನಿಲ್ದಾಣ ಆಗಬೇಕಿತ್ತು ) . ಆ Painter ಗೆ ಸ್ವಲ್ಪ ಕಡಿಮೆ ಹಣ ಕೊಟ್ಟಿರಬೇಕು ಅವನು ಹೀಗೆ ಸೇಡು ತೀರಿಸಿಕೊಂಡಿದ್ದ . ಇದು ಸಣ್ಣ ಅಳತೆಯ ತಪ್ಪುಗಳು "ಅಪಾರ್ಥ " ಅನ್ನುವಂತದ್ದೇನೂ ಇಲ್ಲ . ಭಾರೀ ಅಪಾರ್ಥಕ್ಕೆ ಎಡೆ ಮಾಡುವಂಥ ತಪ್ಪುಗಳನ್ನು ಗಮನಿಸಿದ್ದೇನೆ . ನೆನಪಾದಷ್ಟನ್ನು ಇಲ್ಲಿ ಬರೆದಿದ್ದೇನೆ . ಮೊನ್ನೆ ಸುಭಾಷಿತ ಪುಸ್ತಕ ಅರ್ಥ ( ಅಪಾರ್ಥ ) ಸಮೇತ ಓದುತ್ತಿದ್ದೆ . ಅದರ ಒಂದು ಶ್ಲೋಕ ಮತ್ತು ಅದರ ಅರ್ಥ ಹೀಗೆ ಕೊಟ್ಟಿದ್ದರು . ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾ || ಸಾರಾಂಶ : ಎಲ್ಲಿ ನಾರಿಯರು ಪೂಜಿಸುತ್ತಾರೋ

ಸರಸ -ವಿರಸ

ನಿಮ್ಮ ಹಾಸ್ಯ ನಿಮಗೆ ಅರ್ಥವಾದರೆ ಸಾಕೆ ?? ಜೋಕು ಮಾಡುವ ಗೆಳೆಯ ಒಂದಿನಿತು ಜೋಕೆ || ಹಾಸ್ಯ ಶ್ರೋತೃಗಳಿಗರ್ಥವಾದರೆ ಕ್ಷೇಮ ಅಪಾರ್ಥವಾದರೆ ಗತಿಯು ಕೋದಂಡರಾಮ || ಹಮ್... ಹಾಸ್ಯ ಇದೊಂದು ಬ್ರಹ್ಮಾಸ್ತ್ರ . ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಇದನ್ನು ಎಲ್ಲಿ ಬೇಕಾದರೂ ಬಳಸಬಹುದು . ಆದರೆ ಪರಿಣಾಮದಲ್ಲಿ ಇದು ಸ್ನೇಹಕ್ಕೂ ಸೈ ಸಮರಕ್ಕೂ ಜೈ .ಸಂದರ್ಭೋಚಿತ ಹಾಸ್ಯವೂ ಸೃಷ್ಟಿಯಾಗಬಹುದಾದಂತ ಉದ್ವಿಗ್ನ ವಾತಾವರಣವನ್ನು ಕ್ಷಣಮಾತ್ರದಲ್ಲಿ ತಿಳಿಗೊಳಿಸಬಹುದು ಅಂತೆಯೇ ಅಪಾರ್ಥವಾದ ಹಾಸ್ಯವೂ ಸ್ನೇಹದಲ್ಲಿ ಭಾರೀ ಬಿರುಕು ಸೃಷ್ಟಿಸಬಹುದು.ಈಗ ನೀವೇ ನೋಡಿ , call,chat,email,orkut ಎಂದು ಸದಾ ಸಂಪರ್ಕದಲ್ಲಿರುತ್ತಿದ್ದ ನನ್ನ ಕೆಲವು ಗೆಳೆಯರು ನನ್ನ ಹಾಸ್ಯದ ಬಲಿಪಶುಗಳಾಗಿ ಇಂದು ಒಂದು missed call ಕೂಡ ಕೊಡದೆ ಇರುವುದು ಕಹಿ ಸತ್ಯ . ಅದು ಬಿಡಿ ನನ್ನ ಪ್ರೇಮದಲ್ಲಿ ನನ್ನ ಹಾಸ್ಯ ಹೇಗೆ ಹೇಗೆ ಅಡ್ಡಗಾಲಾಯಿತೆಂಬ ದುರಂತ ಕತೆಯನ್ನು ಹಾಸ್ಯದ ಮುಖಾಂತರ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ . ಹೌದು .. ನಂಬಿದ್ರೆ ನಂಬಿ ಬಿಟ್ರೆ ಬಿಡಿ , ನಾನೂ love ಮಾಡಿದ್ದೀನಿ . ಒಂದಲ್ಲ ಎರಡು ಬಾರಿ ಮತ್ತೆ ಮೂರನೇ ಬಾರಿ attempt ಕೂಡ ಮಾಡಿದ್ದೆ . ಆದರೆ ಪ್ರಥಮ ದ್ವಿತೀಯ ತೃತೀಯ ಎಲ್ಲ ಚುಂಬನದಲ್ಲೂ ದಂತಭಗ್ನವಾಗಿ " ಹಲ್ಲಿಲ್ಲದ ಸರದಾರನಾಗಿ " ಈಗ ಅಖಿಲ ಭಾರತ ಬ್ರಹ್ಮಚಾರಿಗಳ ಸಂಘ (ರಿ) ದ ಸದಸ್ಯನಾಗಿದ್ದೇನೆ . ಏನು ??? ಏನಾಯ್ತು ಎಂದು ಕೇಳು

ರಜತ ಪರದೆಯ ಹಿಂದೆ

******ಏನು ?? ....ಏನು ??..... ಏನು ??.....******** (ನನ್ನ ಕುತ್ತಿಗೆ 0-180 degree 3 ಸಲ ತಿರುಗಿದೆ ) ನಾನು ಬರೆದ ಲೇಖನ ನೀವು ಓದುವುದಿಲ್ಲವಾ ?? ಇಷ್ಟು ದಿನ ನನ್ನ ಸ್ನೇಹಿತರಾಗಿದ್ದಕ್ಕೆ ಒಳ್ಳೆ ಪ್ರಶಸ್ತಿ ಸಿಕ್ಕಿತು ..... Tension ತೆಗೊಬೇಡಿ .... ಇದು ಕನ್ನಡ ಧಾರಾವಾಹಿ ನೋಡಿ ಕಲಿತಿದ್ದು ಅಷ್ಟೆ . ಕಲ್ಯಾಣರೇಖೆ ,ಕುಂಕುಮಭಾಗ್ಯ ,ಕಾದಂಬರಿ , ನಾಕುತಂತಿ ,ಶುಭಲಗ್ನ ,ರಂಗೋಲಿ ,ಸುಕನ್ಯಾ ,ಸುಮತಿ ,ಮಾಂಗಲ್ಯ , ಪಾರ್ವತಿ (ನಿಮ್ಮ ಮನೆ ಮಗಳು ), ಗಂಗೋತ್ರಿ ,ಕಸ್ತೂರಿ ನಿವಾಸ..... ಮತ್ತೆ ಕೊನೆಗೆ ಬುಸ್ಸ್ಸ್ ...."ನಾಗಮ್ಮ " .ಇಷ್ಟು ಧಾರಾವಾಹಿಯಲ್ಲಿ ಪ್ರತಿದಿನ ಒಂದೇ ಒಬ್ಬ ನಟ ಅಥವಾ ಒಬ್ಬ ವೀಕ್ಷಕ ಖಂಡಿತ ಸಾಯುತ್ತಾನೆ . ಅದು ಕೊನೆಗೆ Crime Diary ಯಲ್ಲಿ ಬರುತ್ತದೆ . ಹಮ್.... ಶುರು ಮಾಡೋಣ . ಮೊದಲಿಗೆ "Title song ". ಇದು ತುಂಬಾ important . ಇದರ ರಚನೆ ತುಂಬಾ ಸುಲಭ . ಈ ಕೆಳಗಿನ ದೃಶ್ಯಗಳು ಇದ್ದೆ ಇರುತ್ತವೆ . 1) ಒಬ್ಬಳು ಹುಡುಗಿ ಶಾಲು ಹಿಡಿದುಕೊಂಡು ಗದ್ದೆಯಲ್ಲಿ ಓಡುತ್ತಾಳೆ. 2)ಹುಡುಗಿಯು ಮದರಂಗಿ ಹಚ್ಚಿದ ಕೈಯ್ಯಲ್ಲಿ ಹಣತೆ ಆರಿ ಹೋಗುವುದನ್ನು ತಡೆಯುತ್ತಾಳೆ. 3) ಹೋಳಿಯ ದೃಶ್ಯ ಹುಡುಗ ಹುಡುಗಿಗೆ ಪಿಚಕಾರಿ ಹೊಡೆಯುತ್ತಾನೆ . 4) ಹುಡುಗಿಗೆ ಅವಳ ತಾಯಿ ಕಪಾಳಕ್ಕೆ ಬಾರಿಸುತ್ತಾಳೆ. 5)ಕೊನೆಗೆ ಹುಡುಗಿ 32 ಹಲ್ಲು ತೋರಿಸಿ ನಗುತ್ತಾಳೆ ಅದರ ಪಕ್ಕ ಧಾರಾವಾಹಿಯ ಹೆಸರು ಬರ

ಎಲ್ಲಾರು ಮಾಡುವುದು ಹೊಟ್ಟೆಗಾಗಿ

*********************************ಪುಟಕ್ಕಿಳಿಸುವ ಮುನ್ನ ************************ ನಾನು ಲೇಖಕ - ಕವಿ ಏನೂ ಅಲ್ಲ . ಒಬ್ಬ ಹವ್ಯಾಸಿ ಬರಹಗಾರ ಅಷ್ಟೆ . ಬಹಳಷ್ಟು ಲೇಖನಗಳಲ್ಲಿ "ಸಂಧ್ಯಾಕಾಲ ನೇಸರನು ಅಸ್ತಮಿಸುವಾಗ , ವಸಂತಕಾಲದ ಕೋಗಿಲೆಯ ಕುಹೂ ಕುಹೂ ದನಿಯಲ್ಲಿ ಜನರಿಗೆ ಅದೇನೋ "ಸ್ಪೂರ್ತಿ " ಸಿಗುತ್ತದಂತೆ . ಅದೆಲ್ಲ ನನಗೆ ತಿಳಿಯದು . ಆದರೆ ನಾನು 2nd PUC ನಲ್ಲಿ ಇದ್ದಾಗ ಬರೆದ ಒಂದು ಕವಿತೆ (ನನ್ನ ಬ್ಲಾಗ್ ನಲ್ಲಿ ಮೊದಲನೆ ಕವಿತೆ ) 2 ತಿಂಗಳ ಕಾಲ ಅಜ್ಞಾತವಾಸದಲ್ಲಿತ್ತು. ಕಣ್ತಪ್ಪಿನಿಂದ ಅದನ್ನು ಓದಿದ ನನ್ನ ಅಕ್ಕ ಒಂದು ವೇಳೆ ಅನುನಾಸಿಕ ಪ್ರಯೋಗ ಮಾಡಿದ್ದಲ್ಲಿ ನಾನು ಆ ಕ್ಷಣವೇ ನನ್ನ ಬರವಣಿಗೆಗೆ ಪೂರ್ಣವಿರಾಮ ಇಡುತ್ತಿದ್ದೆ . ಆದರೆ ಅವಳು ತಾನು ಓದಿ ಹೊಗಳಿದ್ದಲ್ಲದೆ ಅಣ್ಣ, ಅಪ್ಪ ಅಮ್ಮ ಎಲ್ಲರಿಗೂ ತೋರಿಸಿದಳು . ಇನ್ನು ನಮ್ಮ ಅಪ್ಪ ...... ನನ್ನ ಆದರ್ಶ ವ್ಯಕ್ತಿ .ಇಂದು ನನ್ನ ಕನ್ನಡಕ್ಕೆ 7/10 ಸಿಕ್ಕಿದರೆ ಅದರಲ್ಲಿ 5 ಅಂಕ ಸೀದಾ ಅಪ್ಪನ Account ಗೆ ಹೋಗುತ್ತದೆ . ಭಾನುವಾರ ಉದಯವಾಣಿ ಸಾಪ್ತಾಹಿಕ ಪುರವಣಿಯ "ಪದಬಂಧ " ಪ್ರತೀವಾರ ಒಟ್ಟಿಗೆ ಕುಳಿತು ಮಾಡುತ್ತಿದ್ದೆವು . ಒಂದು ಚೌಕವೂ ಖಾಲೀ ಉಳಿಯೋಲ್ಲ . ಅವರೋ ನಿಸ್ಸೀಮರು . ನಾನು L - Board . ಒಂದು ಶಬ್ದ ಗೊತ್ತಿಲ್ಲ ಅಂದರೆ ಒಂದು ಪೆಟ್ಟು :) . ಹೀಗೆ ಅವರ ಮುಂದೆ " ಮೆರೆಯುವ " ನಿಟ್ಟಿನಲ್ಲಿ (ಕುಂದಾಪ್ರ ಕನ್ನಡದಲ್ಲ