Skip to main content

Posts

Showing posts from March, 2009

ಕುಂಭಕರ್ಣನ ಡೈರಿಯಿಂದ

ಲೋ ಪಚ್ಚು ನೀನು ಮೂಲತಃ ಯಾವ ಊರಿನವನೋ ??ಬೆಳಿಗ್ಗೆ ಎದ್ದವನೇ ಪ್ರಶಾಂತನಿಗೆ ಕೇಳಿದೆ . ಯಾಕೋ ಏನಾಯ್ತು ?? ಎಂದ. ಏನಿಲ್ಲ ಗುರುವಾರ ರಾತ್ರಿ ನಿದ್ರೆಯಲ್ಲಿ ನೀನು ಕೂಚಿಪುಡಿ ಮಾಡ್ತಾ ಇದ್ದೆ ಆಗ ನೀನು ಆಂಧ್ರದವ ಎಂದುಕೊಂಡೆ . ಮೊನ್ನೆರಾತ್ರಿ ಕಥಕ್ಕಳಿಯಲ್ಲಿ ನಿನ್ನ talent ನೋಡಿ ನೀನು ಪಕ್ಕ ಮಲ್ಲು ಅಂದು ಡಿಸೈಡ್ ಮಾಡಿದೆ .ಆದರೆ ನಿನ್ನೆ ನೀನು ಮಾಡಿದ ಯಕ್ಷಗಾನ ನೋಡಿ full confuse ಆದೆ . ಏನ್ Performance ಲೇ ಅದು . ಗಣಪತಿ ಪೂಜೆ ಮುಗಿದು ಇನ್ನೇನು ಕೋಡಂಗಿ ಪ್ರವೇಶ ಮಾಡಬೇಕೆನ್ನುವಾಗ ನಿಲ್ಲಿಸಿಬಿಟ್ಟೆ . ಅದನ್ನು ನೋಡಿ ನೀನು ಕನ್ನಡಮ್ಮನ ಕಣ್ಮಣಿ ಎಂದು conclude ಮಾಡಿದ್ದೇನೆ ಸರೀನಾ?? ಏನೇ ಹೇಳು ನಿನ್ನದು ಬಹುಮುಖ ಪ್ರತಿಭೆ ಕಣೋ ಎಂದೆನು. ಏನ್ ಮಾಡ್ಲೋ ?? ಅಪ್ಪನದು Job Transfer ಆಗುತ್ತಾ ಇರುತ್ತೆ ಅದಕ್ಕೆ ಹೀಗೆ ಆಗ್ತಾ ಇದೆ ಎಂದ . ಸ್ವಲ್ಪ ದಿನದ ನಂತರ "ಲೋ ಪಚ್ಚು ನಿಮ್ಮಪ್ಪಂಗೆ ಇಂಗ್ಲೆಂಡ್ Transfer ಆಯ್ತಾ ?? ಎಂದು ಕೇಳಿದೆ . "ಯಾಕೋ ???" ಎಂದ . ಏನಿಲ್ಲ ನಿನ್ನೆ ರಾತ್ರಿ ನೀನು Brake Dance ಮಾಡ್ತಾ ಇದ್ದೆ ಅದಕ್ಕೆ Doubt ಬಂತು ಎಂದೆನು . ನಿದ್ದೆ !!!!! ಅದರ ಸವಿಯನ್ನು ನಾನು ವರ್ಣಿಸಬೇಕೆ?? ತುರಿಕೆ ಮತ್ತು ನಿದ್ದೆ ಮಾಡಿದಷ್ಟು ಹೆಚ್ಚಾಗುವುದಲ್ಲದೆ ಇನ್ನೂ ಸ್ವಲ್ಪ ಮಾಡಿದರೆ ಹಾಯಾಗಿರುತ್ತದೆ ಎಂದೆನಿಸುತ್ತದೆ . ಎಲ್ಲಾ ದೇವರ ಅನುಗ್ರಹವಿದ್ದವನೊಡನೆ ನಿದ್ರಾದೇವಿ ಮುನಿಸಿಕ

ನಾನು ನನ್ನ ಸಂಸಾರ

ಭಾನುವಾರ ಬೆಳಿಗ್ಗೆ Breaking News ನ ಹುಡುಕಾಟದಲ್ಲಿ News Paper ಓದುತ್ತ Hall ನಲ್ಲಿ ಕೂತಿದ್ದೆ . ಆದರೆ ಆ Breaking News ನಮ್ಮ ಮನೆಯಲ್ಲೇ ನಡೆಯುತ್ತದೆಂದು ಕನಸಿನಲ್ಲೂ ಯೋಚಿಸಿರಲಿಲ್ಲ . " ರೀ ... ಇವತ್ತು ಉಪ್ಪಿಟ್ಟು ಮಾಡುತ್ತೇನೆ ... ಅಡುಗೆ ಮನೆಯಿಂದ ನನ್ನವಳು ಉಲಿದಳು. ಎದೆ ಝಾಲ್ಲೆಂದಿತು!!!!! ತಕ್ಷಣ ಮೊಬೈಲ್ ಫೋನ್ ನ Contact list ನಲ್ಲಿದ್ದ ಎಲ್ಲರಿಗೂ ಕರೆ ಮಾಡಿ ಮಾತಾಡಿದೆ . "ಏನೋ ..... ಬೆಳಿಗ್ಗೆ ಬೆಳಿಗ್ಗೆ ಫೋನ್ ಮಾಡಿ ಬಿಟ್ಟಿದ್ದೀಯಾ !!!!! ಎಂದು ಎಲ್ರೂ ಕೇಳಿದ್ರು ... ಹೌದು ಮಧ್ಯಾನ್ನ ಹೇಗಿರ್ತೀನಿ ಅಂತ sure ಇಲ್ಲ ಅದಕ್ಕೆ ಈಗಲೇ ಮಾಡಿದೆ ಎಂದೆನು. ಕಳೆದ ಬಾರಿ ನನ್ನವಳ "ಹಸ್ತಗುಣದ" ಬಲಿಪಶುವಾಗಿದ್ದ ರಮೇಶಣ್ಣ ... ಲೋ Insurance Premium ಕಟ್ಟಿದ್ದೀಯ ತಾನೇ ?? ಎಂದು ಕೇಳಿದ . ಹೌದು ಎಂದೆನು . ನನ್ನವಳು ಮನೆಯೊಳಗಿದ್ದರೆ ನನಗೂ ಕೋಟಿ ರುಪಾಯಿ . ಆದರೆ ಅಡುಗೆ ಮನೆ ಹೊಕ್ಕರೆ ಸ್ವಲ್ಪ ಭಯವಾಗುವುದು ಸಹಜ . ಒಹ್ ..... ಕ್ಷಮಿಸಿ ನನ್ನವಳ ಪರಿಚಯ ಮಾಡುವುದೇ ಮರೆತು ಹೋದೆ . ಇವಳ ಹೆಸರು ಸುಶಾಂತಿ . ದೇವರಾಣೆಗೂ ಇದು ಕೇವಲ ಅಂಕಿತನಾಮ . ನನ್ನ ಅತ್ತೆ ಮಾವಂದಿರ ಏಕೈಕ ಪುತ್ರಿ . ಅವರ ಕುಟುಂಬದಲ್ಲಿ ಇವಳ ತಂದೆ ತಾಯಿ ಬಿಟ್ಟು ಬೇರೆ ಎಲ್ಲರಿಗೂ ಗಂಡು ಮಕ್ಕಳು. ಇದರಿಂದಾಗಿ "ಪಾರ್ವತಿಯ " ತರಹ ಇವಳು ಕೂಡ "ಮುದ್ದಿನ ಮನೆಮಗಳು ". " ಆ

ಶಿರವೆಂಬ ಗುಡಿಯೊಳಗೆ ನೆಲೆಸಿರೋ "ಕೇಶ "ವಾ .....

ಲೋ ಸುಮಂತಾ ...... ತಲೆ ಒಳ್ಳೆ ಮರುಭೂಮಿ ಆಗಿ ಬಿಟ್ಟಿದೆಯಲ್ಲೋ !!!!! ನನ್ನ ಮಾನ ಮರ್ಯಾದೆಯ ಕಿಂಚಿತ್ತೂ ಪರಿವೆ ಇಲ್ಲದಂತೆ ಪಬ್ಲಿಕ್ಕಾಗಿ ನನ್ನ ಗೆಳೆಯ "ಸೈಕ್ ಪೋ " ನನ್ನ ಮಾನವನ್ನು ಬಹಿರಂಗ ಹರಾಜಿಗಿಟ್ಟಾಗ ಏನು ಮಾಡುವುದು ತಿಳಿಯದೆ ತಬ್ಬಿಬ್ಬಾದೆ . ತಕ್ಷಣ ಸುಧಾರಿಸಿಕೊಂಡು " ಹೌದೋ ನನ್ನ ತಲೆಯಲ್ಲಿ ಒಳ್ಳೆ ಬುದ್ಧಿ ತುಂಬಿದೆ ನಿನ್ನ ಥರ ಗೊಬ್ರ ಸಗಣಿ ತುಂಬಿದ್ದರೆ ನನ್ನ ಕೂದಲಿಗೂ ಪೋಷಣೆ ಸಿಕ್ಕಿ ಸೊಂಪಾಗಿ ಬೆಳೆದಿರೋದು" ಅಂಥ ಆವಾಜ್ ಹಾಕಿ ಅವನ ಬಾಯಿ ಮುಚ್ಚಿಸಿದೆ .ಇರಲಿ ಬಿಡಿ ಮೊದಮೊದಲು ಹೀಗೆ ಯಾರಾದರೂ ಹೇಳಿದರೆ ನನಗೆ ಸ್ವಲ್ಪ ಬೇಜಾರಾಗ್ತಿತ್ತು ಈಗ ಅಭ್ಯಾಸ ಆಗಿ ಹೋಗಿ ಬಿಟ್ಟಿದೆ . ಅದೇನೋ ಹೇಳ್ತಾರಲ್ಲ "ದಿನಾ ಸಾಯೋರಿಗೆ ಅಳೋರ್ಯಾರು " ಅಂತ ಹಾಗೇನೆ . ದಿನಾ ಹೋಗೋ ನನ್ನ ಕೂದಲಿಗೆ ಬೇಜಾರ್ ಮಾಡ್ಕೋಳ್ಲೋದಕ್ಕೂ ಸಮಯ ಇಲ್ಲದಾಗಿದೆ . ಮೊನ್ನೆ "ಥಟ್ ಅಂತ ಹೇಳಿ " ನೋಡ್ತಾ ಇದ್ದೆ ಅದರ ನಿರೂಪಕರು "ಪ್ರತಿದಿನ ಮನುಷ್ಯರ 40 ಕೂದಲು ಉದುರುತ್ತದೆ ಹಾಗೆ ಬೆಳೆಯುತ್ತದೆ "ಅಂಥ ಹೇಳಿದ್ರು . ನನ್ನ ವಿಷಯದಲ್ಲಿ ಇದು ಸ್ವಲ್ಪ ಎಡವಟ್ಟಾಗಿದೆ . ಬ್ರಹ್ಮನ Program ನ್ನು testing ಮಾಡದೆ production ಗೆ release ಮಾಡಿರಬೇಕು . ಉದುರೋ ವಿಷಯದಲ್ಲಿ ನಲವತ್ತಕ್ಕೆ ಒಂದು ಹತ್ತು ಸೇರಿಸಿಯೇ ಉದುರುತ್ತದೆ ಆದರೆ ಬೆಳೆಯೋ program ಕೆಲಸ ಮಾಡುತ್ತಿಲ್ಲ . ಇದು ತಪ್ಪಲ್ಲವೇ ??.