Skip to main content

ಚಿನಕುರುಳಿ

೧) ಏನೋ ಸುಮಂತಾ ಸಿಗರೇಟ್ ಎಳೀತೀಯೇನೋ ಎಂದು ಅಪ್ಪ ಕೇಳಿದಾಗ "ಅಪ್ಪಾ ಇದೇನು ಆಫರೊ ?? ಎನ್ ಕ್ವಾಯರಿನೊ?? ಎಂದು ಪ್ರಶ್ನಿಸಿದೆ .

೨) "ಇಂಗು ತೆಂಗು ಇದ್ದರೆ ನಮ್ಮ ಶಾಂತಿ ಕೂಡ ಅಡುಗೆ ಮಾಡುತ್ತಾಳೆ" ಎಂದು ಹೇಳಿದಾಗ "ರೀ ನಾಲ್ಕು ಜನರ ಮುಂದೆ ನನ್ನನ್ನು ಹೊಗಳಬೇಡ್ರಿ" ಎಂದು ನನ್ನ ಶಾಂತಿ ನಾಚಿ ನೀರಾದಳು.

೩)ಸಾಕ್ಷರತಾ ಕಾರ್ಯಕ್ರಮದ ಅಂಗವಾಗಿ "ಅನಕ್ಷರಸ್ಥರೇ ಗಮನಿಸಿ"  ಎಂದು ಅನಕ್ಷರತೆಯ ದುಷ್ಪರಿಣಾಮಗಳ ಬಗ್ಗೆ ಬರೆದ ಬ್ಯಾನರ್ ಗಳನ್ನು ತೂಗು ಹಾಕಿದರು.

೪) ಚಿನ್ನದ ಪದಕ ಪಡೆದು ಮೆರಿಟ್ ನಲ್ಲಿ ಬ್ಯಾಂಕ್ ಕೆಲಸಕ್ಕೆ ಸೇರಿಕೊಂಡ ಗ್ರಾಜುಯೇಟ್ ಗಣೇಶನು ಕ್ಯಾಶ್ ನಲ್ಲಿ ಹತ್ತು ರುಪಾಯಿಯ ವ್ಯತ್ಯಾಸ ಕಂಡು ಬಂದಾಗ ಮೊದಲು ನೂರರ ಕಂತೆ ಎಣಿಸಲು ಶುರು ಮಾಡಿದನು.

೫) ತುಂಟತನ ಮಾಡುತ್ತಿದ್ದ ವಿದ್ಯಾರ್ಥಿಯನ್ನು ನೋಡಿ ಸಿಟ್ಟುಗೊಂಡ ತರಗತಿ ಅಧ್ಯಾಪಕರು "ಸಭ್ಯರೊಂದಿಗಿರಲು ನಾಲಾಯಕ್ ನೀನು ಹೋಗು ಹೆಡ್ ಮಾಸ್ಟರ ಬಳಿಗೆ " ಎಂದು ಗುಡುಗಿದರು.

೬)ನೂರು ರುಪಾಯಿ ಕದ್ದು ಜೈಲಿಗೆ ಬಂದು ಪೊಲೀಸರಿಂದ ಸಿಕ್ಕಾಪಟ್ಟೆ ಪೆಟ್ಟು ತಿಂದ ಕಿಸೆಗಳ್ಳನು ಅಜ್ಮಲ್ ಕಸಬ್ ಆರಾಮವಾಗಿ ಬಾಸ್ಮತಿ ಅನ್ನ ಊಟ ಮಾಡುವುದನ್ನು ಕಣ್ಣಾರೆ ನೋಡಿದನು.

೭)ಹತ್ತು ಲೇಖನಗಳಿಂದ ಸ್ವಲ್ಪ ಸ್ವಲ್ಪ ಕದ್ದು , ಖುದ್ದು ಬರೆದ ಲೇಖನವೆಂದು ಪ್ರಕಟಿಸಿದ ಲೇಖನಕ್ಕೆ "ತುಂಬಾ ಚೆನ್ನಾಗಿದೆ" ಎಂದು ಆ ಹತ್ತೂ ಲೇಖಕರು ಪ್ರತಿಕ್ರಿಯಿಸಿದರು.


೮)ಪಾಪ ನನ್ನ ಮಗಳು ಸೋಮವಾರ ತವರಿಗೆ ಬಂದರೆ ನಂತರ ನಾಲ್ಕು ದಿನ ಬಿಟ್ಟು ಶುಕ್ರವಾರವೇ ತವರಿಗೆ ಬರುವುದು ಅದೇ ನನ್ನ ಗಯ್ಯಾಳಿ ಸೊಸೆ ಪ್ರತೀ ದೀಪಾವಳಿಗೆ ತವರಿಗೆ ಹೋಗುತ್ತಾಳೆ ಎಂದು ಅತ್ತೆ ತಮ್ಮ ದುಃಖ ತೋಡಿಕೊಂಡರು.

೯)ಆಗ ತಾನೇ ಉಪನಯನವಾಗಿ ಗಾಯತ್ರೀ ಮಂತ್ರ ಗೊತ್ತಿಲ್ಲ ಎಂದ ವಟುವಿಗೆ " ಯಾಕೋ ಸುಳ್ಳು ಹೇಳ್ತೀಯಾ ?? ಅಪ್ಪ ಆ ದಿನ ಕಾಲ ಮೇಲೆ ಕೂರಿಸಿಕೊಂಡು ಕಿವಿಯಲ್ಲಿ ಏನು ಹೇಳಿಕೊಟ್ಟರೋ?? " ಎಂದು ಬೈದಾಗ ಅಪ್ಪ "ನೋಡು ಈಗ ಎಲ್ಲರೂ ಉಡುಗೊರೆ ಕೊಡುತ್ತಾರೆ ಜಾಗ್ರತೆಯಿಂದ ಎಲ್ಲಾ ತೆಗೆದುಕೊಂಡು ಅಮ್ಮನ ಬಳಿ ಕೊಡು ಎಂದರು" ಎಂದು ಮಾಣಿ ಸತ್ಯ ನುಡಿದ.

೧೦)ಒಬ್ಬಳು ಹೆಂಗಸಿನ ಹಿಂದೆ ಆರು ಮಕ್ಕಳು ಇಳಿದಾಗ " ಏನಮ್ಮಾ.... ಅರ್ಧ ಮಕ್ಕಳನ್ನು ಮನೆಯಲ್ಲಿ ಕೂರಿಸಿ ಇನ್ನು ಉಳಿದವರನ್ನು ಕರೆದುಕೊಂಡು ಬರಬಾರದೆ??" ಎಂದ ಕಂಡಕ್ಟರಗೆ  "ನಾನು ಈಗ ಮಾಡಿದ್ದೂ ಅದನ್ನೇ ಎಂದು ಹೇಳಿ ಆಕೆ ಬಿರಬಿರನೆ ಮುನ್ನಡೆದಳು.

೧೧)ಕಂಪ್ಯೂಟರ್ ಕ್ಲಾಸ್ ನಿಂದ ಮನೆಗೆ ಬಂದ ಎಲ್.ಕೆ.ಜಿ ಪೋರನು ಮನೆಯಲ್ಲಿದ್ದ ಬೀಗದ ಕೈ ಇಡುವ ಕೀ ಬೋರ್ಡು, ಮೌಸು (ಇಲಿ), ವಿಂಡೋಸ್ (ಕಿಟಕಿ),ಚಿಪ್ಪು (CHIP),ಕೆಲಸದ ರಾಮ (RAM),ಸ್ಕ್ರೀನು, ಇದನ್ನೆಲ್ಲಾ ಜೋಡಿಸಿ ಕಂಪ್ಯೂಟರ್ ಮಾಡಿಕೊಡಬೇಕೆಂದು ಹಠ ಹಿಡಿದನು.

=======================ವಿಕಟಕವಿ ==================

Comments

ಬಾಲು said…
ಹತ್ತು ಲೇಖನಗಳಿಂದ ಸ್ವಲ್ಪ ಸ್ವಲ್ಪ ಕದ್ದು , ಖುದ್ದು ಬರೆದ ಲೇಖನವೆಂದು ಪ್ರಕಟಿಸಿದ ಲೇಖನಕ್ಕೆ "ತುಂಬಾ ಚೆನ್ನಾಗಿದೆ" ಎಂದು ಆ ಹತ್ತೂ ಲೇಖಕರು ಪ್ರತಿಕ್ರಿಯಿಸಿದರು....
ತುಂಬಾ ಚೆನ್ನಾಗಿದೆ. :)
ಚೆನ್ನಾಗಿದೆ, ಮೊನ್ನೆ ತಾನೆ ನಿಮ್ಮ ಲೇಖನವನ್ನು ಮಗದೊಬ್ಬರು ತಮ್ಮದೇ ಎಂದು ಒಂದು ದಿನ ಪತ್ರಿಕೆಯಲ್ಲಿ ಹಾಕಿದ್ದರಂತೆ, ಗಮನಿಸಿದಿರೋ..
shridhar said…
This comment has been removed by the author.
shridhar said…
ಸುಮಂತ ಅವರೆ,
ಮಿಂಚಂಚೆಯಲ್ಲಿ ಬಂದ ಪತ್ರ ಹಾಸ್ಯಮಯವಾಗಿದೆಯೆಂದು ನನ್ನ ಬ್ಲೊಗನಲ್ಲಿ ಮೂಲ ಲೇಖಕರ ಕ್ಷಮೆಯಾಚಿಸಿ
ಪ್ರಕಟಿಸಿದ್ದೆ , ತದನಂತರ ಆ ಬರಹ ತಮ್ಮದೆಂದು ತಿಳಿಯಿತು , ತಮ್ಮ ಬ್ಲೊಗ್ ವೀಕ್ಷಿಸಿದೆ,
ತುಂಬ ಹಾಸ್ಯಮಯ ಬರಹಗಳು. ತಾವು ವಿಕಟಕವಿಯೆ ಸರಿ.
ತಮ್ಮ ಅಪ್ಪಣೆಯಿಲ್ಲದೆ ಬರಹವನ್ನು ಪ್ರಕಟಿಸಿದಕ್ಕೆ ಮತ್ತೊಮ್ಮೆ ಕ್ಷಮೆಯಿರಲಿ.
ನಮ್ಮ ಬ್ಲೊಗಗೆ ಒಮ್ಮೆ ಭೇಟಿ ಕೋಡಿ.

ಶ್ರೀಧರ ಭಟ್ಟ.

Popular posts from this blog

ನ್ಯಾನೋ ಕಥೆಗಳು.

1) "ಕರ್ತವ್ಯಂ ದೈವಮಾಹ್ನಿಕಂ " ಎಂದುಕೊಂಡು ಸದಾ ಕಾಲ ಆಫೀಸ್ ಕೆಲಸದಲ್ಲೇ ತೊಡಗಿರುತ್ತಿದ್ದ ಸಾಫ್ಟವೇರ್ ಇಂಜಿನಿಯರ್ ನ ಹಾಲುಗಲ್ಲದ ಪುಟ್ಟ ಮಗು ಅವನನ್ನು ತೋರಿಸಿ "ಅಮ್ಮಾ ....... ಇವರು ಯಾರು ??" ಎಂದು ಕೇಳಿದಾಗ ಅವನಿಗೆ ನಿಜವಾದ ಕರ್ತವ್ಯದ ಅರಿವಾಯಿತು . 2) ಜ್ಯೋತಿಷ್ಯ ಶಾಸ್ತ್ರವನ್ನು ಅರೆದು ಕುಡಿದು ಸೂರ್ಯ - ಚಂದ್ರ - ಗ್ರಹತಾರೆಗಳನ್ನು ಕರತಲಾಮಲಕ ಮಾಡಿಕೊಂಡಿದ್ದ ಸುಬ್ಬಯ್ಯ ಶಾಸ್ತ್ರಿಗಳಿಗೆ ಅವರ ಮಗಳು ಪ್ರಿಯಕರನೊಂದಿಗೆ ಓಡಿ ಹೋಗುವ ವಿಚಾರವನ್ನು ಈ ಆಕಾಶಕಾಯಗಳು ಹೇಳಲೇ ಇಲ್ಲ !!!!. 3) ಮನುಷ್ಯನಿಗೆ ಶೀತವಾಗಲು ಶುರುವಾಗಿದ್ದು ಕೊಡೆ ಕಂಡುಹಿಡಿದ ಮೇಲೆ !!!! 4) ಬೀರುವಿನೊಳಗಿನ ರೇಷ್ಮೆ ಸೀರೆಗಳನ್ನೆಲ್ಲ ಇಲಿ ಕೊಚ್ಚಿ ಹಾಕಿದಾಗ ಕೊಂಚವೂ ಬೇಸರಿಸದ ಕಾವೇರಮ್ಮ ಮಗ ತಂದುಕೊಟ್ಟ ಇನ್ನೂರು ರುಪಾಯಿಯ ಕಾಟನ್ ಸೀರೆಯ ಮೇಲೆ ಸುಕ್ಕು ಬಿದ್ದಾಗ ಬಿಕ್ಕಿ ಬಿಕ್ಕಿ ಅತ್ತಳು . 5) ಅಂಗವಿಕಲರಿಗೆ ಸರಕಾರ ಕೊಡುವ ಸಹಾಯಧನವನ್ನು ಪಡೆಯಲು ತೆವಳಿಕೊಂಡು ಬಂದ ಅಭ್ಯರ್ಥಿಗೆ ಅಧಿಕಾರಿಗಳು ಅಂಗವಿಕಲತೆಯ ಸರ್ಟಿಫಿಕೆಟ್ ಇಲ್ಲದೇ ಹಣ ಮಂಜೂರು ಮಾಡಲಾಗುವುದಿಲ್ಲ ಎಂದರು . 6) ಕದಳಿಯೋಳು ಮದದಾನೆ ಹೊಕ್ಕಂತೆ ನೂರು ಜನ ಶತ್ರುಗಳ ಚಕ್ರವ್ಯೂಹಕ್ಕೆ ನುಗ್ಗಿ ಅದನ್ನು ಧ್ವಂಸಗೈದು ಕ್ಲೈಮ್ಯಾಕ್ಸ್ ನಲ್ಲಿ ನಾಯಕಿಯ ಮಾನ ಕಾಪಾಡಿದ ಹೀರೊನನ್ನು ಕಳ್ಳರು ನಡುರಸ್ತೆಯಲ್ಲಿ ಖಾಲಿ ಪಿಸ್ತೂಲ್ ತೋರಿಸಿ ದೋಚಿದರು . 7) ಮಾರುಕಟ್ಟೆ...

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು...

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋ(ತಿ)ಟಿ ರುಪಾಯಿ (ಖರ್ಚು )

ರೀ.......... ನಿಮ್ಮ ಬಟ್ಟೆ ಇಸ್ತ್ರೀ ಮಾಡಿ ಅಲ್ಲಿ ಇಟ್ಟಿದ್ದೀನಿ. ಹ್ಮ್ ಸರಿ ಎಂದೆನು. ಎನ್ರೀ ಎರಡೇ ಇಡ್ಲಿ ತಿಂದಿದ್ದೀರಾ. ನಾನು ಕಾಫಿ ಮಾಡಿ ತರೋದ್ರೊಳಗೆ ಎದ್ ಬಿಟ್ರಿ ಇನ್ನೊಂದೆರಡು ಹಾಕಿಸ್ಕೊಳ್ಳೋದಲ್ವಾ ?? ಹಸಿವಿಲ್ಲ ಬಿಡೇ... ರೀ... ಶೂ ಪಾಲಿಷ್ ಮಾಡಿ ಇಟ್ಟಿದ್ದೀನಿ. ಲಂಚ್ ಬಾಕ್ಸ್ ಕೂಡಾ ಅಲ್ಲೇ ಇಟ್ಟಿದ್ದೀನಿ ನನ್ನವಳು ಉಲಿದಳು..... ಒಂದು ನಿಮಿಷ...... ಎಲ್ಲೋ ಏನೋ ಒಂದು ಲಿಂಕ್ ತಪ್ಪಿ ಹೊಗ್ತಾ ಇದೆ ಅನ್ನಿಸ್ತು. ಒಂದು ಎರಡು ಗಂಟೆ ಫ್ಲಾಶ್ ಬ್ಯಾಕ್ ಹೋದೆನು. ಅಮ್ಮೋ ................ ಪ್ರತಿದಿನ ಸೂರ್ಯನ ಬಿಸಿಲು ಮುಖಕ್ಕೆ ಹೊಡೆಯುವವರೆಗೂ ಮುಖ ಹೊರಳಿಸಿ ಮಲಗಿ ದಿಂಬು ಬೆಚ್ಚಗಾದ ಮೇಲೆ ಮುಖ ಅರಳಿಸುವ ನನ್ನ ಸೂರ್ಯಕಾಂತಿ ಶಾಂತಿ ಇಂದು ಅಲಾರ್ಮ್ ಬಾರಿಸೋ ಮೊದಲೇ ಎದ್ದು ಚಹಾ ಮಾಡಿ ನನ್ನನ್ನೆಬ್ಬಿಸಿ ಸ್ನಾನಕ್ಕೆ ನೀರಿಟ್ಟು ಇಡ್ಲಿ-ಚಟ್ನಿ  ರೆಡಿ ಮಾಡಿ ಬಟ್ಟೆಗೆ ಇಸ್ತ್ರೀ ಹಾಕಿಟ್ಟು ಶೂ ಪಾಲಿಷ್ ಮಾಡಿ.......................  ಈ ದಿನ ಏನೋ ದೊಡ್ಡ ಹಗಲು ದರೋಡೆ ಆಗುವುದು ಖಂಡಿತ ಎಂದು ಅರಿವಾಯಿತು.ಭಯವಾಯಿತು ಮನಸ್ಸಿಗೆ.ಆದರೂ ತೋರ್ಪಡಿಸದೇ ಕೇಳದವನಂತೆ ಸುಮ್ಮನಿದ್ದೆ. ಆದರೂ ನನ್ನ ಶಾಂತಿ ಬಿಡಬೇಕಲ್ಲ. ರೀssssssssss......... ಮತ್ತೊಮ್ಮೆ ನೋಡು ಆಫೀಸಿಗೆ ಟೈಮ್ ಆಯಿತು ತೆಂಕಣ ಸುತ್ತಿ ಮೈಲಾರಕ್ಕೆ ಬರಬೇಡ. ಸೀದಾ ವಿಷಯಕ್ಕೆ ಬಾ ಎಂದೆನು. ಮೊನ್ನೆ ಪೇಪರ್ ಓದಿದ್ರಾ ?? ಶಾರುಖ್ ಖಾನ್ ಅವ್ನ ಹ...