Skip to main content

ಚಿನಕುರುಳಿ

೧) ಏನೋ ಸುಮಂತಾ ಸಿಗರೇಟ್ ಎಳೀತೀಯೇನೋ ಎಂದು ಅಪ್ಪ ಕೇಳಿದಾಗ "ಅಪ್ಪಾ ಇದೇನು ಆಫರೊ ?? ಎನ್ ಕ್ವಾಯರಿನೊ?? ಎಂದು ಪ್ರಶ್ನಿಸಿದೆ .

೨) "ಇಂಗು ತೆಂಗು ಇದ್ದರೆ ನಮ್ಮ ಶಾಂತಿ ಕೂಡ ಅಡುಗೆ ಮಾಡುತ್ತಾಳೆ" ಎಂದು ಹೇಳಿದಾಗ "ರೀ ನಾಲ್ಕು ಜನರ ಮುಂದೆ ನನ್ನನ್ನು ಹೊಗಳಬೇಡ್ರಿ" ಎಂದು ನನ್ನ ಶಾಂತಿ ನಾಚಿ ನೀರಾದಳು.

೩)ಸಾಕ್ಷರತಾ ಕಾರ್ಯಕ್ರಮದ ಅಂಗವಾಗಿ "ಅನಕ್ಷರಸ್ಥರೇ ಗಮನಿಸಿ"  ಎಂದು ಅನಕ್ಷರತೆಯ ದುಷ್ಪರಿಣಾಮಗಳ ಬಗ್ಗೆ ಬರೆದ ಬ್ಯಾನರ್ ಗಳನ್ನು ತೂಗು ಹಾಕಿದರು.

೪) ಚಿನ್ನದ ಪದಕ ಪಡೆದು ಮೆರಿಟ್ ನಲ್ಲಿ ಬ್ಯಾಂಕ್ ಕೆಲಸಕ್ಕೆ ಸೇರಿಕೊಂಡ ಗ್ರಾಜುಯೇಟ್ ಗಣೇಶನು ಕ್ಯಾಶ್ ನಲ್ಲಿ ಹತ್ತು ರುಪಾಯಿಯ ವ್ಯತ್ಯಾಸ ಕಂಡು ಬಂದಾಗ ಮೊದಲು ನೂರರ ಕಂತೆ ಎಣಿಸಲು ಶುರು ಮಾಡಿದನು.

೫) ತುಂಟತನ ಮಾಡುತ್ತಿದ್ದ ವಿದ್ಯಾರ್ಥಿಯನ್ನು ನೋಡಿ ಸಿಟ್ಟುಗೊಂಡ ತರಗತಿ ಅಧ್ಯಾಪಕರು "ಸಭ್ಯರೊಂದಿಗಿರಲು ನಾಲಾಯಕ್ ನೀನು ಹೋಗು ಹೆಡ್ ಮಾಸ್ಟರ ಬಳಿಗೆ " ಎಂದು ಗುಡುಗಿದರು.

೬)ನೂರು ರುಪಾಯಿ ಕದ್ದು ಜೈಲಿಗೆ ಬಂದು ಪೊಲೀಸರಿಂದ ಸಿಕ್ಕಾಪಟ್ಟೆ ಪೆಟ್ಟು ತಿಂದ ಕಿಸೆಗಳ್ಳನು ಅಜ್ಮಲ್ ಕಸಬ್ ಆರಾಮವಾಗಿ ಬಾಸ್ಮತಿ ಅನ್ನ ಊಟ ಮಾಡುವುದನ್ನು ಕಣ್ಣಾರೆ ನೋಡಿದನು.

೭)ಹತ್ತು ಲೇಖನಗಳಿಂದ ಸ್ವಲ್ಪ ಸ್ವಲ್ಪ ಕದ್ದು , ಖುದ್ದು ಬರೆದ ಲೇಖನವೆಂದು ಪ್ರಕಟಿಸಿದ ಲೇಖನಕ್ಕೆ "ತುಂಬಾ ಚೆನ್ನಾಗಿದೆ" ಎಂದು ಆ ಹತ್ತೂ ಲೇಖಕರು ಪ್ರತಿಕ್ರಿಯಿಸಿದರು.


೮)ಪಾಪ ನನ್ನ ಮಗಳು ಸೋಮವಾರ ತವರಿಗೆ ಬಂದರೆ ನಂತರ ನಾಲ್ಕು ದಿನ ಬಿಟ್ಟು ಶುಕ್ರವಾರವೇ ತವರಿಗೆ ಬರುವುದು ಅದೇ ನನ್ನ ಗಯ್ಯಾಳಿ ಸೊಸೆ ಪ್ರತೀ ದೀಪಾವಳಿಗೆ ತವರಿಗೆ ಹೋಗುತ್ತಾಳೆ ಎಂದು ಅತ್ತೆ ತಮ್ಮ ದುಃಖ ತೋಡಿಕೊಂಡರು.

೯)ಆಗ ತಾನೇ ಉಪನಯನವಾಗಿ ಗಾಯತ್ರೀ ಮಂತ್ರ ಗೊತ್ತಿಲ್ಲ ಎಂದ ವಟುವಿಗೆ " ಯಾಕೋ ಸುಳ್ಳು ಹೇಳ್ತೀಯಾ ?? ಅಪ್ಪ ಆ ದಿನ ಕಾಲ ಮೇಲೆ ಕೂರಿಸಿಕೊಂಡು ಕಿವಿಯಲ್ಲಿ ಏನು ಹೇಳಿಕೊಟ್ಟರೋ?? " ಎಂದು ಬೈದಾಗ ಅಪ್ಪ "ನೋಡು ಈಗ ಎಲ್ಲರೂ ಉಡುಗೊರೆ ಕೊಡುತ್ತಾರೆ ಜಾಗ್ರತೆಯಿಂದ ಎಲ್ಲಾ ತೆಗೆದುಕೊಂಡು ಅಮ್ಮನ ಬಳಿ ಕೊಡು ಎಂದರು" ಎಂದು ಮಾಣಿ ಸತ್ಯ ನುಡಿದ.

೧೦)ಒಬ್ಬಳು ಹೆಂಗಸಿನ ಹಿಂದೆ ಆರು ಮಕ್ಕಳು ಇಳಿದಾಗ " ಏನಮ್ಮಾ.... ಅರ್ಧ ಮಕ್ಕಳನ್ನು ಮನೆಯಲ್ಲಿ ಕೂರಿಸಿ ಇನ್ನು ಉಳಿದವರನ್ನು ಕರೆದುಕೊಂಡು ಬರಬಾರದೆ??" ಎಂದ ಕಂಡಕ್ಟರಗೆ  "ನಾನು ಈಗ ಮಾಡಿದ್ದೂ ಅದನ್ನೇ ಎಂದು ಹೇಳಿ ಆಕೆ ಬಿರಬಿರನೆ ಮುನ್ನಡೆದಳು.

೧೧)ಕಂಪ್ಯೂಟರ್ ಕ್ಲಾಸ್ ನಿಂದ ಮನೆಗೆ ಬಂದ ಎಲ್.ಕೆ.ಜಿ ಪೋರನು ಮನೆಯಲ್ಲಿದ್ದ ಬೀಗದ ಕೈ ಇಡುವ ಕೀ ಬೋರ್ಡು, ಮೌಸು (ಇಲಿ), ವಿಂಡೋಸ್ (ಕಿಟಕಿ),ಚಿಪ್ಪು (CHIP),ಕೆಲಸದ ರಾಮ (RAM),ಸ್ಕ್ರೀನು, ಇದನ್ನೆಲ್ಲಾ ಜೋಡಿಸಿ ಕಂಪ್ಯೂಟರ್ ಮಾಡಿಕೊಡಬೇಕೆಂದು ಹಠ ಹಿಡಿದನು.

=======================ವಿಕಟಕವಿ ==================

Comments

ಬಾಲು said…
ಹತ್ತು ಲೇಖನಗಳಿಂದ ಸ್ವಲ್ಪ ಸ್ವಲ್ಪ ಕದ್ದು , ಖುದ್ದು ಬರೆದ ಲೇಖನವೆಂದು ಪ್ರಕಟಿಸಿದ ಲೇಖನಕ್ಕೆ "ತುಂಬಾ ಚೆನ್ನಾಗಿದೆ" ಎಂದು ಆ ಹತ್ತೂ ಲೇಖಕರು ಪ್ರತಿಕ್ರಿಯಿಸಿದರು....
ತುಂಬಾ ಚೆನ್ನಾಗಿದೆ. :)
ಚೆನ್ನಾಗಿದೆ, ಮೊನ್ನೆ ತಾನೆ ನಿಮ್ಮ ಲೇಖನವನ್ನು ಮಗದೊಬ್ಬರು ತಮ್ಮದೇ ಎಂದು ಒಂದು ದಿನ ಪತ್ರಿಕೆಯಲ್ಲಿ ಹಾಕಿದ್ದರಂತೆ, ಗಮನಿಸಿದಿರೋ..
shridhar said…
This comment has been removed by the author.
shridhar said…
ಸುಮಂತ ಅವರೆ,
ಮಿಂಚಂಚೆಯಲ್ಲಿ ಬಂದ ಪತ್ರ ಹಾಸ್ಯಮಯವಾಗಿದೆಯೆಂದು ನನ್ನ ಬ್ಲೊಗನಲ್ಲಿ ಮೂಲ ಲೇಖಕರ ಕ್ಷಮೆಯಾಚಿಸಿ
ಪ್ರಕಟಿಸಿದ್ದೆ , ತದನಂತರ ಆ ಬರಹ ತಮ್ಮದೆಂದು ತಿಳಿಯಿತು , ತಮ್ಮ ಬ್ಲೊಗ್ ವೀಕ್ಷಿಸಿದೆ,
ತುಂಬ ಹಾಸ್ಯಮಯ ಬರಹಗಳು. ತಾವು ವಿಕಟಕವಿಯೆ ಸರಿ.
ತಮ್ಮ ಅಪ್ಪಣೆಯಿಲ್ಲದೆ ಬರಹವನ್ನು ಪ್ರಕಟಿಸಿದಕ್ಕೆ ಮತ್ತೊಮ್ಮೆ ಕ್ಷಮೆಯಿರಲಿ.
ನಮ್ಮ ಬ್ಲೊಗಗೆ ಒಮ್ಮೆ ಭೇಟಿ ಕೋಡಿ.

ಶ್ರೀಧರ ಭಟ್ಟ.

Popular posts from this blog

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋ(ತಿ)ಟಿ ರುಪಾಯಿ (ಖರ್ಚು )

ರೀ.......... ನಿಮ್ಮ ಬಟ್ಟೆ ಇಸ್ತ್ರೀ ಮಾಡಿ ಅಲ್ಲಿ ಇಟ್ಟಿದ್ದೀನಿ. ಹ್ಮ್ ಸರಿ ಎಂದೆನು. ಎನ್ರೀ ಎರಡೇ ಇಡ್ಲಿ ತಿಂದಿದ್ದೀರಾ. ನಾನು ಕಾಫಿ ಮಾಡಿ ತರೋದ್ರೊಳಗೆ ಎದ್ ಬಿಟ್ರಿ ಇನ್ನೊಂದೆರಡು ಹಾಕಿಸ್ಕೊಳ್ಳೋದಲ್ವಾ ?? ಹಸಿವಿಲ್ಲ ಬಿಡೇ... ರೀ... ಶೂ ಪಾಲಿಷ್ ಮಾಡಿ ಇಟ್ಟಿದ್ದೀನಿ. ಲಂಚ್ ಬಾಕ್ಸ್ ಕೂಡಾ ಅಲ್ಲೇ ಇಟ್ಟಿದ್ದೀನಿ ನನ್ನವಳು ಉಲಿದಳು..... ಒಂದು ನಿಮಿಷ...... ಎಲ್ಲೋ ಏನೋ ಒಂದು ಲಿಂಕ್ ತಪ್ಪಿ ಹೊಗ್ತಾ ಇದೆ ಅನ್ನಿಸ್ತು. ಒಂದು ಎರಡು ಗಂಟೆ ಫ್ಲಾಶ್ ಬ್ಯಾಕ್ ಹೋದೆನು. ಅಮ್ಮೋ ................ ಪ್ರತಿದಿನ ಸೂರ್ಯನ ಬಿಸಿಲು ಮುಖಕ್ಕೆ ಹೊಡೆಯುವವರೆಗೂ ಮುಖ ಹೊರಳಿಸಿ ಮಲಗಿ ದಿಂಬು ಬೆಚ್ಚಗಾದ ಮೇಲೆ ಮುಖ ಅರಳಿಸುವ ನನ್ನ ಸೂರ್ಯಕಾಂತಿ ಶಾಂತಿ ಇಂದು ಅಲಾರ್ಮ್ ಬಾರಿಸೋ ಮೊದಲೇ ಎದ್ದು ಚಹಾ ಮಾಡಿ ನನ್ನನ್ನೆಬ್ಬಿಸಿ ಸ್ನಾನಕ್ಕೆ ನೀರಿಟ್ಟು ಇಡ್ಲಿ-ಚಟ್ನಿ  ರೆಡಿ ಮಾಡಿ ಬಟ್ಟೆಗೆ ಇಸ್ತ್ರೀ ಹಾಕಿಟ್ಟು ಶೂ ಪಾಲಿಷ್ ಮಾಡಿ.......................  ಈ ದಿನ ಏನೋ ದೊಡ್ಡ ಹಗಲು ದರೋಡೆ ಆಗುವುದು ಖಂಡಿತ ಎಂದು ಅರಿವಾಯಿತು.ಭಯವಾಯಿತು ಮನಸ್ಸಿಗೆ.ಆದರೂ ತೋರ್ಪಡಿಸದೇ ಕೇಳದವನಂತೆ ಸುಮ್ಮನಿದ್ದೆ. ಆದರೂ ನನ್ನ ಶಾಂತಿ ಬಿಡಬೇಕಲ್ಲ. ರೀssssssssss......... ಮತ್ತೊಮ್ಮೆ ನೋಡು ಆಫೀಸಿಗೆ ಟೈಮ್ ಆಯಿತು ತೆಂಕಣ ಸುತ್ತಿ ಮೈಲಾರಕ್ಕೆ ಬರಬೇಡ. ಸೀದಾ ವಿಷಯಕ್ಕೆ ಬಾ ಎಂದೆನು. ಮೊನ್ನೆ ಪೇಪರ್ ಓದಿದ್ರಾ ?? ಶಾರುಖ್ ಖಾನ್ ಅವ್ನ ಹ...

ಆಪೀಸಾಯಣ

ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ  ಬಣ್ಣದಲ್ಲಿ ಬರೆದವು ಅವರ ಹೆಸರುಗಳು. ದೇವಾದಿದೇವತೆಗಳು ಸಭೆಯನ್ನು ನಡೆಸಿ ಸಭೆಯೊಳಗೆ ಸು ಮಧು ರ ಕನ್ನಡವ ಬಡಿಸಿ || ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ ಬಂದು ಕೂತಿಹರೆಲ್ಲ tatasky ODC ||               ಕೃಷ್ಣ ನಿಹನಿಲ್ಲಿ  ಇಹನು   ರಘು-ರಾಮ                     ಮಂಜುನಾಥ ರು ತ್ರಿಮೂರ್ತಿಯಲಿ ಹರಸಿರುವ ಧಾಮ ||                     ಪಾವನ-ಪುನೀತರಾಗಿ ಕೇಳಿ ಮೋಹನ ನ ಬಾನ್ಸುರಿ                     ಸ್ವಪ್ನ ದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... || ವಿಘ್ನ ದಿಂ ಕಾಯುತಿಹ ದ್ವಾರದಲೇ ಬೆನಕ ಎಲ್ಲ ದೇವರಿಗೂ ಶರಣು ನಮ್ಮ ಗುರು ಗಳ ತನಕ ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ ಹರುಷ ದಲಿ ಕಳಿಸುವ...