Skip to main content

ದಿಬ್ಬಣ


ಕೇಳಿದಳು ಕನಸಿನಲಿ ಕತ್ರಿನಾ ಕೈಫು
ಆಗಲೇ ಸುಮಂತಾ ನಾ ನಿನ್ನ ವೈಫು
ಹೇಳಿದೆನು ನೀನೊಂದು ಕೆಲಸವನು ಮಾಡು
ಮನೆ ಮುಂದೆ ನಿಂತಿರುವ ಕ್ಯೂವನ್ನು ನೊಡು||

ಸೈಫ ಅಲಿ ಖಾನಲ್ಲಿ ಇಲ್ಲವೊ ದಮ್ಮು
ನನ್ನವನಾಗೋ ಓ  ನನ್ನ ಸುಮ್ಮು!!!!
ಬೇಡುತ್ತ ನಿಂತಿಹಳು ನೋಡು ಕರೀನಾ
ಬಕರಾ ಆಗಲು ನಾನೇನು ಕುರಿ ನಾ ??

ಬಹುಕಾಲದಿಂದ ನಾ ಮೆಚ್ಚಿಹೆನು ನಿನ್ನ
ತಪ್ಪು ಮಾಡಿದೆ ವರಿಸಿ ಸಣ್ಣ ’ಬಚ್ಚಾ’ನನ್ನ ( SMALL  ' B' )
ಓಡಿ ಬರುವೆ ನಾ ಹಿಡಿದು ನಿನ್ನ ಕೈ
ತುದಿಗಾಲ ಮೇಲಿಹಳು ಐಶ್ವರ್ಯ ರೈ||

ನಮ್ಮೂರ ಗಂಡಿವನು ನನಗೆ ಪ್ರಿಫರೆನ್ಸು
ಕ್ವೀನು ನಾನು ನೀನೇ ನನ್ನ ಪ್ರಿನ್ಸು
ಇಲ್ಲ ಅಂದರೆ ನಿನಗೆ ನನ್ನ ಮೇಲಾಣೆ
ಹಕ್ಕು ಚಲಾಯಿಸುತ್ತಿಹಳು ಪಡುಕೋಣೆ||

ಸೌತ್  ಇಂಡಿಯನ್ನರದ್ದು ಸಪರೇಟು ಸಾಲು
ನಾನೇ ಬೇಕೆಂದು ಎಲ್ಲರದು ಗೋಳು
ಒಲ್ಲೆನೆಂದರೆ ನಾನು  ಕುಡಿಯುವೆನು ವಿಷ
ಎಂದು ಬೆದರಿಸುತ್ತಿದ್ದಾಳೆ ತ್ರಿಷಾ

ಜಾನ್ ಹೈ ತು ಎನ್ನುತ್ತಾಳೆ  ಜೆನಿಲಿಯಾ
ಛತ್ರ 'ಪತಿ' ಯಾಗೋ ಎಂದೆನುವ ಶ್ರೀಯಾ
ನನ್ನೊಳಗೆ ನೀನು ನಿನ್ನೊಳಗೆ ನಾನು
ಲಲ್ಲೆಗರೆಯುತ್ತಿರುವಳು ಆಸೀನು||

ಬಿಪಾಷಾ ಮಲ್ಲಿಕಾರನ್ನು ಮಾಡಿದೆ ಅವೈಡು
ರಾಖೀ ಸಾವಂತು ಡಿಸ್ ಕ್ವಾಲಿಫೈಡು
ಬೋಲ್ಡು ಮಾಡಲು ಎಸೆದಿಹಳು ಬಾಲನ್ನು ವಿದ್ಯಾ
ಪ್ರಿಯಾಂಕ ಬರೆದು ಕಳಿಸಿರುವಳು ಪ್ರೇಮ ಪದ್ಯ ||

ಓದಿ ಕವನವ ಶಾಂತಿಗೆ ನೆತ್ತಿಗೇರಿತು ಪಿತ್ತ
ಹುಡುಕಿದಳು ಸೌಟು-ಲಟ್ಟಣಿಗೆ-ಬೆತ್ತ
ಭಯದಿಂದ  ನಾ ಮಂಚದಿಂದಡಿಗೆ ಬಿದ್ದೆ
ಕನಸು ಮುರಿದು ನಾ ನಿದ್ದೆಯಿಂದೆದ್ದೆ !!!

============================ವಿಕಟಕವಿ ==================================


 

Comments

Anonymous said…
ಅದ್ಭುತ ಸಾರ್! ನಿಮ್ಮ ಕವನ ಓದಿ ನಾ ನಕ್ಕಿದ್ದಲ್ಲದೇ, ನನ್ನ ಕವನಗಳೆಲ್ಲಾ ಪೀಚು ಪೀಚಾಗಿ ಕಂಡವು, ಇದೊಂದು ಕವನ ದ ಮುಂದೆ...

ಇದು ಈಗಿನ ಕಾಲದ "ಬಾರೇ ರಾಜಕುಮಾರಿ..ಹೋಗೋಣ ಜಂಬೂ ಸವಾರಿ" !
ಸಾರ್
ನಿಮ್ಮ ಪ್ರತಿಕ್ರಿಯೆ ಓದಿ ಅಟ್ಟ ಏರಿ ಕುಳಿತೆ .
ತುಂಬಾ ಧನ್ಯವಾದಗಳು

ಸುಮಂತ್
Parisarapremi said…
sakkath!! clap clap clap... :-)
Thanks Sindhu thanks Arun

sumanth
ಎಲೋ ವಿಕಟಕವಿ. ನಿನಗೆ ಈ ಹಿರೊಇನ್ ಗಳು ಬೇಡವಾದಲ್ಲಿ, ನನ್ನ ಅಡ್ರ‍ೆಸ್ ಕೊಡ್ತಿನಿ ಕಳಿಸಿಕೊಡು. ಮಧುಸೂದನ ನಾಯಕ್.
PARAANJAPE K.N. said…
ಚೆನ್ನಾಗಿದೆ
Anonymous said…
ಮಧುಸೂದನ್ ರ ಆಫರ್ ಚೆನಾಗಿದೆ ನೋಡಿ ಸಾರ್...;-)
sunaath said…
ಸುಮಂತ,
ಕವನ ಓದಿ ಭಾಳಾ ಖುಶಿ ಆಯ್ತು.
Pavan K said…
Hahaha....ultimate sir.
-Pavan

Popular posts from this blog

ನ್ಯಾನೋ ಕಥೆಗಳು.

1) "ಕರ್ತವ್ಯಂ ದೈವಮಾಹ್ನಿಕಂ " ಎಂದುಕೊಂಡು ಸದಾ ಕಾಲ ಆಫೀಸ್ ಕೆಲಸದಲ್ಲೇ ತೊಡಗಿರುತ್ತಿದ್ದ ಸಾಫ್ಟವೇರ್ ಇಂಜಿನಿಯರ್ ನ ಹಾಲುಗಲ್ಲದ ಪುಟ್ಟ ಮಗು ಅವನನ್ನು ತೋರಿಸಿ "ಅಮ್ಮಾ ....... ಇವರು ಯಾರು ??" ಎಂದು ಕೇಳಿದಾಗ ಅವನಿಗೆ ನಿಜವಾದ ಕರ್ತವ್ಯದ ಅರಿವಾಯಿತು . 2) ಜ್ಯೋತಿಷ್ಯ ಶಾಸ್ತ್ರವನ್ನು ಅರೆದು ಕುಡಿದು ಸೂರ್ಯ - ಚಂದ್ರ - ಗ್ರಹತಾರೆಗಳನ್ನು ಕರತಲಾಮಲಕ ಮಾಡಿಕೊಂಡಿದ್ದ ಸುಬ್ಬಯ್ಯ ಶಾಸ್ತ್ರಿಗಳಿಗೆ ಅವರ ಮಗಳು ಪ್ರಿಯಕರನೊಂದಿಗೆ ಓಡಿ ಹೋಗುವ ವಿಚಾರವನ್ನು ಈ ಆಕಾಶಕಾಯಗಳು ಹೇಳಲೇ ಇಲ್ಲ !!!!. 3) ಮನುಷ್ಯನಿಗೆ ಶೀತವಾಗಲು ಶುರುವಾಗಿದ್ದು ಕೊಡೆ ಕಂಡುಹಿಡಿದ ಮೇಲೆ !!!! 4) ಬೀರುವಿನೊಳಗಿನ ರೇಷ್ಮೆ ಸೀರೆಗಳನ್ನೆಲ್ಲ ಇಲಿ ಕೊಚ್ಚಿ ಹಾಕಿದಾಗ ಕೊಂಚವೂ ಬೇಸರಿಸದ ಕಾವೇರಮ್ಮ ಮಗ ತಂದುಕೊಟ್ಟ ಇನ್ನೂರು ರುಪಾಯಿಯ ಕಾಟನ್ ಸೀರೆಯ ಮೇಲೆ ಸುಕ್ಕು ಬಿದ್ದಾಗ ಬಿಕ್ಕಿ ಬಿಕ್ಕಿ ಅತ್ತಳು . 5) ಅಂಗವಿಕಲರಿಗೆ ಸರಕಾರ ಕೊಡುವ ಸಹಾಯಧನವನ್ನು ಪಡೆಯಲು ತೆವಳಿಕೊಂಡು ಬಂದ ಅಭ್ಯರ್ಥಿಗೆ ಅಧಿಕಾರಿಗಳು ಅಂಗವಿಕಲತೆಯ ಸರ್ಟಿಫಿಕೆಟ್ ಇಲ್ಲದೇ ಹಣ ಮಂಜೂರು ಮಾಡಲಾಗುವುದಿಲ್ಲ ಎಂದರು . 6) ಕದಳಿಯೋಳು ಮದದಾನೆ ಹೊಕ್ಕಂತೆ ನೂರು ಜನ ಶತ್ರುಗಳ ಚಕ್ರವ್ಯೂಹಕ್ಕೆ ನುಗ್ಗಿ ಅದನ್ನು ಧ್ವಂಸಗೈದು ಕ್ಲೈಮ್ಯಾಕ್ಸ್ ನಲ್ಲಿ ನಾಯಕಿಯ ಮಾನ ಕಾಪಾಡಿದ ಹೀರೊನನ್ನು ಕಳ್ಳರು ನಡುರಸ್ತೆಯಲ್ಲಿ ಖಾಲಿ ಪಿಸ್ತೂಲ್ ತೋರಿಸಿ ದೋಚಿದರು . 7) ಮಾರುಕಟ್ಟೆ...

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು...

ಪಟ್ ಪಟ್ ಪಟಾಕಿ !!!

1)ಶರ್ಟಿಗೆ ಎರಡು ಮೀಟರ್ ಬಟ್ಟೆ ಯಾಕ್ರಿ ?? ಪಕ್ಕದ ಓಣಿ ಟೈಲರ್ ಒಂದೂವರೆ ಮೀಟರ್ ಸಾಕು ಎಂದ !!! ಎಂದು ಟೈಲರ್ ನನ್ನು ದಬಾಯಿಸಿದಾಗ ಅವರು ಹೇಳಿದ್ದು ಸರಿ ಆದರೆ ಅವರ ಮಗ ಎರಡನೇ ಕ್ಲಾಸ್ ನನ್ನ ಮಗ ಎಂಟನೆ ಕ್ಲಾಸ್ ಎಂದು ಟೈಲರ್ ಶಾಂತವಾಗಿ ಉತ್ತರಿಸಿದನು. 2)ನಿನಗೋಸ್ಕರ ಚಂದ್ರ - ತಾರೆ - ಚುಕ್ಕೆಗಳನ್ನು ಹೆಕ್ಕಿ ತರಲೇ?? ಎಂದ ಪ್ರಿಯತಮನಿಗೆ "ಅದೆಲ್ಲಾ ಬೇಡಾ  ಮಾರಾಯ ಬಾಯಾರಿಕೆ ಆತಿತ್ತ ಒಂದ್ ಬೊಂಡ (ಎಳನೀರು) ತೆಗೆದುಕೊಡು" ಎಂದಾಗ ಅವನು  "ಮರ ಸುಮಾರು ದೊಡ್ದುಂಟು ಮಾರಾಯ್ತಿ !!!!" ಎಂದು ತಬ್ಬಿಬ್ಬಾದನು. 3)ಸರಸದಲ್ಲಿರಲು ಏನೋ ತಮಾಷೆಗೆ  ನಾನು  "You are so Sweet" ಎಂದು ಹೇಳಿದ್ದನ್ನೇ ನನ್ನ ಶಾಂತಿ ಸೀರಿಯಸ್ಸಾಗಿ ತೆಗೆದುಕೊಂಡು ತಾನು ಕುಳಿತ ಜಾಗದ ಸುತ್ತ ಡಿಡಿಟಿಯ ರಂಗೋಲಿ ಹಾಕಿಕೊಂಡಳು. 4)ಕನ್ನಡದಿಂದ - ಚೈನೀಸ್ ಅನುವಾದ ಭಾಷೆಯ ಪುಸ್ತಕದಿಂದ ಉರು ಹೊಡೆದು ಬೀಜಿಂಗ್ ನ ತರಕಾರಿ ಮಾರುಕಟ್ಟೆಗೆ ಹೋಗಿ "ಸ್ಯಾನ್ ವೊಕ್ಯೊಸ್ಜ್  2kg" ಎಂದು ಕೇಳಿದೊಡನೆ "ಏಯ್ ಮಾಣಿ ಎರ್ಡ್ ಕೇಜೀ ಗುಂಬ್ಳಕಾಯಿ ತೆಕಬಾರಾ " ಎಂದು ಅಂಗಡಿಯ ಮಾಲಿಕನಾದ ಕುಂದಾಪುರದ ಶೀನಣ್ಣ ಬೊಬ್ಬೆ ಹೊಡೆದನು. 5)ಯಕ್ಷಗಾನ ದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾಗ ಅಭ್ಯಾಸಬಲದಿಂದ "ದುಷ್ಟಾ.. ನಿನ್ನ ಎರಡೂ ಕೈಗಳನ್ನು CUT ಮಾಡಿಬಿಡುತ್ತೇನೆ ಎಂದು ಅಬ್ಬರಿಸಿದ ಪಾತ್ರಧಾರಿಗೆ ತಾನು ಆಂಗ್ಲ ಭಾಷಾಪ್ರಯೋಗ ...