Skip to main content

ದಿಬ್ಬಣ


ಕೇಳಿದಳು ಕನಸಿನಲಿ ಕತ್ರಿನಾ ಕೈಫು
ಆಗಲೇ ಸುಮಂತಾ ನಾ ನಿನ್ನ ವೈಫು
ಹೇಳಿದೆನು ನೀನೊಂದು ಕೆಲಸವನು ಮಾಡು
ಮನೆ ಮುಂದೆ ನಿಂತಿರುವ ಕ್ಯೂವನ್ನು ನೊಡು||

ಸೈಫ ಅಲಿ ಖಾನಲ್ಲಿ ಇಲ್ಲವೊ ದಮ್ಮು
ನನ್ನವನಾಗೋ ಓ  ನನ್ನ ಸುಮ್ಮು!!!!
ಬೇಡುತ್ತ ನಿಂತಿಹಳು ನೋಡು ಕರೀನಾ
ಬಕರಾ ಆಗಲು ನಾನೇನು ಕುರಿ ನಾ ??

ಬಹುಕಾಲದಿಂದ ನಾ ಮೆಚ್ಚಿಹೆನು ನಿನ್ನ
ತಪ್ಪು ಮಾಡಿದೆ ವರಿಸಿ ಸಣ್ಣ ’ಬಚ್ಚಾ’ನನ್ನ ( SMALL  ' B' )
ಓಡಿ ಬರುವೆ ನಾ ಹಿಡಿದು ನಿನ್ನ ಕೈ
ತುದಿಗಾಲ ಮೇಲಿಹಳು ಐಶ್ವರ್ಯ ರೈ||

ನಮ್ಮೂರ ಗಂಡಿವನು ನನಗೆ ಪ್ರಿಫರೆನ್ಸು
ಕ್ವೀನು ನಾನು ನೀನೇ ನನ್ನ ಪ್ರಿನ್ಸು
ಇಲ್ಲ ಅಂದರೆ ನಿನಗೆ ನನ್ನ ಮೇಲಾಣೆ
ಹಕ್ಕು ಚಲಾಯಿಸುತ್ತಿಹಳು ಪಡುಕೋಣೆ||

ಸೌತ್  ಇಂಡಿಯನ್ನರದ್ದು ಸಪರೇಟು ಸಾಲು
ನಾನೇ ಬೇಕೆಂದು ಎಲ್ಲರದು ಗೋಳು
ಒಲ್ಲೆನೆಂದರೆ ನಾನು  ಕುಡಿಯುವೆನು ವಿಷ
ಎಂದು ಬೆದರಿಸುತ್ತಿದ್ದಾಳೆ ತ್ರಿಷಾ

ಜಾನ್ ಹೈ ತು ಎನ್ನುತ್ತಾಳೆ  ಜೆನಿಲಿಯಾ
ಛತ್ರ 'ಪತಿ' ಯಾಗೋ ಎಂದೆನುವ ಶ್ರೀಯಾ
ನನ್ನೊಳಗೆ ನೀನು ನಿನ್ನೊಳಗೆ ನಾನು
ಲಲ್ಲೆಗರೆಯುತ್ತಿರುವಳು ಆಸೀನು||

ಬಿಪಾಷಾ ಮಲ್ಲಿಕಾರನ್ನು ಮಾಡಿದೆ ಅವೈಡು
ರಾಖೀ ಸಾವಂತು ಡಿಸ್ ಕ್ವಾಲಿಫೈಡು
ಬೋಲ್ಡು ಮಾಡಲು ಎಸೆದಿಹಳು ಬಾಲನ್ನು ವಿದ್ಯಾ
ಪ್ರಿಯಾಂಕ ಬರೆದು ಕಳಿಸಿರುವಳು ಪ್ರೇಮ ಪದ್ಯ ||

ಓದಿ ಕವನವ ಶಾಂತಿಗೆ ನೆತ್ತಿಗೇರಿತು ಪಿತ್ತ
ಹುಡುಕಿದಳು ಸೌಟು-ಲಟ್ಟಣಿಗೆ-ಬೆತ್ತ
ಭಯದಿಂದ  ನಾ ಮಂಚದಿಂದಡಿಗೆ ಬಿದ್ದೆ
ಕನಸು ಮುರಿದು ನಾ ನಿದ್ದೆಯಿಂದೆದ್ದೆ !!!

============================ವಿಕಟಕವಿ ==================================


 

Comments

Anonymous said…
ಅದ್ಭುತ ಸಾರ್! ನಿಮ್ಮ ಕವನ ಓದಿ ನಾ ನಕ್ಕಿದ್ದಲ್ಲದೇ, ನನ್ನ ಕವನಗಳೆಲ್ಲಾ ಪೀಚು ಪೀಚಾಗಿ ಕಂಡವು, ಇದೊಂದು ಕವನ ದ ಮುಂದೆ...

ಇದು ಈಗಿನ ಕಾಲದ "ಬಾರೇ ರಾಜಕುಮಾರಿ..ಹೋಗೋಣ ಜಂಬೂ ಸವಾರಿ" !
ಸಾರ್
ನಿಮ್ಮ ಪ್ರತಿಕ್ರಿಯೆ ಓದಿ ಅಟ್ಟ ಏರಿ ಕುಳಿತೆ .
ತುಂಬಾ ಧನ್ಯವಾದಗಳು

ಸುಮಂತ್
Parisarapremi said…
sakkath!! clap clap clap... :-)
Thanks Sindhu thanks Arun

sumanth
ಎಲೋ ವಿಕಟಕವಿ. ನಿನಗೆ ಈ ಹಿರೊಇನ್ ಗಳು ಬೇಡವಾದಲ್ಲಿ, ನನ್ನ ಅಡ್ರ‍ೆಸ್ ಕೊಡ್ತಿನಿ ಕಳಿಸಿಕೊಡು. ಮಧುಸೂದನ ನಾಯಕ್.
PARAANJAPE K.N. said…
ಚೆನ್ನಾಗಿದೆ
Anonymous said…
ಮಧುಸೂದನ್ ರ ಆಫರ್ ಚೆನಾಗಿದೆ ನೋಡಿ ಸಾರ್...;-)
sunaath said…
ಸುಮಂತ,
ಕವನ ಓದಿ ಭಾಳಾ ಖುಶಿ ಆಯ್ತು.
Pavan K said…
Hahaha....ultimate sir.
-Pavan

Popular posts from this blog

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋ(ತಿ)ಟಿ ರುಪಾಯಿ (ಖರ್ಚು )

ರೀ.......... ನಿಮ್ಮ ಬಟ್ಟೆ ಇಸ್ತ್ರೀ ಮಾಡಿ ಅಲ್ಲಿ ಇಟ್ಟಿದ್ದೀನಿ. ಹ್ಮ್ ಸರಿ ಎಂದೆನು. ಎನ್ರೀ ಎರಡೇ ಇಡ್ಲಿ ತಿಂದಿದ್ದೀರಾ. ನಾನು ಕಾಫಿ ಮಾಡಿ ತರೋದ್ರೊಳಗೆ ಎದ್ ಬಿಟ್ರಿ ಇನ್ನೊಂದೆರಡು ಹಾಕಿಸ್ಕೊಳ್ಳೋದಲ್ವಾ ?? ಹಸಿವಿಲ್ಲ ಬಿಡೇ... ರೀ... ಶೂ ಪಾಲಿಷ್ ಮಾಡಿ ಇಟ್ಟಿದ್ದೀನಿ. ಲಂಚ್ ಬಾಕ್ಸ್ ಕೂಡಾ ಅಲ್ಲೇ ಇಟ್ಟಿದ್ದೀನಿ ನನ್ನವಳು ಉಲಿದಳು..... ಒಂದು ನಿಮಿಷ...... ಎಲ್ಲೋ ಏನೋ ಒಂದು ಲಿಂಕ್ ತಪ್ಪಿ ಹೊಗ್ತಾ ಇದೆ ಅನ್ನಿಸ್ತು. ಒಂದು ಎರಡು ಗಂಟೆ ಫ್ಲಾಶ್ ಬ್ಯಾಕ್ ಹೋದೆನು. ಅಮ್ಮೋ ................ ಪ್ರತಿದಿನ ಸೂರ್ಯನ ಬಿಸಿಲು ಮುಖಕ್ಕೆ ಹೊಡೆಯುವವರೆಗೂ ಮುಖ ಹೊರಳಿಸಿ ಮಲಗಿ ದಿಂಬು ಬೆಚ್ಚಗಾದ ಮೇಲೆ ಮುಖ ಅರಳಿಸುವ ನನ್ನ ಸೂರ್ಯಕಾಂತಿ ಶಾಂತಿ ಇಂದು ಅಲಾರ್ಮ್ ಬಾರಿಸೋ ಮೊದಲೇ ಎದ್ದು ಚಹಾ ಮಾಡಿ ನನ್ನನ್ನೆಬ್ಬಿಸಿ ಸ್ನಾನಕ್ಕೆ ನೀರಿಟ್ಟು ಇಡ್ಲಿ-ಚಟ್ನಿ  ರೆಡಿ ಮಾಡಿ ಬಟ್ಟೆಗೆ ಇಸ್ತ್ರೀ ಹಾಕಿಟ್ಟು ಶೂ ಪಾಲಿಷ್ ಮಾಡಿ.......................  ಈ ದಿನ ಏನೋ ದೊಡ್ಡ ಹಗಲು ದರೋಡೆ ಆಗುವುದು ಖಂಡಿತ ಎಂದು ಅರಿವಾಯಿತು.ಭಯವಾಯಿತು ಮನಸ್ಸಿಗೆ.ಆದರೂ ತೋರ್ಪಡಿಸದೇ ಕೇಳದವನಂತೆ ಸುಮ್ಮನಿದ್ದೆ. ಆದರೂ ನನ್ನ ಶಾಂತಿ ಬಿಡಬೇಕಲ್ಲ. ರೀssssssssss......... ಮತ್ತೊಮ್ಮೆ ನೋಡು ಆಫೀಸಿಗೆ ಟೈಮ್ ಆಯಿತು ತೆಂಕಣ ಸುತ್ತಿ ಮೈಲಾರಕ್ಕೆ ಬರಬೇಡ. ಸೀದಾ ವಿಷಯಕ್ಕೆ ಬಾ ಎಂದೆನು. ಮೊನ್ನೆ ಪೇಪರ್ ಓದಿದ್ರಾ ?? ಶಾರುಖ್ ಖಾನ್ ಅವ್ನ ಹ...

ಆಪೀಸಾಯಣ

ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ  ಬಣ್ಣದಲ್ಲಿ ಬರೆದವು ಅವರ ಹೆಸರುಗಳು. ದೇವಾದಿದೇವತೆಗಳು ಸಭೆಯನ್ನು ನಡೆಸಿ ಸಭೆಯೊಳಗೆ ಸು ಮಧು ರ ಕನ್ನಡವ ಬಡಿಸಿ || ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ ಬಂದು ಕೂತಿಹರೆಲ್ಲ tatasky ODC ||               ಕೃಷ್ಣ ನಿಹನಿಲ್ಲಿ  ಇಹನು   ರಘು-ರಾಮ                     ಮಂಜುನಾಥ ರು ತ್ರಿಮೂರ್ತಿಯಲಿ ಹರಸಿರುವ ಧಾಮ ||                     ಪಾವನ-ಪುನೀತರಾಗಿ ಕೇಳಿ ಮೋಹನ ನ ಬಾನ್ಸುರಿ                     ಸ್ವಪ್ನ ದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... || ವಿಘ್ನ ದಿಂ ಕಾಯುತಿಹ ದ್ವಾರದಲೇ ಬೆನಕ ಎಲ್ಲ ದೇವರಿಗೂ ಶರಣು ನಮ್ಮ ಗುರು ಗಳ ತನಕ ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ ಹರುಷ ದಲಿ ಕಳಿಸುವ...