Skip to main content

ದಿಬ್ಬಣ


ಕೇಳಿದಳು ಕನಸಿನಲಿ ಕತ್ರಿನಾ ಕೈಫು
ಆಗಲೇ ಸುಮಂತಾ ನಾ ನಿನ್ನ ವೈಫು
ಹೇಳಿದೆನು ನೀನೊಂದು ಕೆಲಸವನು ಮಾಡು
ಮನೆ ಮುಂದೆ ನಿಂತಿರುವ ಕ್ಯೂವನ್ನು ನೊಡು||

ಸೈಫ ಅಲಿ ಖಾನಲ್ಲಿ ಇಲ್ಲವೊ ದಮ್ಮು
ನನ್ನವನಾಗೋ ಓ  ನನ್ನ ಸುಮ್ಮು!!!!
ಬೇಡುತ್ತ ನಿಂತಿಹಳು ನೋಡು ಕರೀನಾ
ಬಕರಾ ಆಗಲು ನಾನೇನು ಕುರಿ ನಾ ??

ಬಹುಕಾಲದಿಂದ ನಾ ಮೆಚ್ಚಿಹೆನು ನಿನ್ನ
ತಪ್ಪು ಮಾಡಿದೆ ವರಿಸಿ ಸಣ್ಣ ’ಬಚ್ಚಾ’ನನ್ನ ( SMALL  ' B' )
ಓಡಿ ಬರುವೆ ನಾ ಹಿಡಿದು ನಿನ್ನ ಕೈ
ತುದಿಗಾಲ ಮೇಲಿಹಳು ಐಶ್ವರ್ಯ ರೈ||

ನಮ್ಮೂರ ಗಂಡಿವನು ನನಗೆ ಪ್ರಿಫರೆನ್ಸು
ಕ್ವೀನು ನಾನು ನೀನೇ ನನ್ನ ಪ್ರಿನ್ಸು
ಇಲ್ಲ ಅಂದರೆ ನಿನಗೆ ನನ್ನ ಮೇಲಾಣೆ
ಹಕ್ಕು ಚಲಾಯಿಸುತ್ತಿಹಳು ಪಡುಕೋಣೆ||

ಸೌತ್  ಇಂಡಿಯನ್ನರದ್ದು ಸಪರೇಟು ಸಾಲು
ನಾನೇ ಬೇಕೆಂದು ಎಲ್ಲರದು ಗೋಳು
ಒಲ್ಲೆನೆಂದರೆ ನಾನು  ಕುಡಿಯುವೆನು ವಿಷ
ಎಂದು ಬೆದರಿಸುತ್ತಿದ್ದಾಳೆ ತ್ರಿಷಾ

ಜಾನ್ ಹೈ ತು ಎನ್ನುತ್ತಾಳೆ  ಜೆನಿಲಿಯಾ
ಛತ್ರ 'ಪತಿ' ಯಾಗೋ ಎಂದೆನುವ ಶ್ರೀಯಾ
ನನ್ನೊಳಗೆ ನೀನು ನಿನ್ನೊಳಗೆ ನಾನು
ಲಲ್ಲೆಗರೆಯುತ್ತಿರುವಳು ಆಸೀನು||

ಬಿಪಾಷಾ ಮಲ್ಲಿಕಾರನ್ನು ಮಾಡಿದೆ ಅವೈಡು
ರಾಖೀ ಸಾವಂತು ಡಿಸ್ ಕ್ವಾಲಿಫೈಡು
ಬೋಲ್ಡು ಮಾಡಲು ಎಸೆದಿಹಳು ಬಾಲನ್ನು ವಿದ್ಯಾ
ಪ್ರಿಯಾಂಕ ಬರೆದು ಕಳಿಸಿರುವಳು ಪ್ರೇಮ ಪದ್ಯ ||

ಓದಿ ಕವನವ ಶಾಂತಿಗೆ ನೆತ್ತಿಗೇರಿತು ಪಿತ್ತ
ಹುಡುಕಿದಳು ಸೌಟು-ಲಟ್ಟಣಿಗೆ-ಬೆತ್ತ
ಭಯದಿಂದ  ನಾ ಮಂಚದಿಂದಡಿಗೆ ಬಿದ್ದೆ
ಕನಸು ಮುರಿದು ನಾ ನಿದ್ದೆಯಿಂದೆದ್ದೆ !!!

============================ವಿಕಟಕವಿ ==================================


 

Comments

Anonymous said…
ಅದ್ಭುತ ಸಾರ್! ನಿಮ್ಮ ಕವನ ಓದಿ ನಾ ನಕ್ಕಿದ್ದಲ್ಲದೇ, ನನ್ನ ಕವನಗಳೆಲ್ಲಾ ಪೀಚು ಪೀಚಾಗಿ ಕಂಡವು, ಇದೊಂದು ಕವನ ದ ಮುಂದೆ...

ಇದು ಈಗಿನ ಕಾಲದ "ಬಾರೇ ರಾಜಕುಮಾರಿ..ಹೋಗೋಣ ಜಂಬೂ ಸವಾರಿ" !
ಸಾರ್
ನಿಮ್ಮ ಪ್ರತಿಕ್ರಿಯೆ ಓದಿ ಅಟ್ಟ ಏರಿ ಕುಳಿತೆ .
ತುಂಬಾ ಧನ್ಯವಾದಗಳು

ಸುಮಂತ್
Parisarapremi said…
sakkath!! clap clap clap... :-)
Thanks Sindhu thanks Arun

sumanth
ಎಲೋ ವಿಕಟಕವಿ. ನಿನಗೆ ಈ ಹಿರೊಇನ್ ಗಳು ಬೇಡವಾದಲ್ಲಿ, ನನ್ನ ಅಡ್ರ‍ೆಸ್ ಕೊಡ್ತಿನಿ ಕಳಿಸಿಕೊಡು. ಮಧುಸೂದನ ನಾಯಕ್.
PARAANJAPE K.N. said…
ಚೆನ್ನಾಗಿದೆ
Anonymous said…
ಮಧುಸೂದನ್ ರ ಆಫರ್ ಚೆನಾಗಿದೆ ನೋಡಿ ಸಾರ್...;-)
sunaath said…
ಸುಮಂತ,
ಕವನ ಓದಿ ಭಾಳಾ ಖುಶಿ ಆಯ್ತು.
Pavan K said…
Hahaha....ultimate sir.
-Pavan

Popular posts from this blog

ಆಪೀಸಾಯಣ

ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ  ಬಣ್ಣದಲ್ಲಿ ಬರೆದವು ಅವರ ಹೆಸರುಗಳು. ದೇವಾದಿದೇವತೆಗಳು ಸಭೆಯನ್ನು ನಡೆಸಿ ಸಭೆಯೊಳಗೆ ಸು ಮಧು ರ ಕನ್ನಡವ ಬಡಿಸಿ || ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ ಬಂದು ಕೂತಿಹರೆಲ್ಲ tatasky ODC ||               ಕೃಷ್ಣ ನಿಹನಿಲ್ಲಿ  ಇಹನು   ರಘು-ರಾಮ                     ಮಂಜುನಾಥ ರು ತ್ರಿಮೂರ್ತಿಯಲಿ ಹರಸಿರುವ ಧಾಮ ||                     ಪಾವನ-ಪುನೀತರಾಗಿ ಕೇಳಿ ಮೋಹನ ನ ಬಾನ್ಸುರಿ                     ಸ್ವಪ್ನ ದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... || ವಿಘ್ನ ದಿಂ ಕಾಯುತಿಹ ದ್ವಾರದಲೇ ಬೆನಕ ಎಲ್ಲ ದೇವರಿಗೂ ಶರಣು ನಮ್ಮ ಗುರು ಗಳ ತನಕ ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ ಹರುಷ ದಲಿ ಕಳಿಸುವ...

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...

ಎರಡರ ಸ್ವಗತ

  ಇದೊಂದು ಅನಾದಿ ಕಾಲದಿಂದ ನಡೆದು ಬಂದ  ದೌರ್ಜನ್ಯ,ದಬ್ಬಾಳಿಕೆ,ಶೋಷಣೆಯ ಕಥೆ.ಕರುಣೆಯಿಲ್ಲದ ಈ ಸಮಾಜವು ಒಂದು ಪ್ರತಿಭೆಯನ್ನು ಹೇಗೆ ತನ್ನ ಕಪಿಮುಷ್ಠಿಯಲ್ಲಿ ಅದುಮಿ ಹಿಡಿದಿಟ್ಟುಕೊಳ್ಳಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆ.   ನಾನು "ಎರಡು".ಒಂದು ಒಂದು ಸೇರಿ ಎರಡಾದ್ದರಿಂದ ನನ್ನನ್ನು ಏಕಾತ್ಮಜ ಎಂದೂ ಕರೆಯಬಹುದು.ವಸ್ತುಶಃ ನನ್ನಲ್ಲಿ ಯಾವ ಲೋಪದೋಷಗಳಿಲ್ಲದೆ ಹೋದರೂ ವಿನಾಕಾರಣ ನನ್ನನ್ನು ಹೀನಾಯವಾಗಿ ನೋಡಲಾಗುತ್ತದೆ.ಅಷ್ಟೇ ಅಲ್ಲದೆ ಸ್ವತಂತ್ರವಾಗಿ ಗೌರವಾನ್ವಿತರಾಗಿರುವ ಯಾರಾದರೂ ನನ್ನೊಡನೆ ಸಂಬಂಧ ಬೆಳೆಸಿಕೊಂಡರೆ ಅವರ ಗೌರವಕ್ಕೂ ಕಪ್ಪು ಮಸಿ ಬಳಿಯಲಾಗುತ್ತದೆ.   ಈಗ ನೀವೇ ನೋಡಿ  ಒಂದೇ  ಮಾತಿನಲ್ಲಿ ಹೇಳುವುದಾದರೆ,ಅಂಕೆ ಸಂಖ್ಯೆಗಳಲ್ಲಿ ೧ ಯಾವತ್ತೂ ರಾಜ.ಮೊದಲಿಗ,ಯಾರಿಂದಲೂ ಪೂರ್ಣವಾಗಿ ಭಾಗಿಸಲ್ಪಡದ ಆದರೆ  ಎಲ್ಲ ಸಂಖ್ಯೆಗಳನ್ನೂ ಭಾಗಿಸಬಲ್ಲ ತಾಕತ್ತು ಇದಕ್ಕಿದೆ.ಆದರೆ ಅರಸನ ಮುಂದಿರಬೇಡ,ಕತ್ತೆಯ ಹಿಂದಿರಬೇಡ ಎಂಬ ನಾಣ್ಣುಡಿಗೆ ವ್ಯತಿರಿಕ್ತವೆಂಬಂತೆ ನಾನು ಈ ರಾಜ ೧ ರ ಮುಂದೆ ,ಆ ಥರ್ಡ್ ಕ್ಲಾಸ್ ೩ ರ ಹಿಂದೆ ಕೂತಿದ್ದೇನೆ.ಈ ಜನ್ಮ ಕುಂಡಲಿಯ ದೋಷದಿಂದಲೇ ನಾನು ಯಾರ ಅಕ್ಕಪಕ್ಕ ಹೋಗಿ ಕೂತರೂ ಅವರ ವಾಸ್ತುಶಾಸ್ತ್ರ ಅಲ್ಲೋಲಕಲ್ಲೋಲವಾಗುತ್ತದೆ.  ಸಾಮಾಜಿಕ ಜೀವನದಲ್ಲೂ ಮೊದಲನೇ ಮದುವೆಗಿದ್ದಷ್ಟು ಮರ್ಯಾದೆ ಎರಡನೇಯದಕ್ಕಿಲ್ಲ.ಎದುರಿಗೆ ಎಲ್ಲರೂ ಸಂತೋಷದಿಂದಿದ್ದರೂ ಒಳಗೊಳಗೇ   ಕುಹಕ...