Skip to main content

ಪಟ್ ಪಟ್ ಪಟಾಕಿ !!!

1)ಶರ್ಟಿಗೆ ಎರಡು ಮೀಟರ್ ಬಟ್ಟೆ ಯಾಕ್ರಿ ?? ಪಕ್ಕದ ಓಣಿ ಟೈಲರ್ ಒಂದೂವರೆ ಮೀಟರ್ ಸಾಕು ಎಂದ !!! ಎಂದು ಟೈಲರ್ ನನ್ನು ದಬಾಯಿಸಿದಾಗ ಅವರು ಹೇಳಿದ್ದು ಸರಿ ಆದರೆ ಅವರ ಮಗ ಎರಡನೇ ಕ್ಲಾಸ್ ನನ್ನ ಮಗ ಎಂಟನೆ ಕ್ಲಾಸ್ ಎಂದು ಟೈಲರ್ ಶಾಂತವಾಗಿ ಉತ್ತರಿಸಿದನು.

2)ನಿನಗೋಸ್ಕರ ಚಂದ್ರ - ತಾರೆ - ಚುಕ್ಕೆಗಳನ್ನು ಹೆಕ್ಕಿ ತರಲೇ?? ಎಂದ ಪ್ರಿಯತಮನಿಗೆ "ಅದೆಲ್ಲಾ ಬೇಡಾ  ಮಾರಾಯ ಬಾಯಾರಿಕೆ ಆತಿತ್ತ ಒಂದ್ ಬೊಂಡ (ಎಳನೀರು) ತೆಗೆದುಕೊಡು" ಎಂದಾಗ ಅವನು  "ಮರ ಸುಮಾರು ದೊಡ್ದುಂಟು ಮಾರಾಯ್ತಿ !!!!" ಎಂದು ತಬ್ಬಿಬ್ಬಾದನು.

3)ಸರಸದಲ್ಲಿರಲು ಏನೋ ತಮಾಷೆಗೆ  ನಾನು  "You are so Sweet" ಎಂದು ಹೇಳಿದ್ದನ್ನೇ ನನ್ನ ಶಾಂತಿ ಸೀರಿಯಸ್ಸಾಗಿ ತೆಗೆದುಕೊಂಡು ತಾನು ಕುಳಿತ ಜಾಗದ ಸುತ್ತ ಡಿಡಿಟಿಯ ರಂಗೋಲಿ ಹಾಕಿಕೊಂಡಳು.

4)ಕನ್ನಡದಿಂದ - ಚೈನೀಸ್ ಅನುವಾದ ಭಾಷೆಯ ಪುಸ್ತಕದಿಂದ ಉರು ಹೊಡೆದು ಬೀಜಿಂಗ್ ನ ತರಕಾರಿ ಮಾರುಕಟ್ಟೆಗೆ ಹೋಗಿ "ಸ್ಯಾನ್ ವೊಕ್ಯೊಸ್ಜ್  2kg" ಎಂದು ಕೇಳಿದೊಡನೆ "ಏಯ್ ಮಾಣಿ ಎರ್ಡ್ ಕೇಜೀ ಗುಂಬ್ಳಕಾಯಿ ತೆಕಬಾರಾ " ಎಂದು ಅಂಗಡಿಯ ಮಾಲಿಕನಾದ ಕುಂದಾಪುರದ ಶೀನಣ್ಣ ಬೊಬ್ಬೆ ಹೊಡೆದನು.

5)ಯಕ್ಷಗಾನ ದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾಗ ಅಭ್ಯಾಸಬಲದಿಂದ "ದುಷ್ಟಾ.. ನಿನ್ನ ಎರಡೂ ಕೈಗಳನ್ನು CUT ಮಾಡಿಬಿಡುತ್ತೇನೆ ಎಂದು ಅಬ್ಬರಿಸಿದ ಪಾತ್ರಧಾರಿಗೆ ತಾನು ಆಂಗ್ಲ ಭಾಷಾಪ್ರಯೋಗ ಮಾಡಿದೆನೆಂದು ಅರಿವಾಗಿ ತಕ್ಷಣವೇ "SORRY"  ಎಂದನು.

6)ಅಮೇರಿಕಾದಿಂದ ಊರಿಗೆ ರಜಾದಿನದಲ್ಲಿ ಅಜ್ಜಿ ಮನೆಗೆ ಬಂದ ಪುಟ್ಟ ಅಜ್ಜಿಯನ್ನು ತುಂಬಾ ಹಚ್ಚಿಕೊಂಡು ವಾಪಾಸು ಹೋಗುವಾಗ "ಅಜ್ಜಿ ನೀನು ಆರ್ಕುಟ್ ನಲ್ಲಿ ಇದ್ದೀಯಾ ?? ಎಂದು ಕೇಳಿದನು.

7)ಸುದೃಢ ಸಮ್ಮಿಶ್ರ ಸರ್ಕಾರಕ್ಕೆ ಒಂದು ಉದಾಹರಣೆ ಕೊಡಿ ಎಂದಾಗ "ಸಾರ್ ಮೊನ್ನೆಯ ತೊವ್ವೆ ನಿನ್ನೆಯ ರಸಮ್ ಬೆಳಿಗ್ಗೆಯ ಚಟ್ನಿಗಳ ಮೈತ್ರಿಯಿಂದ ಆಗಿರುವ ನಮ್ಮಮ್ಮನ ಸಾಂಬಾರ್" ಎಂದೆನು.

8)ಚಿಕ್ಕ ಮಗು ಅರ್ಥವಾಗದು ಎಂದುಕೊಂಡು "ನೋಡು ಪುಟ್ಟಾ.. ಈ ಚೀಟಿಯಲ್ಲಿ ಒಂದು ಸುಳಿವು ಇದೆ ಅದನ್ನು ಅರ್ಥ ಮಾಡಿಕೊಂಡು ಆ ಸ್ಥಳಕ್ಕೆ ಹೋದರೆ ಅಲ್ಲಿ ಇನ್ನೊಂದು ಸುಳಿವು ಸಿಗುತ್ತದೆ ಹೀಗೆ ಕೊನೆಯವರೆ ಹೋದರೆ ನಿನಗೆ ಬಹುಮಾನ ಎಂದು ನಿರ್ವಾಹಕ ಹೇಳಿದಾಗ... ಒಹ್!! Treasure Hunt ಅಲ್ವಾ ?? ಸರಿ ಅಂಕಲ್ ಎಂದು ಪುಟ್ಟ ಮುನ್ನಡೆದ.

9) "ಚಾಲಕನ ಹಿಂದಿನ ನಾಲ್ಕು ಸೀಟುಗಳು ಮಹಿಳೆಯರಿಗೆ ಮೀಸಲು" ಬರೆದದ್ದನ್ನು ಓದಿ ಅಲ್ಲೇ ಸೀಟಿನ ಕೆಳಗೆ ಕ್ಲೀನರ್ ಇಟ್ಟಿದ್ದ ನೀರಿನ ಬಾಲ್ದಿ ಮತ್ತು ಚೆಂಬನ್ನು ನೋಡಿ ಕುಂದಾಪುರದ ಕಣ್ಮಣಿ ಹೌಹಾರಿದನು. ( ಕುಂದಾಪುರ ಕನ್ನಡದಲ್ಲಿ ಮೀಸಲು ಎಂದರೆ ಸ್ನಾನ ಮಾಡಿಸಲು ಎಂದರ್ಥ  )

10)ನಿದ್ದೆಗೆಟ್ಟು ಊಟ ಬಿಟ್ಟು ಹಗಲಿರುಳೂ ಕಷ್ಟಪಟ್ಟು ಮಹಾವಿಜ್ಞಾನಿಯು seedless ನೆಲಗಡಲೆಯನ್ನು ಕಂಡುಹಿಡಿದನು.

==========================================ವಿಕಟಕವಿ ========================

Comments

Anonymous said…
Super :-)
PARAANJAPE K.N. said…
ಎಲ್ಲೋಗಿದ್ರಿ ಮಾರಾಯ್ರೇ ಇಷ್ಟು ದಿವ್ಸ, ಪಟಾಕಿ ಜೋರಾಗಿದೆ. ಮುಂದುವರಿಸಿ, ಬಿಡಬೇಡಿ
Anonymous said…
Superb dude!
Anonymous said…
As usual super guruve...

inti,
follower of u r blog
Thanks you all

yours sincerely
Sumanth
ಪಟಾಕಿ ಜೋರಾಗಿದೆ. ನಕ್ಕು ನಕ್ಕು ಸಾಕಾಯ್ತು.

Popular posts from this blog

ಆಪೀಸಾಯಣ

ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ  ಬಣ್ಣದಲ್ಲಿ ಬರೆದವು ಅವರ ಹೆಸರುಗಳು. ದೇವಾದಿದೇವತೆಗಳು ಸಭೆಯನ್ನು ನಡೆಸಿ ಸಭೆಯೊಳಗೆ ಸು ಮಧು ರ ಕನ್ನಡವ ಬಡಿಸಿ || ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ ಬಂದು ಕೂತಿಹರೆಲ್ಲ tatasky ODC ||               ಕೃಷ್ಣ ನಿಹನಿಲ್ಲಿ  ಇಹನು   ರಘು-ರಾಮ                     ಮಂಜುನಾಥ ರು ತ್ರಿಮೂರ್ತಿಯಲಿ ಹರಸಿರುವ ಧಾಮ ||                     ಪಾವನ-ಪುನೀತರಾಗಿ ಕೇಳಿ ಮೋಹನ ನ ಬಾನ್ಸುರಿ                     ಸ್ವಪ್ನ ದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... || ವಿಘ್ನ ದಿಂ ಕಾಯುತಿಹ ದ್ವಾರದಲೇ ಬೆನಕ ಎಲ್ಲ ದೇವರಿಗೂ ಶರಣು ನಮ್ಮ ಗುರು ಗಳ ತನಕ ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ ಹರುಷ ದಲಿ ಕಳಿಸುವ...

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...

ಎರಡರ ಸ್ವಗತ

  ಇದೊಂದು ಅನಾದಿ ಕಾಲದಿಂದ ನಡೆದು ಬಂದ  ದೌರ್ಜನ್ಯ,ದಬ್ಬಾಳಿಕೆ,ಶೋಷಣೆಯ ಕಥೆ.ಕರುಣೆಯಿಲ್ಲದ ಈ ಸಮಾಜವು ಒಂದು ಪ್ರತಿಭೆಯನ್ನು ಹೇಗೆ ತನ್ನ ಕಪಿಮುಷ್ಠಿಯಲ್ಲಿ ಅದುಮಿ ಹಿಡಿದಿಟ್ಟುಕೊಳ್ಳಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆ.   ನಾನು "ಎರಡು".ಒಂದು ಒಂದು ಸೇರಿ ಎರಡಾದ್ದರಿಂದ ನನ್ನನ್ನು ಏಕಾತ್ಮಜ ಎಂದೂ ಕರೆಯಬಹುದು.ವಸ್ತುಶಃ ನನ್ನಲ್ಲಿ ಯಾವ ಲೋಪದೋಷಗಳಿಲ್ಲದೆ ಹೋದರೂ ವಿನಾಕಾರಣ ನನ್ನನ್ನು ಹೀನಾಯವಾಗಿ ನೋಡಲಾಗುತ್ತದೆ.ಅಷ್ಟೇ ಅಲ್ಲದೆ ಸ್ವತಂತ್ರವಾಗಿ ಗೌರವಾನ್ವಿತರಾಗಿರುವ ಯಾರಾದರೂ ನನ್ನೊಡನೆ ಸಂಬಂಧ ಬೆಳೆಸಿಕೊಂಡರೆ ಅವರ ಗೌರವಕ್ಕೂ ಕಪ್ಪು ಮಸಿ ಬಳಿಯಲಾಗುತ್ತದೆ.   ಈಗ ನೀವೇ ನೋಡಿ  ಒಂದೇ  ಮಾತಿನಲ್ಲಿ ಹೇಳುವುದಾದರೆ,ಅಂಕೆ ಸಂಖ್ಯೆಗಳಲ್ಲಿ ೧ ಯಾವತ್ತೂ ರಾಜ.ಮೊದಲಿಗ,ಯಾರಿಂದಲೂ ಪೂರ್ಣವಾಗಿ ಭಾಗಿಸಲ್ಪಡದ ಆದರೆ  ಎಲ್ಲ ಸಂಖ್ಯೆಗಳನ್ನೂ ಭಾಗಿಸಬಲ್ಲ ತಾಕತ್ತು ಇದಕ್ಕಿದೆ.ಆದರೆ ಅರಸನ ಮುಂದಿರಬೇಡ,ಕತ್ತೆಯ ಹಿಂದಿರಬೇಡ ಎಂಬ ನಾಣ್ಣುಡಿಗೆ ವ್ಯತಿರಿಕ್ತವೆಂಬಂತೆ ನಾನು ಈ ರಾಜ ೧ ರ ಮುಂದೆ ,ಆ ಥರ್ಡ್ ಕ್ಲಾಸ್ ೩ ರ ಹಿಂದೆ ಕೂತಿದ್ದೇನೆ.ಈ ಜನ್ಮ ಕುಂಡಲಿಯ ದೋಷದಿಂದಲೇ ನಾನು ಯಾರ ಅಕ್ಕಪಕ್ಕ ಹೋಗಿ ಕೂತರೂ ಅವರ ವಾಸ್ತುಶಾಸ್ತ್ರ ಅಲ್ಲೋಲಕಲ್ಲೋಲವಾಗುತ್ತದೆ.  ಸಾಮಾಜಿಕ ಜೀವನದಲ್ಲೂ ಮೊದಲನೇ ಮದುವೆಗಿದ್ದಷ್ಟು ಮರ್ಯಾದೆ ಎರಡನೇಯದಕ್ಕಿಲ್ಲ.ಎದುರಿಗೆ ಎಲ್ಲರೂ ಸಂತೋಷದಿಂದಿದ್ದರೂ ಒಳಗೊಳಗೇ   ಕುಹಕ...