Skip to main content

ನೋಡಿ ಸ್ವಾಮೀ ನಾವಿರೋದೇ ಹೀಗೆ

========================================

ನೋಡೀ... ಸ್ವಾಮೀ.... ನಾವಿರೋದೆ ಹೀಗೆ

========================================



ನಾನು ಯಾರು ? ಹೇಗೆ ? ಯಾಕೆ ?? ನೂರು ಪ್ರಶ್ನೆ ಎಸೆದೆ

ಬಂದ ಉತ್ತರಗಳ ಕೂಡಿ ಕವನವೊಂದ ಹೊಸೆದೆ|

ಬರೆಯುತಿರುವೆ ಈ ಕವನದಿ ನಾನು ನನ್ನ ಬಗ್ಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ||



ಎಂಜಿನಿಯರಿಂಗ್ ಓದಿ ಟೀಸಿಯೆಸ್ಸಿನಲ್ಲಿ ದುಡಿಮೆ

ಕೃಷ್ಣವರ್ಣ ತಲೆಯ ಮೇಲೆ ಕೂದ್ಲು ಸ್ವಲ್ಪ ಕಡಿಮೆ

ಕುಂದಾಪುರದವನು ಇರುವೆ ಬೆಂಗಳೂರಿನಾಗೆ

ಹೋಯ್ ಮಾರಾಯ್ರೆ... ನಾವಿಪ್ಪುದೇ ಹೀಂಗೆ!!



ಇಹುದು ನನಗೆ ಕವಿತೆ ಕವನ ಬರೆಯುವಂತ ಹುಚ್ಚು

ಮೌನ ಕೂಡಿ ಬರದು ನನಗೆ ಮಾತು ಸ್ವಲ್ಪ ಹೆಚ್ಚು

ಮನದ ಮಾತ ಹಾಕಿ ಬಿಡುವೆ ಪೇಪರಲ್ಲಿ ಗೀಚಿ

ಪಳೆಯಾಚಿ ಮಾಮ್ಮಾ... ಹಾವೆ ಆಸುಚೆ ಅಶೀಚಿ



ಇಡ್ಲಿ ಚಟ್ನಿ ದೋಸೆಯಂತು ನನ್ನ ಫೇವರಿಟ್ಟು

ಊರು ಬಿಟ್ಟು ಓಡಿ ಬಿಡುವೆ ಕಂಡರೆ ಉಪ್ಪಿಟ್ಟು

ಬ್ರೆಡ್ಡು ಬನ್ನು ಆಗೋದಿಲ್ಲ ಇಷ್ಟ ಪೂರಿ - ಬಾಜಿ

देखिये... मै ऐसाहि हू माजि.....॥



ಬೇಳೆ ಸಾರು ಹಪ್ಪಳವಿರೆ ಅದುವೇ ಮೃಷ್ಟಾನ್ನ

ಉಪ್ಪಿನಕಾಯ್ ಮಜ್ಜಿಗೆಯಿರಲೂಟವೆಷ್ಟು ಚೆನ್ನ!

ಆಲೂಗಡ್ಡೆ ಪರಮಮಿತ್ರ ಇಷ್ಟ ಬಸಳೆ ನುಗ್ಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ



ಚಾಕಲೇಟು ಬರ್ಫಿ ನೋಡೆ ಇರುವೆಯಾಗಿ ಬಿಡುವೆ

ಜಾಮೂನನು ತಂದವರಿಗೆ ಒಲಿದು ವರವ ಕೊಡುವೆ

ಹಣ್ಣಿನಲ್ಲಿ ಇಷ್ಟವೆನಗೆ ಮಾವು ಮೋಸಂಬಿ

ಪಾರಂಙ್ ಪಾ ನಾನ್ ಇಪ್ಪಡಿತಾನ್ ತಂಬಿ



ಪಿಜ್ಝಾ ಕೋಕು ಬೇಡವೆನಗೆ ಸಾಕು ನಿಂಬೆ ಜ್ಯೂಸು

ಮಿತವ್ಯಯಿ ಸ್ವಾಮಿ ನಾನು ಅಲ್ಲಾ ರೀ  ಕಂಜೂಸು

ಕಾಫಿಯಲ್ಲಿ ಇರೋ ಸುಖವು ಗೊತ್ತಿದೆಯೇ ನಿಮಗೆ ??

ನೋಡೀ... ಸ್ವಾಮೀ.... ನಾವಿರೋದೆ ಹೀಗೆ



ಮದುವೆಯಾಗಲಿಲ್ಲ ನನಗೆ ಇನ್ನೂ ಬ್ರಹ್ಮಚಾರಿ

ದುಶ್ಚಟಗಳಿಗೆ ಹೇಳಿರುವೆನು I AM VERY SORRY!

ಬಹುದಿನಗಳ ಆಸೆ ಕಲಿಯಬೇಕೆಂದು ತಬಲಾ

ಚೂಡನ್ನಯ್ಯಾ.... ಮೇವುನ್ನದೇ ಇಲಾ .....


ಹಸ್ತಾ ನಕ್ಷತ್ರವೆನದು ಇರುವೆನು ನಗುನಗುತ

ನಾನಿರಲು ತಪ್ಪದೆಂದು ನಿಮ್ಮಯ ಕಾಲೆಳೆತ

ಸದಾ ಕಾಲ ಮಾಡುತಿರುವೆ ಗೆಳೆಯರನ್ನು ಗೇಲಿ

LOOK BOSS!!!.... I AM LIKE THIS ONLY!!


ಅಪ್ಪ ಅಮ್ಮ ಅಕ್ಕ ಅಣ್ಣ ನಾನೇ ಕೊನೆಯ ಪುತ್ರ

ತುಂಟಾಟಿಕೆ ಲೂಟಿಗೆಲ್ಲ ಪ್ರೀತಿಯೇ ಇವರುತ್ರ

ಇವರೇ ದೇವರೆನಗೆ ಕೊಟ್ಟ ವರವು ಬಾಳಿನಾಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ


ಗೆಳೆಯರೊಡನೆ ಇರಲು ನಾನೇ ವೀರ ಆಂಜನೇಯ

ಅಪ್ಪ ಅಮ್ಮ ಪಕ್ಕದಲಿರೆ ಬರುವ ಧರ್ಮರಾಯ

ತಾಳವನ್ನು ಹಾಕುವೆ ಕಾಲಕ್ಕೆ ತಕ್ಕ ಹಾಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ



ನೂರು ತಪ್ಪು ಮಾಡಿರುವೆನು ನಾನು ಜೀವನದಲಿ

ನಿಮಗೆ ನೋವು ಕೊಟ್ಟಿದ್ದರೆ ಅದಕೆ ಕ್ಷಮೆಯು ಇರಲಿ

ಕ್ಷಮಿಸಿದಂತೆ ಬಂದರೆ ಕಿರುನಗುವು ಮುಖದ ಮ್ಯಾಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ



ಸುಳ್ಳು ಹೇಳಲಿಲ್ಲ ನಾನು ನನ್ನ ಕವನದಲ್ಲಿ

ಮಂಥನವನು ಮಾಡಿ ನೋಡಿ ನೀವು ಮನಸಿನಲ್ಲಿ

ಮ್ಮ ಭಾವನೆಗಳ ತಿಳಿಸಿ MAIL/CALL ನಾಗೆ

ಈಗ ನೀವು ಹೇಳಿ... ನಾನು ಹೀಗೆ ?? ಹಾಗೆ .... ಅಥವ ಹೇಗೆ ??


======================================= ವಿಕಟಕವಿ ===========

Comments

Popular posts from this blog

ಎರಡರ ಸ್ವಗತ

  ಇದೊಂದು ಅನಾದಿ ಕಾಲದಿಂದ ನಡೆದು ಬಂದ  ದೌರ್ಜನ್ಯ,ದಬ್ಬಾಳಿಕೆ,ಶೋಷಣೆಯ ಕಥೆ.ಕರುಣೆಯಿಲ್ಲದ ಈ ಸಮಾಜವು ಒಂದು ಪ್ರತಿಭೆಯನ್ನು ಹೇಗೆ ತನ್ನ ಕಪಿಮುಷ್ಠಿಯಲ್ಲಿ ಅದುಮಿ ಹಿಡಿದಿಟ್ಟುಕೊಳ್ಳಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆ.   ನಾನು "ಎರಡು".ಒಂದು ಒಂದು ಸೇರಿ ಎರಡಾದ್ದರಿಂದ ನನ್ನನ್ನು ಏಕಾತ್ಮಜ ಎಂದೂ ಕರೆಯಬಹುದು.ವಸ್ತುಶಃ ನನ್ನಲ್ಲಿ ಯಾವ ಲೋಪದೋಷಗಳಿಲ್ಲದೆ ಹೋದರೂ ವಿನಾಕಾರಣ ನನ್ನನ್ನು ಹೀನಾಯವಾಗಿ ನೋಡಲಾಗುತ್ತದೆ.ಅಷ್ಟೇ ಅಲ್ಲದೆ ಸ್ವತಂತ್ರವಾಗಿ ಗೌರವಾನ್ವಿತರಾಗಿರುವ ಯಾರಾದರೂ ನನ್ನೊಡನೆ ಸಂಬಂಧ ಬೆಳೆಸಿಕೊಂಡರೆ ಅವರ ಗೌರವಕ್ಕೂ ಕಪ್ಪು ಮಸಿ ಬಳಿಯಲಾಗುತ್ತದೆ.   ಈಗ ನೀವೇ ನೋಡಿ  ಒಂದೇ  ಮಾತಿನಲ್ಲಿ ಹೇಳುವುದಾದರೆ,ಅಂಕೆ ಸಂಖ್ಯೆಗಳಲ್ಲಿ ೧ ಯಾವತ್ತೂ ರಾಜ.ಮೊದಲಿಗ,ಯಾರಿಂದಲೂ ಪೂರ್ಣವಾಗಿ ಭಾಗಿಸಲ್ಪಡದ ಆದರೆ  ಎಲ್ಲ ಸಂಖ್ಯೆಗಳನ್ನೂ ಭಾಗಿಸಬಲ್ಲ ತಾಕತ್ತು ಇದಕ್ಕಿದೆ.ಆದರೆ ಅರಸನ ಮುಂದಿರಬೇಡ,ಕತ್ತೆಯ ಹಿಂದಿರಬೇಡ ಎಂಬ ನಾಣ್ಣುಡಿಗೆ ವ್ಯತಿರಿಕ್ತವೆಂಬಂತೆ ನಾನು ಈ ರಾಜ ೧ ರ ಮುಂದೆ ,ಆ ಥರ್ಡ್ ಕ್ಲಾಸ್ ೩ ರ ಹಿಂದೆ ಕೂತಿದ್ದೇನೆ.ಈ ಜನ್ಮ ಕುಂಡಲಿಯ ದೋಷದಿಂದಲೇ ನಾನು ಯಾರ ಅಕ್ಕಪಕ್ಕ ಹೋಗಿ ಕೂತರೂ ಅವರ ವಾಸ್ತುಶಾಸ್ತ್ರ ಅಲ್ಲೋಲಕಲ್ಲೋಲವಾಗುತ್ತದೆ.  ಸಾಮಾಜಿಕ ಜೀವನದಲ್ಲೂ ಮೊದಲನೇ ಮದುವೆಗಿದ್ದಷ್ಟು ಮರ್ಯಾದೆ ಎರಡನೇಯದಕ್ಕಿಲ್ಲ.ಎದುರಿಗೆ ಎಲ್ಲರೂ ಸಂತೋಷದಿಂದಿದ್ದರೂ ಒಳಗೊಳಗೇ   ಕುಹಕವಾಡುತ್ತಾರೆ.ಅದೇ ಮದುವೆ ಮಂಟಪದಲ್ಲಿ ಯಾರಾದ್ರೂ

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು

ಪಟ್ ಪಟ್ ಪಟಾಕಿ !!!

1)ಶರ್ಟಿಗೆ ಎರಡು ಮೀಟರ್ ಬಟ್ಟೆ ಯಾಕ್ರಿ ?? ಪಕ್ಕದ ಓಣಿ ಟೈಲರ್ ಒಂದೂವರೆ ಮೀಟರ್ ಸಾಕು ಎಂದ !!! ಎಂದು ಟೈಲರ್ ನನ್ನು ದಬಾಯಿಸಿದಾಗ ಅವರು ಹೇಳಿದ್ದು ಸರಿ ಆದರೆ ಅವರ ಮಗ ಎರಡನೇ ಕ್ಲಾಸ್ ನನ್ನ ಮಗ ಎಂಟನೆ ಕ್ಲಾಸ್ ಎಂದು ಟೈಲರ್ ಶಾಂತವಾಗಿ ಉತ್ತರಿಸಿದನು. 2)ನಿನಗೋಸ್ಕರ ಚಂದ್ರ - ತಾರೆ - ಚುಕ್ಕೆಗಳನ್ನು ಹೆಕ್ಕಿ ತರಲೇ?? ಎಂದ ಪ್ರಿಯತಮನಿಗೆ "ಅದೆಲ್ಲಾ ಬೇಡಾ  ಮಾರಾಯ ಬಾಯಾರಿಕೆ ಆತಿತ್ತ ಒಂದ್ ಬೊಂಡ (ಎಳನೀರು) ತೆಗೆದುಕೊಡು" ಎಂದಾಗ ಅವನು  "ಮರ ಸುಮಾರು ದೊಡ್ದುಂಟು ಮಾರಾಯ್ತಿ !!!!" ಎಂದು ತಬ್ಬಿಬ್ಬಾದನು. 3)ಸರಸದಲ್ಲಿರಲು ಏನೋ ತಮಾಷೆಗೆ  ನಾನು  "You are so Sweet" ಎಂದು ಹೇಳಿದ್ದನ್ನೇ ನನ್ನ ಶಾಂತಿ ಸೀರಿಯಸ್ಸಾಗಿ ತೆಗೆದುಕೊಂಡು ತಾನು ಕುಳಿತ ಜಾಗದ ಸುತ್ತ ಡಿಡಿಟಿಯ ರಂಗೋಲಿ ಹಾಕಿಕೊಂಡಳು. 4)ಕನ್ನಡದಿಂದ - ಚೈನೀಸ್ ಅನುವಾದ ಭಾಷೆಯ ಪುಸ್ತಕದಿಂದ ಉರು ಹೊಡೆದು ಬೀಜಿಂಗ್ ನ ತರಕಾರಿ ಮಾರುಕಟ್ಟೆಗೆ ಹೋಗಿ "ಸ್ಯಾನ್ ವೊಕ್ಯೊಸ್ಜ್  2kg" ಎಂದು ಕೇಳಿದೊಡನೆ "ಏಯ್ ಮಾಣಿ ಎರ್ಡ್ ಕೇಜೀ ಗುಂಬ್ಳಕಾಯಿ ತೆಕಬಾರಾ " ಎಂದು ಅಂಗಡಿಯ ಮಾಲಿಕನಾದ ಕುಂದಾಪುರದ ಶೀನಣ್ಣ ಬೊಬ್ಬೆ ಹೊಡೆದನು. 5)ಯಕ್ಷಗಾನ ದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾಗ ಅಭ್ಯಾಸಬಲದಿಂದ "ದುಷ್ಟಾ.. ನಿನ್ನ ಎರಡೂ ಕೈಗಳನ್ನು CUT ಮಾಡಿಬಿಡುತ್ತೇನೆ ಎಂದು ಅಬ್ಬರಿಸಿದ ಪಾತ್ರಧಾರಿಗೆ ತಾನು ಆಂಗ್ಲ ಭಾಷಾಪ್ರಯೋಗ