Skip to main content

ನೋಡಿ ಸ್ವಾಮೀ ನಾವಿರೋದೇ ಹೀಗೆ

========================================

ನೋಡೀ... ಸ್ವಾಮೀ.... ನಾವಿರೋದೆ ಹೀಗೆ

========================================



ನಾನು ಯಾರು ? ಹೇಗೆ ? ಯಾಕೆ ?? ನೂರು ಪ್ರಶ್ನೆ ಎಸೆದೆ

ಬಂದ ಉತ್ತರಗಳ ಕೂಡಿ ಕವನವೊಂದ ಹೊಸೆದೆ|

ಬರೆಯುತಿರುವೆ ಈ ಕವನದಿ ನಾನು ನನ್ನ ಬಗ್ಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ||



ಎಂಜಿನಿಯರಿಂಗ್ ಓದಿ ಟೀಸಿಯೆಸ್ಸಿನಲ್ಲಿ ದುಡಿಮೆ

ಕೃಷ್ಣವರ್ಣ ತಲೆಯ ಮೇಲೆ ಕೂದ್ಲು ಸ್ವಲ್ಪ ಕಡಿಮೆ

ಕುಂದಾಪುರದವನು ಇರುವೆ ಬೆಂಗಳೂರಿನಾಗೆ

ಹೋಯ್ ಮಾರಾಯ್ರೆ... ನಾವಿಪ್ಪುದೇ ಹೀಂಗೆ!!



ಇಹುದು ನನಗೆ ಕವಿತೆ ಕವನ ಬರೆಯುವಂತ ಹುಚ್ಚು

ಮೌನ ಕೂಡಿ ಬರದು ನನಗೆ ಮಾತು ಸ್ವಲ್ಪ ಹೆಚ್ಚು

ಮನದ ಮಾತ ಹಾಕಿ ಬಿಡುವೆ ಪೇಪರಲ್ಲಿ ಗೀಚಿ

ಪಳೆಯಾಚಿ ಮಾಮ್ಮಾ... ಹಾವೆ ಆಸುಚೆ ಅಶೀಚಿ



ಇಡ್ಲಿ ಚಟ್ನಿ ದೋಸೆಯಂತು ನನ್ನ ಫೇವರಿಟ್ಟು

ಊರು ಬಿಟ್ಟು ಓಡಿ ಬಿಡುವೆ ಕಂಡರೆ ಉಪ್ಪಿಟ್ಟು

ಬ್ರೆಡ್ಡು ಬನ್ನು ಆಗೋದಿಲ್ಲ ಇಷ್ಟ ಪೂರಿ - ಬಾಜಿ

देखिये... मै ऐसाहि हू माजि.....॥



ಬೇಳೆ ಸಾರು ಹಪ್ಪಳವಿರೆ ಅದುವೇ ಮೃಷ್ಟಾನ್ನ

ಉಪ್ಪಿನಕಾಯ್ ಮಜ್ಜಿಗೆಯಿರಲೂಟವೆಷ್ಟು ಚೆನ್ನ!

ಆಲೂಗಡ್ಡೆ ಪರಮಮಿತ್ರ ಇಷ್ಟ ಬಸಳೆ ನುಗ್ಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ



ಚಾಕಲೇಟು ಬರ್ಫಿ ನೋಡೆ ಇರುವೆಯಾಗಿ ಬಿಡುವೆ

ಜಾಮೂನನು ತಂದವರಿಗೆ ಒಲಿದು ವರವ ಕೊಡುವೆ

ಹಣ್ಣಿನಲ್ಲಿ ಇಷ್ಟವೆನಗೆ ಮಾವು ಮೋಸಂಬಿ

ಪಾರಂಙ್ ಪಾ ನಾನ್ ಇಪ್ಪಡಿತಾನ್ ತಂಬಿ



ಪಿಜ್ಝಾ ಕೋಕು ಬೇಡವೆನಗೆ ಸಾಕು ನಿಂಬೆ ಜ್ಯೂಸು

ಮಿತವ್ಯಯಿ ಸ್ವಾಮಿ ನಾನು ಅಲ್ಲಾ ರೀ  ಕಂಜೂಸು

ಕಾಫಿಯಲ್ಲಿ ಇರೋ ಸುಖವು ಗೊತ್ತಿದೆಯೇ ನಿಮಗೆ ??

ನೋಡೀ... ಸ್ವಾಮೀ.... ನಾವಿರೋದೆ ಹೀಗೆ



ಮದುವೆಯಾಗಲಿಲ್ಲ ನನಗೆ ಇನ್ನೂ ಬ್ರಹ್ಮಚಾರಿ

ದುಶ್ಚಟಗಳಿಗೆ ಹೇಳಿರುವೆನು I AM VERY SORRY!

ಬಹುದಿನಗಳ ಆಸೆ ಕಲಿಯಬೇಕೆಂದು ತಬಲಾ

ಚೂಡನ್ನಯ್ಯಾ.... ಮೇವುನ್ನದೇ ಇಲಾ .....


ಹಸ್ತಾ ನಕ್ಷತ್ರವೆನದು ಇರುವೆನು ನಗುನಗುತ

ನಾನಿರಲು ತಪ್ಪದೆಂದು ನಿಮ್ಮಯ ಕಾಲೆಳೆತ

ಸದಾ ಕಾಲ ಮಾಡುತಿರುವೆ ಗೆಳೆಯರನ್ನು ಗೇಲಿ

LOOK BOSS!!!.... I AM LIKE THIS ONLY!!


ಅಪ್ಪ ಅಮ್ಮ ಅಕ್ಕ ಅಣ್ಣ ನಾನೇ ಕೊನೆಯ ಪುತ್ರ

ತುಂಟಾಟಿಕೆ ಲೂಟಿಗೆಲ್ಲ ಪ್ರೀತಿಯೇ ಇವರುತ್ರ

ಇವರೇ ದೇವರೆನಗೆ ಕೊಟ್ಟ ವರವು ಬಾಳಿನಾಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ


ಗೆಳೆಯರೊಡನೆ ಇರಲು ನಾನೇ ವೀರ ಆಂಜನೇಯ

ಅಪ್ಪ ಅಮ್ಮ ಪಕ್ಕದಲಿರೆ ಬರುವ ಧರ್ಮರಾಯ

ತಾಳವನ್ನು ಹಾಕುವೆ ಕಾಲಕ್ಕೆ ತಕ್ಕ ಹಾಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ



ನೂರು ತಪ್ಪು ಮಾಡಿರುವೆನು ನಾನು ಜೀವನದಲಿ

ನಿಮಗೆ ನೋವು ಕೊಟ್ಟಿದ್ದರೆ ಅದಕೆ ಕ್ಷಮೆಯು ಇರಲಿ

ಕ್ಷಮಿಸಿದಂತೆ ಬಂದರೆ ಕಿರುನಗುವು ಮುಖದ ಮ್ಯಾಗೆ

ನೋಡೀ... ಸ್ವಾಮೀ.... ನಾವಿರೋದೆ ಹೀಗೆ



ಸುಳ್ಳು ಹೇಳಲಿಲ್ಲ ನಾನು ನನ್ನ ಕವನದಲ್ಲಿ

ಮಂಥನವನು ಮಾಡಿ ನೋಡಿ ನೀವು ಮನಸಿನಲ್ಲಿ

ಮ್ಮ ಭಾವನೆಗಳ ತಿಳಿಸಿ MAIL/CALL ನಾಗೆ

ಈಗ ನೀವು ಹೇಳಿ... ನಾನು ಹೀಗೆ ?? ಹಾಗೆ .... ಅಥವ ಹೇಗೆ ??


======================================= ವಿಕಟಕವಿ ===========

Comments

Popular posts from this blog

ನ್ಯಾನೋ ಕಥೆಗಳು.

1) "ಕರ್ತವ್ಯಂ ದೈವಮಾಹ್ನಿಕಂ " ಎಂದುಕೊಂಡು ಸದಾ ಕಾಲ ಆಫೀಸ್ ಕೆಲಸದಲ್ಲೇ ತೊಡಗಿರುತ್ತಿದ್ದ ಸಾಫ್ಟವೇರ್ ಇಂಜಿನಿಯರ್ ನ ಹಾಲುಗಲ್ಲದ ಪುಟ್ಟ ಮಗು ಅವನನ್ನು ತೋರಿಸಿ "ಅಮ್ಮಾ ....... ಇವರು ಯಾರು ??" ಎಂದು ಕೇಳಿದಾಗ ಅವನಿಗೆ ನಿಜವಾದ ಕರ್ತವ್ಯದ ಅರಿವಾಯಿತು . 2) ಜ್ಯೋತಿಷ್ಯ ಶಾಸ್ತ್ರವನ್ನು ಅರೆದು ಕುಡಿದು ಸೂರ್ಯ - ಚಂದ್ರ - ಗ್ರಹತಾರೆಗಳನ್ನು ಕರತಲಾಮಲಕ ಮಾಡಿಕೊಂಡಿದ್ದ ಸುಬ್ಬಯ್ಯ ಶಾಸ್ತ್ರಿಗಳಿಗೆ ಅವರ ಮಗಳು ಪ್ರಿಯಕರನೊಂದಿಗೆ ಓಡಿ ಹೋಗುವ ವಿಚಾರವನ್ನು ಈ ಆಕಾಶಕಾಯಗಳು ಹೇಳಲೇ ಇಲ್ಲ !!!!. 3) ಮನುಷ್ಯನಿಗೆ ಶೀತವಾಗಲು ಶುರುವಾಗಿದ್ದು ಕೊಡೆ ಕಂಡುಹಿಡಿದ ಮೇಲೆ !!!! 4) ಬೀರುವಿನೊಳಗಿನ ರೇಷ್ಮೆ ಸೀರೆಗಳನ್ನೆಲ್ಲ ಇಲಿ ಕೊಚ್ಚಿ ಹಾಕಿದಾಗ ಕೊಂಚವೂ ಬೇಸರಿಸದ ಕಾವೇರಮ್ಮ ಮಗ ತಂದುಕೊಟ್ಟ ಇನ್ನೂರು ರುಪಾಯಿಯ ಕಾಟನ್ ಸೀರೆಯ ಮೇಲೆ ಸುಕ್ಕು ಬಿದ್ದಾಗ ಬಿಕ್ಕಿ ಬಿಕ್ಕಿ ಅತ್ತಳು . 5) ಅಂಗವಿಕಲರಿಗೆ ಸರಕಾರ ಕೊಡುವ ಸಹಾಯಧನವನ್ನು ಪಡೆಯಲು ತೆವಳಿಕೊಂಡು ಬಂದ ಅಭ್ಯರ್ಥಿಗೆ ಅಧಿಕಾರಿಗಳು ಅಂಗವಿಕಲತೆಯ ಸರ್ಟಿಫಿಕೆಟ್ ಇಲ್ಲದೇ ಹಣ ಮಂಜೂರು ಮಾಡಲಾಗುವುದಿಲ್ಲ ಎಂದರು . 6) ಕದಳಿಯೋಳು ಮದದಾನೆ ಹೊಕ್ಕಂತೆ ನೂರು ಜನ ಶತ್ರುಗಳ ಚಕ್ರವ್ಯೂಹಕ್ಕೆ ನುಗ್ಗಿ ಅದನ್ನು ಧ್ವಂಸಗೈದು ಕ್ಲೈಮ್ಯಾಕ್ಸ್ ನಲ್ಲಿ ನಾಯಕಿಯ ಮಾನ ಕಾಪಾಡಿದ ಹೀರೊನನ್ನು ಕಳ್ಳರು ನಡುರಸ್ತೆಯಲ್ಲಿ ಖಾಲಿ ಪಿಸ್ತೂಲ್ ತೋರಿಸಿ ದೋಚಿದರು . 7) ಮಾರುಕಟ್ಟೆ...

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು...

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋ(ತಿ)ಟಿ ರುಪಾಯಿ (ಖರ್ಚು )

ರೀ.......... ನಿಮ್ಮ ಬಟ್ಟೆ ಇಸ್ತ್ರೀ ಮಾಡಿ ಅಲ್ಲಿ ಇಟ್ಟಿದ್ದೀನಿ. ಹ್ಮ್ ಸರಿ ಎಂದೆನು. ಎನ್ರೀ ಎರಡೇ ಇಡ್ಲಿ ತಿಂದಿದ್ದೀರಾ. ನಾನು ಕಾಫಿ ಮಾಡಿ ತರೋದ್ರೊಳಗೆ ಎದ್ ಬಿಟ್ರಿ ಇನ್ನೊಂದೆರಡು ಹಾಕಿಸ್ಕೊಳ್ಳೋದಲ್ವಾ ?? ಹಸಿವಿಲ್ಲ ಬಿಡೇ... ರೀ... ಶೂ ಪಾಲಿಷ್ ಮಾಡಿ ಇಟ್ಟಿದ್ದೀನಿ. ಲಂಚ್ ಬಾಕ್ಸ್ ಕೂಡಾ ಅಲ್ಲೇ ಇಟ್ಟಿದ್ದೀನಿ ನನ್ನವಳು ಉಲಿದಳು..... ಒಂದು ನಿಮಿಷ...... ಎಲ್ಲೋ ಏನೋ ಒಂದು ಲಿಂಕ್ ತಪ್ಪಿ ಹೊಗ್ತಾ ಇದೆ ಅನ್ನಿಸ್ತು. ಒಂದು ಎರಡು ಗಂಟೆ ಫ್ಲಾಶ್ ಬ್ಯಾಕ್ ಹೋದೆನು. ಅಮ್ಮೋ ................ ಪ್ರತಿದಿನ ಸೂರ್ಯನ ಬಿಸಿಲು ಮುಖಕ್ಕೆ ಹೊಡೆಯುವವರೆಗೂ ಮುಖ ಹೊರಳಿಸಿ ಮಲಗಿ ದಿಂಬು ಬೆಚ್ಚಗಾದ ಮೇಲೆ ಮುಖ ಅರಳಿಸುವ ನನ್ನ ಸೂರ್ಯಕಾಂತಿ ಶಾಂತಿ ಇಂದು ಅಲಾರ್ಮ್ ಬಾರಿಸೋ ಮೊದಲೇ ಎದ್ದು ಚಹಾ ಮಾಡಿ ನನ್ನನ್ನೆಬ್ಬಿಸಿ ಸ್ನಾನಕ್ಕೆ ನೀರಿಟ್ಟು ಇಡ್ಲಿ-ಚಟ್ನಿ  ರೆಡಿ ಮಾಡಿ ಬಟ್ಟೆಗೆ ಇಸ್ತ್ರೀ ಹಾಕಿಟ್ಟು ಶೂ ಪಾಲಿಷ್ ಮಾಡಿ.......................  ಈ ದಿನ ಏನೋ ದೊಡ್ಡ ಹಗಲು ದರೋಡೆ ಆಗುವುದು ಖಂಡಿತ ಎಂದು ಅರಿವಾಯಿತು.ಭಯವಾಯಿತು ಮನಸ್ಸಿಗೆ.ಆದರೂ ತೋರ್ಪಡಿಸದೇ ಕೇಳದವನಂತೆ ಸುಮ್ಮನಿದ್ದೆ. ಆದರೂ ನನ್ನ ಶಾಂತಿ ಬಿಡಬೇಕಲ್ಲ. ರೀssssssssss......... ಮತ್ತೊಮ್ಮೆ ನೋಡು ಆಫೀಸಿಗೆ ಟೈಮ್ ಆಯಿತು ತೆಂಕಣ ಸುತ್ತಿ ಮೈಲಾರಕ್ಕೆ ಬರಬೇಡ. ಸೀದಾ ವಿಷಯಕ್ಕೆ ಬಾ ಎಂದೆನು. ಮೊನ್ನೆ ಪೇಪರ್ ಓದಿದ್ರಾ ?? ಶಾರುಖ್ ಖಾನ್ ಅವ್ನ ಹ...