Skip to main content

ಆಪೀಸಾಯಣ

ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ  ಬಣ್ಣದಲ್ಲಿ ಬರೆದವು ಅವರ ಹೆಸರುಗಳು.



ದೇವಾದಿದೇವತೆಗಳು ಸಭೆಯನ್ನು ನಡೆಸಿ
ಸಭೆಯೊಳಗೆ ಸುಮಧುರ ಕನ್ನಡವ ಬಡಿಸಿ ||
ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ
ಬಂದು ಕೂತಿಹರೆಲ್ಲ tatasky ODC ||

              ಕೃಷ್ಣನಿಹನಿಲ್ಲಿ  ಇಹನು  ರಘು-ರಾಮ
                    ಮಂಜುನಾಥರು ತ್ರಿಮೂರ್ತಿಯಲಿ ಹರಸಿರುವ ಧಾಮ ||
                    ಪಾವನ-ಪುನೀತರಾಗಿ ಕೇಳಿ ಮೋಹನನ ಬಾನ್ಸುರಿ
                    ಸ್ವಪ್ನದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... ||

ವಿಘ್ನದಿಂ ಕಾಯುತಿಹ ದ್ವಾರದಲೇ ಬೆನಕ
ಎಲ್ಲ ದೇವರಿಗೂ ಶರಣು ನಮ್ಮ ಗುರುಗಳ ತನಕ
ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ
ಹರುಷದಲಿ ಕಳಿಸುವನು ಮೇಘ ಸಂದೇಶ ||

          ದೇವತೆಗಳಿಗೂ ಇಹುದು ನಮ್ಮ ನೋಡುವ ಇರಾದೆ
          ಪ್ರಿಯವದನರಾಗಿ ಬಂದಿಹರು ಲಕ್ಷ್ಮಿ ಮತ್ತು ರಾಧೆ
          ಶಾರದೆಯ ಆಶೀರ್ವಾದವೇ ನಮಗೆ ಕತ್ತಲಲಿ ದೀಪ್ತಿ ವಿಜಯಕ್ಕೆ ಸ್ಪೂರ್ತಿ
         ಒಂದು ನಿಮಿಷ... ನನ್ನ ಕಾವ್ಯವಾಗಿಲ್ಲ ಪೂರ್ತಿ!!!

                              ಕನ್ನಡಿಗರು ನಾವು... ಕಾಯಕಕ್ಕೆ ಸೈ ವಿಶ್ವಾಸಕ್ಕೆ ಜೈ||
                              ನಮ್ಮೆಲ್ಲರ ಮನಸ್ಸು ಹೃದಯ ಬಾನಿನಷ್ಟು ಹೈ
                              ಸ್ನೇಹದಲ್ಲೋ ನಮ್ಮೆಲ್ಲದದು ಸದಾ ಎತ್ತಿದ ಕೈ
                              ಇದಕ್ಕೆ ಒಳ್ಳೆಯ ಉದಾಹರಣೆ.. ಒಂದೇ ಕುಟುಂಬದಂತಿರುವ ನಮ್ಮ tatasky
                                  
                                                               ------ ವಿಕಟಕವಿ 

Comments

ತುಂಬಾ ಚೆನ್ನಾಗಿದೆ .... ಇನ್ನಷ್ಟು ಹಾಸ್ಯ ಲೇಖನಗಳ ನಿರೀಕ್ಷೆಯಲ್ಲಿ ...

Popular posts from this blog

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋ(ತಿ)ಟಿ ರುಪಾಯಿ (ಖರ್ಚು )

ರೀ.......... ನಿಮ್ಮ ಬಟ್ಟೆ ಇಸ್ತ್ರೀ ಮಾಡಿ ಅಲ್ಲಿ ಇಟ್ಟಿದ್ದೀನಿ. ಹ್ಮ್ ಸರಿ ಎಂದೆನು. ಎನ್ರೀ ಎರಡೇ ಇಡ್ಲಿ ತಿಂದಿದ್ದೀರಾ. ನಾನು ಕಾಫಿ ಮಾಡಿ ತರೋದ್ರೊಳಗೆ ಎದ್ ಬಿಟ್ರಿ ಇನ್ನೊಂದೆರಡು ಹಾಕಿಸ್ಕೊಳ್ಳೋದಲ್ವಾ ?? ಹಸಿವಿಲ್ಲ ಬಿಡೇ... ರೀ... ಶೂ ಪಾಲಿಷ್ ಮಾಡಿ ಇಟ್ಟಿದ್ದೀನಿ. ಲಂಚ್ ಬಾಕ್ಸ್ ಕೂಡಾ ಅಲ್ಲೇ ಇಟ್ಟಿದ್ದೀನಿ ನನ್ನವಳು ಉಲಿದಳು..... ಒಂದು ನಿಮಿಷ...... ಎಲ್ಲೋ ಏನೋ ಒಂದು ಲಿಂಕ್ ತಪ್ಪಿ ಹೊಗ್ತಾ ಇದೆ ಅನ್ನಿಸ್ತು. ಒಂದು ಎರಡು ಗಂಟೆ ಫ್ಲಾಶ್ ಬ್ಯಾಕ್ ಹೋದೆನು. ಅಮ್ಮೋ ................ ಪ್ರತಿದಿನ ಸೂರ್ಯನ ಬಿಸಿಲು ಮುಖಕ್ಕೆ ಹೊಡೆಯುವವರೆಗೂ ಮುಖ ಹೊರಳಿಸಿ ಮಲಗಿ ದಿಂಬು ಬೆಚ್ಚಗಾದ ಮೇಲೆ ಮುಖ ಅರಳಿಸುವ ನನ್ನ ಸೂರ್ಯಕಾಂತಿ ಶಾಂತಿ ಇಂದು ಅಲಾರ್ಮ್ ಬಾರಿಸೋ ಮೊದಲೇ ಎದ್ದು ಚಹಾ ಮಾಡಿ ನನ್ನನ್ನೆಬ್ಬಿಸಿ ಸ್ನಾನಕ್ಕೆ ನೀರಿಟ್ಟು ಇಡ್ಲಿ-ಚಟ್ನಿ  ರೆಡಿ ಮಾಡಿ ಬಟ್ಟೆಗೆ ಇಸ್ತ್ರೀ ಹಾಕಿಟ್ಟು ಶೂ ಪಾಲಿಷ್ ಮಾಡಿ.......................  ಈ ದಿನ ಏನೋ ದೊಡ್ಡ ಹಗಲು ದರೋಡೆ ಆಗುವುದು ಖಂಡಿತ ಎಂದು ಅರಿವಾಯಿತು.ಭಯವಾಯಿತು ಮನಸ್ಸಿಗೆ.ಆದರೂ ತೋರ್ಪಡಿಸದೇ ಕೇಳದವನಂತೆ ಸುಮ್ಮನಿದ್ದೆ. ಆದರೂ ನನ್ನ ಶಾಂತಿ ಬಿಡಬೇಕಲ್ಲ. ರೀssssssssss......... ಮತ್ತೊಮ್ಮೆ ನೋಡು ಆಫೀಸಿಗೆ ಟೈಮ್ ಆಯಿತು ತೆಂಕಣ ಸುತ್ತಿ ಮೈಲಾರಕ್ಕೆ ಬರಬೇಡ. ಸೀದಾ ವಿಷಯಕ್ಕೆ ಬಾ ಎಂದೆನು. ಮೊನ್ನೆ ಪೇಪರ್ ಓದಿದ್ರಾ ?? ಶಾರುಖ್ ಖಾನ್ ಅವ್ನ ಹ...