Skip to main content

ನಂಬಿ ಕೆಟ್ಟವರು

******************************************************
ಹಣವ ಗಳಿಸಿದೆ ಬೆವರ ಸುರಿಸುತ
ರಣದ ಸೈನಿಕನಂದದಿಂ ಕಂ
ಕಣವ ತೊಟ್ಟೆನು ಮನೆಯ ಕಟ್ಟಲು ನಮ್ಮ ಊರಿನಲಿ||
ತೃಣದಿ ನಾ ಕಂಡೆನು ಸುಖವ ಚಣ
ಚಣವು ಕಷ್ಟದಿ ದುಡಿದೆ ನಾ ಕಡಿ
ವಾಣವಿಕ್ಕಿದೆ ನನ್ನ ಖರ್ಚಿಗೆ ಗುರಿಯ ಸಾಧಿಸಲು ||

ಚಲಿಸಿದೆನು ಕಾಲ್ಗಳಲಿ ನಡೆಯುತ
ಉಳಿಸಿದೆನು ಹಣವನ್ನು ವ್ಯಯಿಸದೆ
ಗಳಿಸಿದಾ ಹಣ ಕೂಡಿ ಇಟ್ಟೆನು ಫೈನಾನ್ಸೊಂದರಲಿ||
ಮುಳುಗಿ ಹೋಯಿತು ಎಲ್ಲ ಹಣ ನಾ
ಕಳೆದುಕೊಂಡೆನು ನನ್ನ ಕನಸನು
ಹಳಿದುಕೊಂಡೆನು ಹಲುಬಿದೆನು ನಾ ನನ್ನ ದುರ್ವಿಧಿಗೆ ||

ಹರನು ಮೆಚ್ಚುವುದಿಲ್ಲ ಇವರನು
ನರರು ಚಚ್ಚದೆ ಬಿಡುವರೆನ್ ಸರ
ಕಾರ ಕಣ್ಣನು ಮುಚ್ಚಿಕೊಳ್ಳುತ ಶಿಕ್ಷೆ ಕೊಡದಿರಲು||
ಪರರ ಸೊತ್ತನು ದೋಚುತಿಹ ತಸ್
ಕರರ ನಂಬಿದ ನಾವು ಕೆಟ್ಟೆವು
ಕರುಮವೆಮ್ಮದು ಎನುತ ನಾವ್ಗಳು ಸಹಿಸಿಕೊಳಬೇಕು ||


************************************--ವಿಕಟಕವಿ

Comments

ಶಾನುಬಾಗರಿಗೆ ನಮಸ್ಕಾರಗಳು. ನೀವೂ ಕೂಡ ಬ್ಲಾಗ್ ಬರೆಯಲು ಶುರು ಮಾಡಿದ್ದು ತುಂಬಾ ಸಂತೋಷದ ಸುದ್ದಿ. ನಿನ್ನ ಮೊದಲನೇಯ ಪೋಸ್ಟ ಏನು ಅಂತ ನನಗ ಗೊತ್ತದ.

ಈ ಪದ್ಯ ನನಗ ಮತ್ತ ಸೇಟುಗ ಹೇಳಿದ್ದಿ. ನಿಮ್ಮೂರಾಗ ನಡದ ಘಟನೇ ಮ್ಯಾಲೆ ಇದು ಅದ ಹೌದಿಲ್ಲ?

ಒಳ್ಳೇದು. ಹೀಗೇ ಬರೀತಾ ಇರು. ಈಗ ಕೆಲಸ ಅದ. ಆಮ್ಯಾಲೇ ಮಾತಾಡೂಣು.

ಹರಿ ಓಂ.
ಜೈ ಶ್ರೀ ಯಲಗುರೇಶ ಪ್ರಸನ್ನ.

Popular posts from this blog

ನಾನು --ನನ್ನೂರು --ನನ್ನ ಜನ

***********************************DISCLAIMER*********************** ನಾನು ಕುಂದಾಪುರದವನು .ಶಿವಮೊಗ್ಗದ ಪೂರ್ಣ ಪರಿಚಯ ಕೂಡ ನನಗಿಲ್ಲ . ಕೇವಲ 2-3 ಬಾರಿ ಶಿವಮೊಗ್ಗಕ್ಕೆ ಹೋಗಿರಬಹುದು . ಆದರೂ ಕಲ್ಪನೆಯೆಂಬ ಕುದುರೆಯ ಬೆನ್ನೇರಿ ನನಗೆ ಬಂದ ಒಂದು SMS ನ್ನು ಬಂಡವಾಳವಾಗಿರಿಸಿಕೊಂಡು ನನ್ನ ಜೀವನದ ಕೆಲವು ನೈಜ ಘಟನೆಗಳನ್ನು ಪೂರಕವಾಗಿ ಬಳಸಿಕೊಂಡು ನನ್ನ ಸ್ವಂತ ಹಾಸ್ಯದ ಒಗ್ಗರಣೆ ಹಾಕಿ ತಯಾರಿಸಿದ ದಿಢೀರ್ ತಿಂಡಿ ( 4 ಗಂಟೆಯಲ್ಲಿ ಇಡೀ ಲೇಖನ ತಯಾರಾಗಿತ್ತು ). ಈ ಕಥೆಯಲ್ಲಿ ಬರೆದ ಎಲ್ಲ ವ್ಯಕ್ತಿಗಳೂ ಎಲ್ಲ ವಿಚಾರಗಳೂ ಕೇವಲ ಕಾಲ್ಪನಿಕ .ಆ ಪಾತ್ರಗಳ ಸೃಷ್ಟಿ -ಸ್ಥಿತಿ -ಲಯ ಎಲ್ಲದಕ್ಕೂ ನಾನೇ ಸೂತ್ರಧಾರ . *************************************************************************** ಶಿವಮೊಗ್ಗ ನನ್ನ ಹೆಮ್ಮೆಯ ಊರು .. ನನ್ನ ಜನ .ರಾತ್ರಿ ಹೊತ್ತಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಥವಾ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಯಾರೂ ನಿಮ್ಮನ್ನು ಎಬ್ಬಿಸಬೇಕಾದ ಅಗತ್ಯವಿಲ್ಲ . ಬೆಂಗಳೂರು ಬಂದೊಡನೆ ಬೆಂಗಳೂರಿನ Slum area ದ ದುರ್ನಾತದಿದಂದ ಎಚ್ಚರವಾದರೆ ನಮ್ಮ ಶಿವಮೊಗ್ಗ ಬಂದೊಡನೆ ನಿಸರ್ಗಮಾತೆಯ ಬೆಚ್ಚನೆಯ ಅಪ್ಪುಗೆಯಿಂದ ಎಚ್ಚರವಾಗುತ್ತದೆ. This is awesom man.. wonderful... hurrrrrrrrrrrahhhhhhhhh.......... GRS fantacy park ನ water pool ನಲ್ಲಿ ದಿನ...

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...

ದಿಬ್ಬಣ

ಕೇಳಿದಳು ಕನಸಿನಲಿ ಕತ್ರಿನಾ ಕೈಫು ಆಗಲೇ ಸುಮಂತಾ ನಾ ನಿನ್ನ ವೈಫು ಹೇಳಿದೆನು ನೀನೊಂದು ಕೆಲಸವನು ಮಾಡು ಮನೆ ಮುಂದೆ ನಿಂತಿರುವ ಕ್ಯೂವನ್ನು ನೊಡು|| ಸೈಫ ಅಲಿ ಖಾನಲ್ಲಿ ಇಲ್ಲವೊ ದಮ್ಮು ನನ್ನವನಾಗೋ ಓ  ನನ್ನ ಸುಮ್ಮು!!!! ಬೇಡುತ್ತ ನಿಂತಿಹಳು ನೋಡು ಕರೀನಾ ಬಕರಾ ಆಗಲು ನಾನೇನು ಕುರಿ ನಾ ?? ಬಹುಕಾಲದಿಂದ ನಾ ಮೆಚ್ಚಿಹೆನು ನಿನ್ನ ತಪ್ಪು ಮಾಡಿದೆ ವರಿಸಿ ಸಣ್ಣ ’ಬಚ್ಚಾ’ನನ್ನ ( SMALL  ' B' ) ಓಡಿ ಬರುವೆ ನಾ ಹಿಡಿದು ನಿನ್ನ ಕೈ ತುದಿಗಾಲ ಮೇಲಿಹಳು ಐಶ್ವರ್ಯ ರೈ|| ನಮ್ಮೂರ ಗಂಡಿವನು ನನಗೆ ಪ್ರಿಫರೆನ್ಸು ಕ್ವೀನು ನಾನು ನೀನೇ ನನ್ನ ಪ್ರಿನ್ಸು ಇಲ್ಲ ಅಂದರೆ ನಿನಗೆ ನನ್ನ ಮೇಲಾಣೆ ಹಕ್ಕು ಚಲಾಯಿಸುತ್ತಿಹಳು ಪಡುಕೋಣೆ|| ಸೌತ್  ಇಂಡಿಯನ್ನರದ್ದು ಸಪರೇಟು ಸಾಲು ನಾನೇ ಬೇಕೆಂದು ಎಲ್ಲರದು ಗೋಳು ಒಲ್ಲೆನೆಂದರೆ ನಾನು  ಕುಡಿಯುವೆನು ವಿಷ ಎಂದು ಬೆದರಿಸುತ್ತಿದ್ದಾಳೆ ತ್ರಿಷಾ ಜಾನ್ ಹೈ ತು ಎನ್ನುತ್ತಾಳೆ  ಜೆನಿಲಿಯಾ ಛತ್ರ 'ಪತಿ' ಯಾಗೋ ಎಂದೆನುವ ಶ್ರೀಯಾ ನನ್ನೊಳಗೆ ನೀನು ನಿನ್ನೊಳಗೆ ನಾನು ಲಲ್ಲೆಗರೆಯುತ್ತಿರುವಳು ಆಸೀನು|| ಬಿಪಾಷಾ ಮಲ್ಲಿಕಾರನ್ನು ಮಾಡಿದೆ ಅವೈಡು ರಾಖೀ ಸಾವಂತು ಡಿಸ್ ಕ್ವಾಲಿಫೈಡು ಬೋಲ್ಡು ಮಾಡಲು ಎಸೆದಿಹಳು ಬಾಲನ್ನು ವಿದ್ಯಾ ಪ್ರಿಯಾಂಕ ಬರೆದು ಕಳಿಸಿರುವಳು ಪ್ರೇಮ ಪದ್ಯ || ಓದಿ ಕವನವ ಶಾಂತಿಗೆ ನೆತ್ತಿಗೇರಿತು ಪಿತ್ತ ಹುಡುಕಿದಳು ...