Skip to main content

ಚಿನಕುರುಳಿ

೧) ಏನೋ ಸುಮಂತಾ ಸಿಗರೇಟ್ ಎಳೀತೀಯೇನೋ ಎಂದು ಅಪ್ಪ ಕೇಳಿದಾಗ "ಅಪ್ಪಾ ಇದೇನು ಆಫರೊ ?? ಎನ್ ಕ್ವಾಯರಿನೊ?? ಎಂದು ಪ್ರಶ್ನಿಸಿದೆ .

೨) "ಇಂಗು ತೆಂಗು ಇದ್ದರೆ ನಮ್ಮ ಶಾಂತಿ ಕೂಡ ಅಡುಗೆ ಮಾಡುತ್ತಾಳೆ" ಎಂದು ಹೇಳಿದಾಗ "ರೀ ನಾಲ್ಕು ಜನರ ಮುಂದೆ ನನ್ನನ್ನು ಹೊಗಳಬೇಡ್ರಿ" ಎಂದು ನನ್ನ ಶಾಂತಿ ನಾಚಿ ನೀರಾದಳು.

೩)ಸಾಕ್ಷರತಾ ಕಾರ್ಯಕ್ರಮದ ಅಂಗವಾಗಿ "ಅನಕ್ಷರಸ್ಥರೇ ಗಮನಿಸಿ"  ಎಂದು ಅನಕ್ಷರತೆಯ ದುಷ್ಪರಿಣಾಮಗಳ ಬಗ್ಗೆ ಬರೆದ ಬ್ಯಾನರ್ ಗಳನ್ನು ತೂಗು ಹಾಕಿದರು.

೪) ಚಿನ್ನದ ಪದಕ ಪಡೆದು ಮೆರಿಟ್ ನಲ್ಲಿ ಬ್ಯಾಂಕ್ ಕೆಲಸಕ್ಕೆ ಸೇರಿಕೊಂಡ ಗ್ರಾಜುಯೇಟ್ ಗಣೇಶನು ಕ್ಯಾಶ್ ನಲ್ಲಿ ಹತ್ತು ರುಪಾಯಿಯ ವ್ಯತ್ಯಾಸ ಕಂಡು ಬಂದಾಗ ಮೊದಲು ನೂರರ ಕಂತೆ ಎಣಿಸಲು ಶುರು ಮಾಡಿದನು.

೫) ತುಂಟತನ ಮಾಡುತ್ತಿದ್ದ ವಿದ್ಯಾರ್ಥಿಯನ್ನು ನೋಡಿ ಸಿಟ್ಟುಗೊಂಡ ತರಗತಿ ಅಧ್ಯಾಪಕರು "ಸಭ್ಯರೊಂದಿಗಿರಲು ನಾಲಾಯಕ್ ನೀನು ಹೋಗು ಹೆಡ್ ಮಾಸ್ಟರ ಬಳಿಗೆ " ಎಂದು ಗುಡುಗಿದರು.

೬)ನೂರು ರುಪಾಯಿ ಕದ್ದು ಜೈಲಿಗೆ ಬಂದು ಪೊಲೀಸರಿಂದ ಸಿಕ್ಕಾಪಟ್ಟೆ ಪೆಟ್ಟು ತಿಂದ ಕಿಸೆಗಳ್ಳನು ಅಜ್ಮಲ್ ಕಸಬ್ ಆರಾಮವಾಗಿ ಬಾಸ್ಮತಿ ಅನ್ನ ಊಟ ಮಾಡುವುದನ್ನು ಕಣ್ಣಾರೆ ನೋಡಿದನು.

೭)ಹತ್ತು ಲೇಖನಗಳಿಂದ ಸ್ವಲ್ಪ ಸ್ವಲ್ಪ ಕದ್ದು , ಖುದ್ದು ಬರೆದ ಲೇಖನವೆಂದು ಪ್ರಕಟಿಸಿದ ಲೇಖನಕ್ಕೆ "ತುಂಬಾ ಚೆನ್ನಾಗಿದೆ" ಎಂದು ಆ ಹತ್ತೂ ಲೇಖಕರು ಪ್ರತಿಕ್ರಿಯಿಸಿದರು.


೮)ಪಾಪ ನನ್ನ ಮಗಳು ಸೋಮವಾರ ತವರಿಗೆ ಬಂದರೆ ನಂತರ ನಾಲ್ಕು ದಿನ ಬಿಟ್ಟು ಶುಕ್ರವಾರವೇ ತವರಿಗೆ ಬರುವುದು ಅದೇ ನನ್ನ ಗಯ್ಯಾಳಿ ಸೊಸೆ ಪ್ರತೀ ದೀಪಾವಳಿಗೆ ತವರಿಗೆ ಹೋಗುತ್ತಾಳೆ ಎಂದು ಅತ್ತೆ ತಮ್ಮ ದುಃಖ ತೋಡಿಕೊಂಡರು.

೯)ಆಗ ತಾನೇ ಉಪನಯನವಾಗಿ ಗಾಯತ್ರೀ ಮಂತ್ರ ಗೊತ್ತಿಲ್ಲ ಎಂದ ವಟುವಿಗೆ " ಯಾಕೋ ಸುಳ್ಳು ಹೇಳ್ತೀಯಾ ?? ಅಪ್ಪ ಆ ದಿನ ಕಾಲ ಮೇಲೆ ಕೂರಿಸಿಕೊಂಡು ಕಿವಿಯಲ್ಲಿ ಏನು ಹೇಳಿಕೊಟ್ಟರೋ?? " ಎಂದು ಬೈದಾಗ ಅಪ್ಪ "ನೋಡು ಈಗ ಎಲ್ಲರೂ ಉಡುಗೊರೆ ಕೊಡುತ್ತಾರೆ ಜಾಗ್ರತೆಯಿಂದ ಎಲ್ಲಾ ತೆಗೆದುಕೊಂಡು ಅಮ್ಮನ ಬಳಿ ಕೊಡು ಎಂದರು" ಎಂದು ಮಾಣಿ ಸತ್ಯ ನುಡಿದ.

೧೦)ಒಬ್ಬಳು ಹೆಂಗಸಿನ ಹಿಂದೆ ಆರು ಮಕ್ಕಳು ಇಳಿದಾಗ " ಏನಮ್ಮಾ.... ಅರ್ಧ ಮಕ್ಕಳನ್ನು ಮನೆಯಲ್ಲಿ ಕೂರಿಸಿ ಇನ್ನು ಉಳಿದವರನ್ನು ಕರೆದುಕೊಂಡು ಬರಬಾರದೆ??" ಎಂದ ಕಂಡಕ್ಟರಗೆ  "ನಾನು ಈಗ ಮಾಡಿದ್ದೂ ಅದನ್ನೇ ಎಂದು ಹೇಳಿ ಆಕೆ ಬಿರಬಿರನೆ ಮುನ್ನಡೆದಳು.

೧೧)ಕಂಪ್ಯೂಟರ್ ಕ್ಲಾಸ್ ನಿಂದ ಮನೆಗೆ ಬಂದ ಎಲ್.ಕೆ.ಜಿ ಪೋರನು ಮನೆಯಲ್ಲಿದ್ದ ಬೀಗದ ಕೈ ಇಡುವ ಕೀ ಬೋರ್ಡು, ಮೌಸು (ಇಲಿ), ವಿಂಡೋಸ್ (ಕಿಟಕಿ),ಚಿಪ್ಪು (CHIP),ಕೆಲಸದ ರಾಮ (RAM),ಸ್ಕ್ರೀನು, ಇದನ್ನೆಲ್ಲಾ ಜೋಡಿಸಿ ಕಂಪ್ಯೂಟರ್ ಮಾಡಿಕೊಡಬೇಕೆಂದು ಹಠ ಹಿಡಿದನು.

=======================ವಿಕಟಕವಿ ==================

Comments

ಬಾಲು said…
ಹತ್ತು ಲೇಖನಗಳಿಂದ ಸ್ವಲ್ಪ ಸ್ವಲ್ಪ ಕದ್ದು , ಖುದ್ದು ಬರೆದ ಲೇಖನವೆಂದು ಪ್ರಕಟಿಸಿದ ಲೇಖನಕ್ಕೆ "ತುಂಬಾ ಚೆನ್ನಾಗಿದೆ" ಎಂದು ಆ ಹತ್ತೂ ಲೇಖಕರು ಪ್ರತಿಕ್ರಿಯಿಸಿದರು....
ತುಂಬಾ ಚೆನ್ನಾಗಿದೆ. :)
ಚೆನ್ನಾಗಿದೆ, ಮೊನ್ನೆ ತಾನೆ ನಿಮ್ಮ ಲೇಖನವನ್ನು ಮಗದೊಬ್ಬರು ತಮ್ಮದೇ ಎಂದು ಒಂದು ದಿನ ಪತ್ರಿಕೆಯಲ್ಲಿ ಹಾಕಿದ್ದರಂತೆ, ಗಮನಿಸಿದಿರೋ..
shridhar said…
This comment has been removed by the author.
shridhar said…
ಸುಮಂತ ಅವರೆ,
ಮಿಂಚಂಚೆಯಲ್ಲಿ ಬಂದ ಪತ್ರ ಹಾಸ್ಯಮಯವಾಗಿದೆಯೆಂದು ನನ್ನ ಬ್ಲೊಗನಲ್ಲಿ ಮೂಲ ಲೇಖಕರ ಕ್ಷಮೆಯಾಚಿಸಿ
ಪ್ರಕಟಿಸಿದ್ದೆ , ತದನಂತರ ಆ ಬರಹ ತಮ್ಮದೆಂದು ತಿಳಿಯಿತು , ತಮ್ಮ ಬ್ಲೊಗ್ ವೀಕ್ಷಿಸಿದೆ,
ತುಂಬ ಹಾಸ್ಯಮಯ ಬರಹಗಳು. ತಾವು ವಿಕಟಕವಿಯೆ ಸರಿ.
ತಮ್ಮ ಅಪ್ಪಣೆಯಿಲ್ಲದೆ ಬರಹವನ್ನು ಪ್ರಕಟಿಸಿದಕ್ಕೆ ಮತ್ತೊಮ್ಮೆ ಕ್ಷಮೆಯಿರಲಿ.
ನಮ್ಮ ಬ್ಲೊಗಗೆ ಒಮ್ಮೆ ಭೇಟಿ ಕೋಡಿ.

ಶ್ರೀಧರ ಭಟ್ಟ.

Popular posts from this blog

ನಾನು --ನನ್ನೂರು --ನನ್ನ ಜನ

***********************************DISCLAIMER*********************** ನಾನು ಕುಂದಾಪುರದವನು .ಶಿವಮೊಗ್ಗದ ಪೂರ್ಣ ಪರಿಚಯ ಕೂಡ ನನಗಿಲ್ಲ . ಕೇವಲ 2-3 ಬಾರಿ ಶಿವಮೊಗ್ಗಕ್ಕೆ ಹೋಗಿರಬಹುದು . ಆದರೂ ಕಲ್ಪನೆಯೆಂಬ ಕುದುರೆಯ ಬೆನ್ನೇರಿ ನನಗೆ ಬಂದ ಒಂದು SMS ನ್ನು ಬಂಡವಾಳವಾಗಿರಿಸಿಕೊಂಡು ನನ್ನ ಜೀವನದ ಕೆಲವು ನೈಜ ಘಟನೆಗಳನ್ನು ಪೂರಕವಾಗಿ ಬಳಸಿಕೊಂಡು ನನ್ನ ಸ್ವಂತ ಹಾಸ್ಯದ ಒಗ್ಗರಣೆ ಹಾಕಿ ತಯಾರಿಸಿದ ದಿಢೀರ್ ತಿಂಡಿ ( 4 ಗಂಟೆಯಲ್ಲಿ ಇಡೀ ಲೇಖನ ತಯಾರಾಗಿತ್ತು ). ಈ ಕಥೆಯಲ್ಲಿ ಬರೆದ ಎಲ್ಲ ವ್ಯಕ್ತಿಗಳೂ ಎಲ್ಲ ವಿಚಾರಗಳೂ ಕೇವಲ ಕಾಲ್ಪನಿಕ .ಆ ಪಾತ್ರಗಳ ಸೃಷ್ಟಿ -ಸ್ಥಿತಿ -ಲಯ ಎಲ್ಲದಕ್ಕೂ ನಾನೇ ಸೂತ್ರಧಾರ . *************************************************************************** ಶಿವಮೊಗ್ಗ ನನ್ನ ಹೆಮ್ಮೆಯ ಊರು .. ನನ್ನ ಜನ .ರಾತ್ರಿ ಹೊತ್ತಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಥವಾ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಯಾರೂ ನಿಮ್ಮನ್ನು ಎಬ್ಬಿಸಬೇಕಾದ ಅಗತ್ಯವಿಲ್ಲ . ಬೆಂಗಳೂರು ಬಂದೊಡನೆ ಬೆಂಗಳೂರಿನ Slum area ದ ದುರ್ನಾತದಿದಂದ ಎಚ್ಚರವಾದರೆ ನಮ್ಮ ಶಿವಮೊಗ್ಗ ಬಂದೊಡನೆ ನಿಸರ್ಗಮಾತೆಯ ಬೆಚ್ಚನೆಯ ಅಪ್ಪುಗೆಯಿಂದ ಎಚ್ಚರವಾಗುತ್ತದೆ. This is awesom man.. wonderful... hurrrrrrrrrrrahhhhhhhhh.......... GRS fantacy park ನ water pool ನಲ್ಲಿ ದಿನ...

ಎಮ್ಮೆ ನಿನಗೆ ಸಾಟಿಯಿಲ್ಲ

ಎಮ್ಮೆ ನಿನಗೆ ಸಾಟಿಯಿಲ್ಲ             ಒಲೆ ಮತ್ತು  ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ  ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...

ದಿಬ್ಬಣ

ಕೇಳಿದಳು ಕನಸಿನಲಿ ಕತ್ರಿನಾ ಕೈಫು ಆಗಲೇ ಸುಮಂತಾ ನಾ ನಿನ್ನ ವೈಫು ಹೇಳಿದೆನು ನೀನೊಂದು ಕೆಲಸವನು ಮಾಡು ಮನೆ ಮುಂದೆ ನಿಂತಿರುವ ಕ್ಯೂವನ್ನು ನೊಡು|| ಸೈಫ ಅಲಿ ಖಾನಲ್ಲಿ ಇಲ್ಲವೊ ದಮ್ಮು ನನ್ನವನಾಗೋ ಓ  ನನ್ನ ಸುಮ್ಮು!!!! ಬೇಡುತ್ತ ನಿಂತಿಹಳು ನೋಡು ಕರೀನಾ ಬಕರಾ ಆಗಲು ನಾನೇನು ಕುರಿ ನಾ ?? ಬಹುಕಾಲದಿಂದ ನಾ ಮೆಚ್ಚಿಹೆನು ನಿನ್ನ ತಪ್ಪು ಮಾಡಿದೆ ವರಿಸಿ ಸಣ್ಣ ’ಬಚ್ಚಾ’ನನ್ನ ( SMALL  ' B' ) ಓಡಿ ಬರುವೆ ನಾ ಹಿಡಿದು ನಿನ್ನ ಕೈ ತುದಿಗಾಲ ಮೇಲಿಹಳು ಐಶ್ವರ್ಯ ರೈ|| ನಮ್ಮೂರ ಗಂಡಿವನು ನನಗೆ ಪ್ರಿಫರೆನ್ಸು ಕ್ವೀನು ನಾನು ನೀನೇ ನನ್ನ ಪ್ರಿನ್ಸು ಇಲ್ಲ ಅಂದರೆ ನಿನಗೆ ನನ್ನ ಮೇಲಾಣೆ ಹಕ್ಕು ಚಲಾಯಿಸುತ್ತಿಹಳು ಪಡುಕೋಣೆ|| ಸೌತ್  ಇಂಡಿಯನ್ನರದ್ದು ಸಪರೇಟು ಸಾಲು ನಾನೇ ಬೇಕೆಂದು ಎಲ್ಲರದು ಗೋಳು ಒಲ್ಲೆನೆಂದರೆ ನಾನು  ಕುಡಿಯುವೆನು ವಿಷ ಎಂದು ಬೆದರಿಸುತ್ತಿದ್ದಾಳೆ ತ್ರಿಷಾ ಜಾನ್ ಹೈ ತು ಎನ್ನುತ್ತಾಳೆ  ಜೆನಿಲಿಯಾ ಛತ್ರ 'ಪತಿ' ಯಾಗೋ ಎಂದೆನುವ ಶ್ರೀಯಾ ನನ್ನೊಳಗೆ ನೀನು ನಿನ್ನೊಳಗೆ ನಾನು ಲಲ್ಲೆಗರೆಯುತ್ತಿರುವಳು ಆಸೀನು|| ಬಿಪಾಷಾ ಮಲ್ಲಿಕಾರನ್ನು ಮಾಡಿದೆ ಅವೈಡು ರಾಖೀ ಸಾವಂತು ಡಿಸ್ ಕ್ವಾಲಿಫೈಡು ಬೋಲ್ಡು ಮಾಡಲು ಎಸೆದಿಹಳು ಬಾಲನ್ನು ವಿದ್ಯಾ ಪ್ರಿಯಾಂಕ ಬರೆದು ಕಳಿಸಿರುವಳು ಪ್ರೇಮ ಪದ್ಯ || ಓದಿ ಕವನವ ಶಾಂತಿಗೆ ನೆತ್ತಿಗೇರಿತು ಪಿತ್ತ ಹುಡುಕಿದಳು ...