Skip to main content

ಶ್ಯಾನು "ಭೋಗ "

ಭೋಗ ಷಟ್ಪದಿಯಲ್ಲಿ ರಚಿತವಾದ ಈ ಷಟ್ಪದಿಗಳು ದಿನಾಂಕ 07/02/2010   ರ ವಿಜಯಕರ್ನಾಟಕದಲ್ಲಿ ( ಶ್ರೀವತ್ಸ ಜೋಷಿಯವರ " ಪರಾಗಸ್ಪರ್ಶ " ಅಂಕಣದಲ್ಲಿ ) ಪ್ರಕಟಿತ .
============================================================





ಏರುಪೇರು ಭರತವಿಳಿತ

ಜಾರುಬಂಡಿ ಮೆಟ್ಟಿಲಾಟ

ಷೇರುಮಾರುಕಟ್ಟೆಯೊಳಗಿದೆಷ್ಟು ಗೊಂದಲ

ಬಾರು-ಬೀರಿನಂತೆ ನೀವು

ಷೇರುದಾಸನಾದರಂಡ್ರ

ವೇರಿನಲ್ಲಿ ಬರುವ ದಿನವು ದೂರವುಳಿಯದು
====================================================
ಭೋಗದಲ್ಲಿ ಬರೆದೆ ಎಂದು

ಬೀಗುತಿರುವ ನೀನು ಹೀರೊ

ಆಗಬೇಡವೆಂದು ಗೆಳೆಯ ಟಾಂಟು ಹೊಡೆದನು

ಯೋಗ ನೆಟ್ಟಗಿದ್ದು ಪ್ರಕಟ

ವಾಗಿಬಿಟ್ಟರೆನ್ನ ಕವನ

ಬೀಗ ಜಡಿದು ಬಿಡುವೆ ನೋಡಿರವನ  ಬಾಯಿಗೆ
 ======================================
ಆಲು ಬೆಲೆಯು ಗಗನದಲ್ಲಿ

ಪಾಲಕಂತು ಮುಟ್ಟಲಾರೆ



ಕಾಲು ಕೇಜಿ ಬದನೆಕಾಯಿಗೆಂಟು ರೂಗಳು
ಚೀಲ ತುಂಬ ಸೊಪ್ಪು ತರುವ
ಕಾಲ ಹೋಯ್ತು ಈಗ ದೊಡ್ಡ
ಸಾಲ ಮಾಡಬೇಕು ಕಾಯಿಪಲ್ಲೆ ತಿನ್ನಲು
 ==========================================
ಕೊಂದು ತಂದು ಕೋಳಿಯನ್ನು
ಬೆಂದ ಮೇಲೆ ಖಾರ ಹಚ್ಚಿ
ತಂದುರಿಯನು ಮಾಡಿ ತಿಂದರೆಷ್ಟು ಚೆನ್ನವೋ
ಅಂದು ರಾತ್ರಿ ತಂದೆಯೊಡನೆ
ಒಂದು ಪೆಗ್ಗು ವಿಸ್ಕಿ ಕುಡಿದು
ಗುಂಡು-ತುಂಡು  ಸೇವೆಯನ್ನು ಪೂರ್ಣ ಮಾಡಿದೆ.
 ======================================================
ನಾಳೆಯೇನು ತಿಂಡಿಗೆಂದು
ಕೇಳಿದಾಗ ಮಮ್ಮಿಯನ್ನು
ಗೋಳಿಬಜೆಯ ಜೊತೆಗೆ ಕಾಯಿ ಚಟ್ನಿಯೆಂದಳು
ಹಾಲು ತರಲು ಹೋಗಲಮ್ಮ
ಕಳ್ಳನಂತೆ ನುಗ್ಗಿ ನಾನು
ಏಳು ಗೋಳಿಬಜೆಯ ಚಟ್ನಿಯೊಡನೆ ತಿಂದೆನು
====================== ವಿಕಟಕವಿ ==================

Comments

Anonymous said…
super maraya :)
ನೀವು ಬರೆದ ಷಟ್ಪದೀಯ
ಓದಿ ನಗುವ ತಡೆಯಲಾರ್ದೆ
ಬಾಯೊಳಿಪ್ಪ ಪೂರ ಹಲ್ಲ ತೋರಿ ಬಿಟ್ಟೆವು
ನಿಮ್ಮ ಎಲ್ಲ ಬರಹ ಓದಿ
ಬಾಯ ಕೊನೆಯು ಕಿವಿಗೆ ಸೇರಿ
ಒ೦ದು ತಾಸು ಸಾಲದಾಯ್ತು ಬಾಯಿ ಮುಚ್ಚಲು
ಧನ್ಯವಾದಗಳು ಜ್ಯೋತಿ ಮತ್ತು "." ಅಂದರೆ ಚುಕ್ಕಿ :)
NLsha said…
Why these shatpadi's are haunting me.your creations are interesting. This is Modern Jaanapada

Popular posts from this blog

ನಾನು --ನನ್ನೂರು --ನನ್ನ ಜನ

***********************************DISCLAIMER*********************** ನಾನು ಕುಂದಾಪುರದವನು .ಶಿವಮೊಗ್ಗದ ಪೂರ್ಣ ಪರಿಚಯ ಕೂಡ ನನಗಿಲ್ಲ . ಕೇವಲ 2-3 ಬಾರಿ ಶಿವಮೊಗ್ಗಕ್ಕೆ ಹೋಗಿರಬಹುದು . ಆದರೂ ಕಲ್ಪನೆಯೆಂಬ ಕುದುರೆಯ ಬೆನ್ನೇರಿ ನನಗೆ ಬಂದ ಒಂದು SMS ನ್ನು ಬಂಡವಾಳವಾಗಿರಿಸಿಕೊಂಡು ನನ್ನ ಜೀವನದ ಕೆಲವು ನೈಜ ಘಟನೆಗಳನ್ನು ಪೂರಕವಾಗಿ ಬಳಸಿಕೊಂಡು ನನ್ನ ಸ್ವಂತ ಹಾಸ್ಯದ ಒಗ್ಗರಣೆ ಹಾಕಿ ತಯಾರಿಸಿದ ದಿಢೀರ್ ತಿಂಡಿ ( 4 ಗಂಟೆಯಲ್ಲಿ ಇಡೀ ಲೇಖನ ತಯಾರಾಗಿತ್ತು ). ಈ ಕಥೆಯಲ್ಲಿ ಬರೆದ ಎಲ್ಲ ವ್ಯಕ್ತಿಗಳೂ ಎಲ್ಲ ವಿಚಾರಗಳೂ ಕೇವಲ ಕಾಲ್ಪನಿಕ .ಆ ಪಾತ್ರಗಳ ಸೃಷ್ಟಿ -ಸ್ಥಿತಿ -ಲಯ ಎಲ್ಲದಕ್ಕೂ ನಾನೇ ಸೂತ್ರಧಾರ . *************************************************************************** ಶಿವಮೊಗ್ಗ ನನ್ನ ಹೆಮ್ಮೆಯ ಊರು .. ನನ್ನ ಜನ .ರಾತ್ರಿ ಹೊತ್ತಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಥವಾ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಯಾರೂ ನಿಮ್ಮನ್ನು ಎಬ್ಬಿಸಬೇಕಾದ ಅಗತ್ಯವಿಲ್ಲ . ಬೆಂಗಳೂರು ಬಂದೊಡನೆ ಬೆಂಗಳೂರಿನ Slum area ದ ದುರ್ನಾತದಿದಂದ ಎಚ್ಚರವಾದರೆ ನಮ್ಮ ಶಿವಮೊಗ್ಗ ಬಂದೊಡನೆ ನಿಸರ್ಗಮಾತೆಯ ಬೆಚ್ಚನೆಯ ಅಪ್ಪುಗೆಯಿಂದ ಎಚ್ಚರವಾಗುತ್ತದೆ. This is awesom man.. wonderful... hurrrrrrrrrrrahhhhhhhhh.......... GRS fantacy park ನ water pool ನಲ್ಲಿ ದಿನ...

ನಾನು ನನ್ನ ಸಂಸಾರ

ಭಾನುವಾರ ಬೆಳಿಗ್ಗೆ Breaking News ನ ಹುಡುಕಾಟದಲ್ಲಿ News Paper ಓದುತ್ತ Hall ನಲ್ಲಿ ಕೂತಿದ್ದೆ . ಆದರೆ ಆ Breaking News ನಮ್ಮ ಮನೆಯಲ್ಲೇ ನಡೆಯುತ್ತದೆಂದು ಕನಸಿನಲ್ಲೂ ಯೋಚಿಸಿರಲಿಲ್ಲ . " ರೀ ... ಇವತ್ತು ಉಪ್ಪಿಟ್ಟು ಮಾಡುತ್ತೇನೆ ... ಅಡುಗೆ ಮನೆಯಿಂದ ನನ್ನವಳು ಉಲಿದಳು. ಎದೆ ಝಾಲ್ಲೆಂದಿತು!!!!! ತಕ್ಷಣ ಮೊಬೈಲ್ ಫೋನ್ ನ Contact list ನಲ್ಲಿದ್ದ ಎಲ್ಲರಿಗೂ ಕರೆ ಮಾಡಿ ಮಾತಾಡಿದೆ . "ಏನೋ ..... ಬೆಳಿಗ್ಗೆ ಬೆಳಿಗ್ಗೆ ಫೋನ್ ಮಾಡಿ ಬಿಟ್ಟಿದ್ದೀಯಾ !!!!! ಎಂದು ಎಲ್ರೂ ಕೇಳಿದ್ರು ... ಹೌದು ಮಧ್ಯಾನ್ನ ಹೇಗಿರ್ತೀನಿ ಅಂತ sure ಇಲ್ಲ ಅದಕ್ಕೆ ಈಗಲೇ ಮಾಡಿದೆ ಎಂದೆನು. ಕಳೆದ ಬಾರಿ ನನ್ನವಳ "ಹಸ್ತಗುಣದ" ಬಲಿಪಶುವಾಗಿದ್ದ ರಮೇಶಣ್ಣ ... ಲೋ Insurance Premium ಕಟ್ಟಿದ್ದೀಯ ತಾನೇ ?? ಎಂದು ಕೇಳಿದ . ಹೌದು ಎಂದೆನು . ನನ್ನವಳು ಮನೆಯೊಳಗಿದ್ದರೆ ನನಗೂ ಕೋಟಿ ರುಪಾಯಿ . ಆದರೆ ಅಡುಗೆ ಮನೆ ಹೊಕ್ಕರೆ ಸ್ವಲ್ಪ ಭಯವಾಗುವುದು ಸಹಜ . ಒಹ್ ..... ಕ್ಷಮಿಸಿ ನನ್ನವಳ ಪರಿಚಯ ಮಾಡುವುದೇ ಮರೆತು ಹೋದೆ . ಇವಳ ಹೆಸರು ಸುಶಾಂತಿ . ದೇವರಾಣೆಗೂ ಇದು ಕೇವಲ ಅಂಕಿತನಾಮ . ನನ್ನ ಅತ್ತೆ ಮಾವಂದಿರ ಏಕೈಕ ಪುತ್ರಿ . ಅವರ ಕುಟುಂಬದಲ್ಲಿ ಇವಳ ತಂದೆ ತಾಯಿ ಬಿಟ್ಟು ಬೇರೆ ಎಲ್ಲರಿಗೂ ಗಂಡು ಮಕ್ಕಳು. ಇದರಿಂದಾಗಿ "ಪಾರ್ವತಿಯ " ತರಹ ಇವಳು ಕೂಡ "ಮುದ್ದಿನ ಮನೆಮಗಳು ". " ಆ...

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು...