Skip to main content

ಪಟ್ ಪಟ್ ಪಟಾಕಿ !!!

1)ಶರ್ಟಿಗೆ ಎರಡು ಮೀಟರ್ ಬಟ್ಟೆ ಯಾಕ್ರಿ ?? ಪಕ್ಕದ ಓಣಿ ಟೈಲರ್ ಒಂದೂವರೆ ಮೀಟರ್ ಸಾಕು ಎಂದ !!! ಎಂದು ಟೈಲರ್ ನನ್ನು ದಬಾಯಿಸಿದಾಗ ಅವರು ಹೇಳಿದ್ದು ಸರಿ ಆದರೆ ಅವರ ಮಗ ಎರಡನೇ ಕ್ಲಾಸ್ ನನ್ನ ಮಗ ಎಂಟನೆ ಕ್ಲಾಸ್ ಎಂದು ಟೈಲರ್ ಶಾಂತವಾಗಿ ಉತ್ತರಿಸಿದನು.

2)ನಿನಗೋಸ್ಕರ ಚಂದ್ರ - ತಾರೆ - ಚುಕ್ಕೆಗಳನ್ನು ಹೆಕ್ಕಿ ತರಲೇ?? ಎಂದ ಪ್ರಿಯತಮನಿಗೆ "ಅದೆಲ್ಲಾ ಬೇಡಾ  ಮಾರಾಯ ಬಾಯಾರಿಕೆ ಆತಿತ್ತ ಒಂದ್ ಬೊಂಡ (ಎಳನೀರು) ತೆಗೆದುಕೊಡು" ಎಂದಾಗ ಅವನು  "ಮರ ಸುಮಾರು ದೊಡ್ದುಂಟು ಮಾರಾಯ್ತಿ !!!!" ಎಂದು ತಬ್ಬಿಬ್ಬಾದನು.

3)ಸರಸದಲ್ಲಿರಲು ಏನೋ ತಮಾಷೆಗೆ  ನಾನು  "You are so Sweet" ಎಂದು ಹೇಳಿದ್ದನ್ನೇ ನನ್ನ ಶಾಂತಿ ಸೀರಿಯಸ್ಸಾಗಿ ತೆಗೆದುಕೊಂಡು ತಾನು ಕುಳಿತ ಜಾಗದ ಸುತ್ತ ಡಿಡಿಟಿಯ ರಂಗೋಲಿ ಹಾಕಿಕೊಂಡಳು.

4)ಕನ್ನಡದಿಂದ - ಚೈನೀಸ್ ಅನುವಾದ ಭಾಷೆಯ ಪುಸ್ತಕದಿಂದ ಉರು ಹೊಡೆದು ಬೀಜಿಂಗ್ ನ ತರಕಾರಿ ಮಾರುಕಟ್ಟೆಗೆ ಹೋಗಿ "ಸ್ಯಾನ್ ವೊಕ್ಯೊಸ್ಜ್  2kg" ಎಂದು ಕೇಳಿದೊಡನೆ "ಏಯ್ ಮಾಣಿ ಎರ್ಡ್ ಕೇಜೀ ಗುಂಬ್ಳಕಾಯಿ ತೆಕಬಾರಾ " ಎಂದು ಅಂಗಡಿಯ ಮಾಲಿಕನಾದ ಕುಂದಾಪುರದ ಶೀನಣ್ಣ ಬೊಬ್ಬೆ ಹೊಡೆದನು.

5)ಯಕ್ಷಗಾನ ದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾಗ ಅಭ್ಯಾಸಬಲದಿಂದ "ದುಷ್ಟಾ.. ನಿನ್ನ ಎರಡೂ ಕೈಗಳನ್ನು CUT ಮಾಡಿಬಿಡುತ್ತೇನೆ ಎಂದು ಅಬ್ಬರಿಸಿದ ಪಾತ್ರಧಾರಿಗೆ ತಾನು ಆಂಗ್ಲ ಭಾಷಾಪ್ರಯೋಗ ಮಾಡಿದೆನೆಂದು ಅರಿವಾಗಿ ತಕ್ಷಣವೇ "SORRY"  ಎಂದನು.

6)ಅಮೇರಿಕಾದಿಂದ ಊರಿಗೆ ರಜಾದಿನದಲ್ಲಿ ಅಜ್ಜಿ ಮನೆಗೆ ಬಂದ ಪುಟ್ಟ ಅಜ್ಜಿಯನ್ನು ತುಂಬಾ ಹಚ್ಚಿಕೊಂಡು ವಾಪಾಸು ಹೋಗುವಾಗ "ಅಜ್ಜಿ ನೀನು ಆರ್ಕುಟ್ ನಲ್ಲಿ ಇದ್ದೀಯಾ ?? ಎಂದು ಕೇಳಿದನು.

7)ಸುದೃಢ ಸಮ್ಮಿಶ್ರ ಸರ್ಕಾರಕ್ಕೆ ಒಂದು ಉದಾಹರಣೆ ಕೊಡಿ ಎಂದಾಗ "ಸಾರ್ ಮೊನ್ನೆಯ ತೊವ್ವೆ ನಿನ್ನೆಯ ರಸಮ್ ಬೆಳಿಗ್ಗೆಯ ಚಟ್ನಿಗಳ ಮೈತ್ರಿಯಿಂದ ಆಗಿರುವ ನಮ್ಮಮ್ಮನ ಸಾಂಬಾರ್" ಎಂದೆನು.

8)ಚಿಕ್ಕ ಮಗು ಅರ್ಥವಾಗದು ಎಂದುಕೊಂಡು "ನೋಡು ಪುಟ್ಟಾ.. ಈ ಚೀಟಿಯಲ್ಲಿ ಒಂದು ಸುಳಿವು ಇದೆ ಅದನ್ನು ಅರ್ಥ ಮಾಡಿಕೊಂಡು ಆ ಸ್ಥಳಕ್ಕೆ ಹೋದರೆ ಅಲ್ಲಿ ಇನ್ನೊಂದು ಸುಳಿವು ಸಿಗುತ್ತದೆ ಹೀಗೆ ಕೊನೆಯವರೆ ಹೋದರೆ ನಿನಗೆ ಬಹುಮಾನ ಎಂದು ನಿರ್ವಾಹಕ ಹೇಳಿದಾಗ... ಒಹ್!! Treasure Hunt ಅಲ್ವಾ ?? ಸರಿ ಅಂಕಲ್ ಎಂದು ಪುಟ್ಟ ಮುನ್ನಡೆದ.

9) "ಚಾಲಕನ ಹಿಂದಿನ ನಾಲ್ಕು ಸೀಟುಗಳು ಮಹಿಳೆಯರಿಗೆ ಮೀಸಲು" ಬರೆದದ್ದನ್ನು ಓದಿ ಅಲ್ಲೇ ಸೀಟಿನ ಕೆಳಗೆ ಕ್ಲೀನರ್ ಇಟ್ಟಿದ್ದ ನೀರಿನ ಬಾಲ್ದಿ ಮತ್ತು ಚೆಂಬನ್ನು ನೋಡಿ ಕುಂದಾಪುರದ ಕಣ್ಮಣಿ ಹೌಹಾರಿದನು. ( ಕುಂದಾಪುರ ಕನ್ನಡದಲ್ಲಿ ಮೀಸಲು ಎಂದರೆ ಸ್ನಾನ ಮಾಡಿಸಲು ಎಂದರ್ಥ  )

10)ನಿದ್ದೆಗೆಟ್ಟು ಊಟ ಬಿಟ್ಟು ಹಗಲಿರುಳೂ ಕಷ್ಟಪಟ್ಟು ಮಹಾವಿಜ್ಞಾನಿಯು seedless ನೆಲಗಡಲೆಯನ್ನು ಕಂಡುಹಿಡಿದನು.

==========================================ವಿಕಟಕವಿ ========================

Comments

Anonymous said…
Super :-)
PARAANJAPE K.N. said…
ಎಲ್ಲೋಗಿದ್ರಿ ಮಾರಾಯ್ರೇ ಇಷ್ಟು ದಿವ್ಸ, ಪಟಾಕಿ ಜೋರಾಗಿದೆ. ಮುಂದುವರಿಸಿ, ಬಿಡಬೇಡಿ
Anonymous said…
Superb dude!
Anonymous said…
As usual super guruve...

inti,
follower of u r blog
Thanks you all

yours sincerely
Sumanth
ಪಟಾಕಿ ಜೋರಾಗಿದೆ. ನಕ್ಕು ನಕ್ಕು ಸಾಕಾಯ್ತು.

Popular posts from this blog

ನಾನು --ನನ್ನೂರು --ನನ್ನ ಜನ

***********************************DISCLAIMER*********************** ನಾನು ಕುಂದಾಪುರದವನು .ಶಿವಮೊಗ್ಗದ ಪೂರ್ಣ ಪರಿಚಯ ಕೂಡ ನನಗಿಲ್ಲ . ಕೇವಲ 2-3 ಬಾರಿ ಶಿವಮೊಗ್ಗಕ್ಕೆ ಹೋಗಿರಬಹುದು . ಆದರೂ ಕಲ್ಪನೆಯೆಂಬ ಕುದುರೆಯ ಬೆನ್ನೇರಿ ನನಗೆ ಬಂದ ಒಂದು SMS ನ್ನು ಬಂಡವಾಳವಾಗಿರಿಸಿಕೊಂಡು ನನ್ನ ಜೀವನದ ಕೆಲವು ನೈಜ ಘಟನೆಗಳನ್ನು ಪೂರಕವಾಗಿ ಬಳಸಿಕೊಂಡು ನನ್ನ ಸ್ವಂತ ಹಾಸ್ಯದ ಒಗ್ಗರಣೆ ಹಾಕಿ ತಯಾರಿಸಿದ ದಿಢೀರ್ ತಿಂಡಿ ( 4 ಗಂಟೆಯಲ್ಲಿ ಇಡೀ ಲೇಖನ ತಯಾರಾಗಿತ್ತು ). ಈ ಕಥೆಯಲ್ಲಿ ಬರೆದ ಎಲ್ಲ ವ್ಯಕ್ತಿಗಳೂ ಎಲ್ಲ ವಿಚಾರಗಳೂ ಕೇವಲ ಕಾಲ್ಪನಿಕ .ಆ ಪಾತ್ರಗಳ ಸೃಷ್ಟಿ -ಸ್ಥಿತಿ -ಲಯ ಎಲ್ಲದಕ್ಕೂ ನಾನೇ ಸೂತ್ರಧಾರ . *************************************************************************** ಶಿವಮೊಗ್ಗ ನನ್ನ ಹೆಮ್ಮೆಯ ಊರು .. ನನ್ನ ಜನ .ರಾತ್ರಿ ಹೊತ್ತಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಥವಾ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಯಾರೂ ನಿಮ್ಮನ್ನು ಎಬ್ಬಿಸಬೇಕಾದ ಅಗತ್ಯವಿಲ್ಲ . ಬೆಂಗಳೂರು ಬಂದೊಡನೆ ಬೆಂಗಳೂರಿನ Slum area ದ ದುರ್ನಾತದಿದಂದ ಎಚ್ಚರವಾದರೆ ನಮ್ಮ ಶಿವಮೊಗ್ಗ ಬಂದೊಡನೆ ನಿಸರ್ಗಮಾತೆಯ ಬೆಚ್ಚನೆಯ ಅಪ್ಪುಗೆಯಿಂದ ಎಚ್ಚರವಾಗುತ್ತದೆ. This is awesom man.. wonderful... hurrrrrrrrrrrahhhhhhhhh.......... GRS fantacy park ನ water pool ನಲ್ಲಿ ದಿನ...

ನಾನು ನನ್ನ ಸಂಸಾರ

ಭಾನುವಾರ ಬೆಳಿಗ್ಗೆ Breaking News ನ ಹುಡುಕಾಟದಲ್ಲಿ News Paper ಓದುತ್ತ Hall ನಲ್ಲಿ ಕೂತಿದ್ದೆ . ಆದರೆ ಆ Breaking News ನಮ್ಮ ಮನೆಯಲ್ಲೇ ನಡೆಯುತ್ತದೆಂದು ಕನಸಿನಲ್ಲೂ ಯೋಚಿಸಿರಲಿಲ್ಲ . " ರೀ ... ಇವತ್ತು ಉಪ್ಪಿಟ್ಟು ಮಾಡುತ್ತೇನೆ ... ಅಡುಗೆ ಮನೆಯಿಂದ ನನ್ನವಳು ಉಲಿದಳು. ಎದೆ ಝಾಲ್ಲೆಂದಿತು!!!!! ತಕ್ಷಣ ಮೊಬೈಲ್ ಫೋನ್ ನ Contact list ನಲ್ಲಿದ್ದ ಎಲ್ಲರಿಗೂ ಕರೆ ಮಾಡಿ ಮಾತಾಡಿದೆ . "ಏನೋ ..... ಬೆಳಿಗ್ಗೆ ಬೆಳಿಗ್ಗೆ ಫೋನ್ ಮಾಡಿ ಬಿಟ್ಟಿದ್ದೀಯಾ !!!!! ಎಂದು ಎಲ್ರೂ ಕೇಳಿದ್ರು ... ಹೌದು ಮಧ್ಯಾನ್ನ ಹೇಗಿರ್ತೀನಿ ಅಂತ sure ಇಲ್ಲ ಅದಕ್ಕೆ ಈಗಲೇ ಮಾಡಿದೆ ಎಂದೆನು. ಕಳೆದ ಬಾರಿ ನನ್ನವಳ "ಹಸ್ತಗುಣದ" ಬಲಿಪಶುವಾಗಿದ್ದ ರಮೇಶಣ್ಣ ... ಲೋ Insurance Premium ಕಟ್ಟಿದ್ದೀಯ ತಾನೇ ?? ಎಂದು ಕೇಳಿದ . ಹೌದು ಎಂದೆನು . ನನ್ನವಳು ಮನೆಯೊಳಗಿದ್ದರೆ ನನಗೂ ಕೋಟಿ ರುಪಾಯಿ . ಆದರೆ ಅಡುಗೆ ಮನೆ ಹೊಕ್ಕರೆ ಸ್ವಲ್ಪ ಭಯವಾಗುವುದು ಸಹಜ . ಒಹ್ ..... ಕ್ಷಮಿಸಿ ನನ್ನವಳ ಪರಿಚಯ ಮಾಡುವುದೇ ಮರೆತು ಹೋದೆ . ಇವಳ ಹೆಸರು ಸುಶಾಂತಿ . ದೇವರಾಣೆಗೂ ಇದು ಕೇವಲ ಅಂಕಿತನಾಮ . ನನ್ನ ಅತ್ತೆ ಮಾವಂದಿರ ಏಕೈಕ ಪುತ್ರಿ . ಅವರ ಕುಟುಂಬದಲ್ಲಿ ಇವಳ ತಂದೆ ತಾಯಿ ಬಿಟ್ಟು ಬೇರೆ ಎಲ್ಲರಿಗೂ ಗಂಡು ಮಕ್ಕಳು. ಇದರಿಂದಾಗಿ "ಪಾರ್ವತಿಯ " ತರಹ ಇವಳು ಕೂಡ "ಮುದ್ದಿನ ಮನೆಮಗಳು ". " ಆ...

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು...