Skip to main content

ಆಪೀಸಾಯಣ

ನವೆಂಬರ್ 22 ರಂದು ಆಪೀಸಿನಲ್ಲಿ ಆಚರಿಸಿದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಪೀಸಿನಲ್ಲಿರುವವರ ಹೆಸರನ್ನೆಲ್ಲ ಸೇರಿಸಿ ಹೊಸೆದ ಪದ್ಯ. ನೀಲಿ  ಬಣ್ಣದಲ್ಲಿ ಬರೆದವು ಅವರ ಹೆಸರುಗಳು.



ದೇವಾದಿದೇವತೆಗಳು ಸಭೆಯನ್ನು ನಡೆಸಿ
ಸಭೆಯೊಳಗೆ ಸುಮಧುರ ಕನ್ನಡವ ಬಡಿಸಿ ||
ಎಲ್ಲಾ ದೇವರಿಗೂ ಕನ್ನಡವು ಹಿಡಿಸಿ
ಬಂದು ಕೂತಿಹರೆಲ್ಲ tatasky ODC ||

              ಕೃಷ್ಣನಿಹನಿಲ್ಲಿ  ಇಹನು  ರಘು-ರಾಮ
                    ಮಂಜುನಾಥರು ತ್ರಿಮೂರ್ತಿಯಲಿ ಹರಸಿರುವ ಧಾಮ ||
                    ಪಾವನ-ಪುನೀತರಾಗಿ ಕೇಳಿ ಮೋಹನನ ಬಾನ್ಸುರಿ
                    ಸ್ವಪ್ನದಲ್ಲಷ್ಟೇ ಸಿಗುವುದು ಇಂಥಹ ಚಾನ್ಸು ರೀ... ||

ವಿಘ್ನದಿಂ ಕಾಯುತಿಹ ದ್ವಾರದಲೇ ಬೆನಕ
ಎಲ್ಲ ದೇವರಿಗೂ ಶರಣು ನಮ್ಮ ಗುರುಗಳ ತನಕ
ಸಂಕಟದಿ ಕರೆದೊಡನೆ ಸ್ವಾಮಿ ವೆಂಕಟೇಶ
ಹರುಷದಲಿ ಕಳಿಸುವನು ಮೇಘ ಸಂದೇಶ ||

          ದೇವತೆಗಳಿಗೂ ಇಹುದು ನಮ್ಮ ನೋಡುವ ಇರಾದೆ
          ಪ್ರಿಯವದನರಾಗಿ ಬಂದಿಹರು ಲಕ್ಷ್ಮಿ ಮತ್ತು ರಾಧೆ
          ಶಾರದೆಯ ಆಶೀರ್ವಾದವೇ ನಮಗೆ ಕತ್ತಲಲಿ ದೀಪ್ತಿ ವಿಜಯಕ್ಕೆ ಸ್ಪೂರ್ತಿ
         ಒಂದು ನಿಮಿಷ... ನನ್ನ ಕಾವ್ಯವಾಗಿಲ್ಲ ಪೂರ್ತಿ!!!

                              ಕನ್ನಡಿಗರು ನಾವು... ಕಾಯಕಕ್ಕೆ ಸೈ ವಿಶ್ವಾಸಕ್ಕೆ ಜೈ||
                              ನಮ್ಮೆಲ್ಲರ ಮನಸ್ಸು ಹೃದಯ ಬಾನಿನಷ್ಟು ಹೈ
                              ಸ್ನೇಹದಲ್ಲೋ ನಮ್ಮೆಲ್ಲದದು ಸದಾ ಎತ್ತಿದ ಕೈ
                              ಇದಕ್ಕೆ ಒಳ್ಳೆಯ ಉದಾಹರಣೆ.. ಒಂದೇ ಕುಟುಂಬದಂತಿರುವ ನಮ್ಮ tatasky
                                  
                                                               ------ ವಿಕಟಕವಿ 

Comments

ತುಂಬಾ ಚೆನ್ನಾಗಿದೆ .... ಇನ್ನಷ್ಟು ಹಾಸ್ಯ ಲೇಖನಗಳ ನಿರೀಕ್ಷೆಯಲ್ಲಿ ...

Popular posts from this blog

ನಾನು --ನನ್ನೂರು --ನನ್ನ ಜನ

***********************************DISCLAIMER*********************** ನಾನು ಕುಂದಾಪುರದವನು .ಶಿವಮೊಗ್ಗದ ಪೂರ್ಣ ಪರಿಚಯ ಕೂಡ ನನಗಿಲ್ಲ . ಕೇವಲ 2-3 ಬಾರಿ ಶಿವಮೊಗ್ಗಕ್ಕೆ ಹೋಗಿರಬಹುದು . ಆದರೂ ಕಲ್ಪನೆಯೆಂಬ ಕುದುರೆಯ ಬೆನ್ನೇರಿ ನನಗೆ ಬಂದ ಒಂದು SMS ನ್ನು ಬಂಡವಾಳವಾಗಿರಿಸಿಕೊಂಡು ನನ್ನ ಜೀವನದ ಕೆಲವು ನೈಜ ಘಟನೆಗಳನ್ನು ಪೂರಕವಾಗಿ ಬಳಸಿಕೊಂಡು ನನ್ನ ಸ್ವಂತ ಹಾಸ್ಯದ ಒಗ್ಗರಣೆ ಹಾಕಿ ತಯಾರಿಸಿದ ದಿಢೀರ್ ತಿಂಡಿ ( 4 ಗಂಟೆಯಲ್ಲಿ ಇಡೀ ಲೇಖನ ತಯಾರಾಗಿತ್ತು ). ಈ ಕಥೆಯಲ್ಲಿ ಬರೆದ ಎಲ್ಲ ವ್ಯಕ್ತಿಗಳೂ ಎಲ್ಲ ವಿಚಾರಗಳೂ ಕೇವಲ ಕಾಲ್ಪನಿಕ .ಆ ಪಾತ್ರಗಳ ಸೃಷ್ಟಿ -ಸ್ಥಿತಿ -ಲಯ ಎಲ್ಲದಕ್ಕೂ ನಾನೇ ಸೂತ್ರಧಾರ . *************************************************************************** ಶಿವಮೊಗ್ಗ ನನ್ನ ಹೆಮ್ಮೆಯ ಊರು .. ನನ್ನ ಜನ .ರಾತ್ರಿ ಹೊತ್ತಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಥವಾ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಯಾರೂ ನಿಮ್ಮನ್ನು ಎಬ್ಬಿಸಬೇಕಾದ ಅಗತ್ಯವಿಲ್ಲ . ಬೆಂಗಳೂರು ಬಂದೊಡನೆ ಬೆಂಗಳೂರಿನ Slum area ದ ದುರ್ನಾತದಿದಂದ ಎಚ್ಚರವಾದರೆ ನಮ್ಮ ಶಿವಮೊಗ್ಗ ಬಂದೊಡನೆ ನಿಸರ್ಗಮಾತೆಯ ಬೆಚ್ಚನೆಯ ಅಪ್ಪುಗೆಯಿಂದ ಎಚ್ಚರವಾಗುತ್ತದೆ. This is awesom man.. wonderful... hurrrrrrrrrrrahhhhhhhhh.......... GRS fantacy park ನ water pool ನಲ್ಲಿ ದಿನ...

ನಾನು ನನ್ನ ಸಂಸಾರ

ಭಾನುವಾರ ಬೆಳಿಗ್ಗೆ Breaking News ನ ಹುಡುಕಾಟದಲ್ಲಿ News Paper ಓದುತ್ತ Hall ನಲ್ಲಿ ಕೂತಿದ್ದೆ . ಆದರೆ ಆ Breaking News ನಮ್ಮ ಮನೆಯಲ್ಲೇ ನಡೆಯುತ್ತದೆಂದು ಕನಸಿನಲ್ಲೂ ಯೋಚಿಸಿರಲಿಲ್ಲ . " ರೀ ... ಇವತ್ತು ಉಪ್ಪಿಟ್ಟು ಮಾಡುತ್ತೇನೆ ... ಅಡುಗೆ ಮನೆಯಿಂದ ನನ್ನವಳು ಉಲಿದಳು. ಎದೆ ಝಾಲ್ಲೆಂದಿತು!!!!! ತಕ್ಷಣ ಮೊಬೈಲ್ ಫೋನ್ ನ Contact list ನಲ್ಲಿದ್ದ ಎಲ್ಲರಿಗೂ ಕರೆ ಮಾಡಿ ಮಾತಾಡಿದೆ . "ಏನೋ ..... ಬೆಳಿಗ್ಗೆ ಬೆಳಿಗ್ಗೆ ಫೋನ್ ಮಾಡಿ ಬಿಟ್ಟಿದ್ದೀಯಾ !!!!! ಎಂದು ಎಲ್ರೂ ಕೇಳಿದ್ರು ... ಹೌದು ಮಧ್ಯಾನ್ನ ಹೇಗಿರ್ತೀನಿ ಅಂತ sure ಇಲ್ಲ ಅದಕ್ಕೆ ಈಗಲೇ ಮಾಡಿದೆ ಎಂದೆನು. ಕಳೆದ ಬಾರಿ ನನ್ನವಳ "ಹಸ್ತಗುಣದ" ಬಲಿಪಶುವಾಗಿದ್ದ ರಮೇಶಣ್ಣ ... ಲೋ Insurance Premium ಕಟ್ಟಿದ್ದೀಯ ತಾನೇ ?? ಎಂದು ಕೇಳಿದ . ಹೌದು ಎಂದೆನು . ನನ್ನವಳು ಮನೆಯೊಳಗಿದ್ದರೆ ನನಗೂ ಕೋಟಿ ರುಪಾಯಿ . ಆದರೆ ಅಡುಗೆ ಮನೆ ಹೊಕ್ಕರೆ ಸ್ವಲ್ಪ ಭಯವಾಗುವುದು ಸಹಜ . ಒಹ್ ..... ಕ್ಷಮಿಸಿ ನನ್ನವಳ ಪರಿಚಯ ಮಾಡುವುದೇ ಮರೆತು ಹೋದೆ . ಇವಳ ಹೆಸರು ಸುಶಾಂತಿ . ದೇವರಾಣೆಗೂ ಇದು ಕೇವಲ ಅಂಕಿತನಾಮ . ನನ್ನ ಅತ್ತೆ ಮಾವಂದಿರ ಏಕೈಕ ಪುತ್ರಿ . ಅವರ ಕುಟುಂಬದಲ್ಲಿ ಇವಳ ತಂದೆ ತಾಯಿ ಬಿಟ್ಟು ಬೇರೆ ಎಲ್ಲರಿಗೂ ಗಂಡು ಮಕ್ಕಳು. ಇದರಿಂದಾಗಿ "ಪಾರ್ವತಿಯ " ತರಹ ಇವಳು ಕೂಡ "ಮುದ್ದಿನ ಮನೆಮಗಳು ". " ಆ...

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು...